ಕೇಂದ್ರದ ನಿರ್ಣಯದಂತೆ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್: ಸಚಿವ ಡಾ. ಶರಣಪ್ರಕಾಶ ಪಾಟೀಲ್

Date:

ಕೇಂದ್ರ ಸರ್ಕಾರದ ನಿರ್ಣಯದಂತೆ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಎಸ್‌ಟಿ ಮಂಡಳಿ ಮುಖ್ಯಸ್ಥರು ಹಣಕಾಸು ಸಚಿವರು. ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಅದರಂತೆ ಅನುಷ್ಠಾನ ಮಾಡಲಾಗುತ್ತದೆ. ಜಿಎಸ್‌ಟಿ ಎಲ್ಲವನ್ನು ಕೇಂದ್ರ ಸರಕಾರ ಸಂಗ್ರಹ ಮಾಡುತ್ತದೆ, ಬಳಿಕ ರಾಜ್ಯಗಳಿಗೆ ಹಂಚಿಕೆ ಮಾಡುತ್ತದೆ. ನಾವು ಹೇಗೆ ನೊಟೀಸ್ ಕೊಡಲು ಸಾಧ್ಯ? ಎಲ್ಲ ನಿರ್ಧಾರವನ್ನು ಕೇಂದ್ರ ಸರಕಾರವೇ ಮಾಡಿದೆ ಎಂದು ಅವರು ವಿವರಿಸಿದರು.

ಜಗದೀಪ್ ಧನಕರ್ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆ ವಿಷಯ ಭಾರಿ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ ಎಂದು ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ಉಪರಾಷ್ಟ್ರಪತಿ ಅನಿರೀಕ್ಷಿತ ರಾಜೀನಾಮೆ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಬಿಜೆಪಿ ಆರೋಗ್ಯ ಚೆನ್ನಾಗಿಲ್ಲದಿರುವುದೇ ಇದಕ್ಕೆ ಕಾರಣ. ಬಿಜೆಪಿಯಲ್ಲಿರುವ ಸರ್ವಾಧಿಕಾರ ಧೋರಣೆಯೇ ಜಗದೀಪ್ ಧನಕರ್ ಅವರ ರಾಜೀನಾಮೆಗೆ ಪ್ರಮುಖ ಕಾರಣವಾಗಿದೆ ಎಂದು ಸಚಿವರು ಆರೋಪಿಸಿದರು.

ಇಡೀ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಿದರೆ ಬಿಜೆಪಿಯಲ್ಲಿ ಏನೋ ಸರಿಯಲ್ಲಿ ಎಂಬುದು ಸ್ಪಷ್ಟವಾಗುತ್ತದೆ. ಇಡೀ ಪಕ್ಷ ಇಬ್ಬರ ಕೈಯಲ್ಲಿದೆ. ಸರ್ವಾಧಿಕಾರ ಹೆಚ್ಚಾಗಿರುವುದರಿಂದ ಬೇರೆ ಯಾವ ನಾಯಕರೂ ಮಾತನಾಡುತ್ತಿಲ್ಲ. ಜನರಿಗೆ ಇದು ಗೊತ್ತಾಗುವುದಿಲ್ಲ ಎಂದು ಬಿಜೆಪಿಯವರು ತಿಳಿದುಕೊಂಡಿದ್ದಾರೆ. ಆದರೆ ಇಡೀ ಪ್ರಕರಣದಿಂದ ಬಿಜೆಪಿಯ ಬಣ್ಣ ಸಂಪೂರ್ಣ ಬಯಲಾಗಿದೆ ಎಂದು ಡಾ.ಪಾಟೀಲ್ ದೂರಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿವೇಶನ ಎಂದಾಕ್ಷಣ ಹೆದರಿ ಓಡುವ ಪ್ರಧಾನಿ ಮೋದಿ

ಬಿಜೆಪಿಯಲ್ಲಿ ಪ್ರಜಾಪ್ರಭುತ್ವ, ನೀತಿ-ನಿಯಮಗಳು ಇಲ್ಲ. ಕೇಂದ್ರ ಸರ್ಕಾರ ಕೂಡ ಸಂವಿಧಾನ ಪಾಲನೆ ಮಾಡುತ್ತಿಲ್ಲ. ಸರ್ಕಾರವನ್ನು ಮುನ್ನಡೆಸುತ್ತಿರುವವರು ಇದುವರೆಗೂ ಒಂದಾದರೂ ಸುದ್ದಿಗೋಷ್ಠಿ ಮಾಡಿದ್ದಾರಾ? ಏಕಪಕ್ಷೀಯ ನಿರ್ಧಾರಗಳೇ ಹೆಚ್ಚಾಗಿ ತೆಗೆದುಕೊಳ್ಳಲಾಗುತ್ತದೆ. ಇಂಥ ಅಪಸವ್ಯಗಳಿಂದಲೇ ಬಿಜೆಪಿಯಲ್ಲಿ ಅನಾರೋಗ್ಯ ಪರಿಸ್ಥಿತಿ ಇದೆ ಎಂದು ಸಚಿವರು ಟೀಕಿಸಿದರು.

ಗ್ಯಾರಂಟಿಗಳಿಂದ ಹೆಚ್ಚಾದ ತಲಾ ಆದಾಯ

ನಮ್ಮ ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದಲ್ಲಿ ತಲಾ ಆದಾಯ ಹೆಚ್ಚಾಗಿದೆ. ನಾವೀಗ ದೇಶಕ್ಕೆ ನಂಬರ್ ಒನ್ ಸ್ಥಾನದಲ್ಲಿದ್ದೇವೆ ಎಂದು ಸಚಿವರು ತಿಳಿಸಿದರು.

50 ಸಾವಿರ ಕೋಟಿ ರೂ. ನೇರವಾಗಿ ಜನರಿಗೆ ತಲುಪುತ್ತಿದೆ. ಕರ್ನಾಟಕದಲ್ಲಿ ಜನಸ್ನೇಹಿ ಸರಕಾರವಿದೆ. ಜನೋಪಯೋಗಿ ಆರ್ಥಿಕ ನೀತಿಗಳಿಂದ ಸುಧಾರಣೆಯಾಗುತ್ತಿದೆ. ನಮ್ಮ ಕಾಂಗ್ರೆಸ್ ಅಧಿಕಾರದಲ್ಲಿ ಭೂ ಸುಧಾರಣಾ ಕಾಯಿದೆ ಸೇರಿದಂತೆ ಒಳ್ಳೊಳ್ಳೆ ಯೋಜನೆಗಳು ಅನುಷ್ಠಾನಕ್ಕೆ ಬಂದಿವೆ. ಇದು ತಲಾದಾಯ ಹೆಚ್ಚಳಕ್ಕೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕಾರಣವಾಗಿದೆ ಎಂದು ಡಾ.ಪಾಟೀಲ್ ತಿಳಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...