ಜಿಎಸ್‌ಟಿ ಕಡಿತ- ರಾಜ್ಯಗಳಿಗೆ ಹೊರೆ: ಮೋದಿಗೆ ಸಿದ್ದರಾಮಯ್ಯ ಪತ್ರ

Date:

ಇತ್ತೀಚೆಗೆ ಕೇಂದ್ರ ಸರ್ಕಾರವು ಜಿಎಸ್‌ಟಿ ದರ ಪತಿಷ್ಕರಣೆ ನಡೆಸಿದೆ. ಹಲವು ವಸ್ತುಗಳ ಮೇಲಿನ ತೆರಿಗೆ ಪ್ರಮಾಣವನ್ನು ಕಡಿತಗೊಳಿಸಿದೆ. ಆದರೆ, ಜಿಎಸ್‌ಟಿ ದರ ಕಡಿತದ ಹೊರೆಯನ್ನು ಕೇಂದ್ರ ಸರ್ಕಾರವು ರಾಜ್ಯಗಳ ಮೇಲೆ‌ ಹೇರಿದೆ. ಇದರಿಂದ, ರಾಜ್ಯಗಳ ಆರ್ಥಿಕತೆ ಮೇಲೆ ಗಂಭೀರ‌ ಪರಿಣಾಮ ಬೀರಲಿದೆ ಎಂದು ಹಲವು ರಾಜ್ಯಗಳು ಕಳವಳ ವ್ಯಕ್ಯಪಡಿಸಿವೆ. ರಾಜ್ಯಗಳ ಮೇಲಾಗುವ ಹೊರೆಯನ್ನು‌ ತಗ್ಗಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿವೆ.

ಜಿಎಸ್‌ಟಿ ಕಡಿತದ ಹೊರೆಯು ರಾಜ್ಯಗಳ ಮೇಲೆ‌ ಬೀಳಲಿದೆ. ಪರಿಣಾಮ, ಕರ್ನಾಟಕಕ್ಕೆ‌ 18,500 ಕೋಟಿ ರೂ. ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಈ ಹಿಂದೆಯೇ ಹೇಳಿದ್ದರು. ಜಿಎಸ್​​ಟಿ ದರ ಕಡಿತವನ್ನು ಖಂಡಿಸಿದ್ದರು. ಇದೀಗ, ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಸೆಸ್‌ನಿಂದ ಸಂಗ್ರಹವಾಗುವ ಆದಾಯದಲ್ಲಿ 50% ಹಣವನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ತಾವು ಬರೆದ ಪತ್ರದ ಚಿತ್ರಗಳನ್ನು ಸಾಮಾಜಿಕ‌ಜಾಲತಾಣದಲ್ಲಿ‌ ಹಂಚಿಕೊಂಡಿರುವ ಸಿದ್ದರಾಮಯ್ಯ, “ಜಿಎಸ್​​ಟಿ ದರ ಕಡಿತದಿಂದ ರಾಜ್ಯಗಳ ಆದಾಯಕ್ಕೆ ನಷ್ಟ ಉಂಟಾಗಿದೆ. GST ಕೌನ್ಸಿಲ್ ಸಭೆಯಲ್ಲಿ ನಾಗರಿಕರ ಹೊರೆ ಕಡಿಮೆ ಮಾಡಲು ರಾಜ್ಯಗಳು ಬೆಂಬಲ ಸೂಚಿಸಿವೆ. ಆದರೆ, ದೇಶದ GST ಸಂಗ್ರಹದಲ್ಲಿ ಭಾರಿ ಕುಸಿತ ಕಂಡಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ವರ್ಷ, 2024-25ರ ನವೆಂಬರ್‌ನಲ್ಲಿ GST 9.3% ಬೆಳವಣಿಗೆ ಆಗಿತ್ತು. 2025-26ರ ನವಂಬರ್‌ನಲ್ಲಿ GST ಸಂಗ್ರಹದಲ್ಲಿ 2% ಕುಸಿತವಾಗಿದೆ. ನಿವ್ವಳ ದೇಶೀಯ GST ಬೆಳವಣಿಗೆ ದರ ಇಳಿಕೆ ಕಂಡಿದೆ. ಜಿಎಸ್‌ಟಿ ದರ ಕಡಿತದ ಬಳಿಕ 3 ತಿಂಗಳಲ್ಲಿ 1.7% ಮಾತ್ರ ಬೆಳವಣಿಗೆ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 8.9% ಬೆಳವಣಿಗೆ ಇತ್ತು. ಇದರಿಂದ ಕರ್ನಾಟಕದ ಬೊಕ್ಕಸಕ್ಕೆ 18,500 ಕೋಟಿ ರೂ. ನಷ್ಟವಾಗಿದೆ” ಎಂದು ವಿವರಿಸಿದ್ದಾರೆ.

“ಈ ವರ್ಷ, ಕರ್ನಾಕಟಕ್ಕೆ 9,000 ಕೋಟಿಗಳ ಆದಾಯ ಕೊರತೆ ಸಾಧ್ಯತೆ ಇದೆ. ವಿಲೀನಗೊಳಿಸದಿರುವಿಕೆಯಿಂದ 9,500 ಕೋಟಿ ರೂ. ನಷ್ಟವಾಗಲಿದೆ. ಈ ನಷ್ಟವನ್ನು ಕೇಂದ್ರವು ರಾಜ್ಯಗಳಿಗೆ ಸರಿದೂಗಿಸಬೇಕು. ಪಾನ್ ಮಸಾಲಾ ಸೆಸ್ ಆದಾಯವನ್ನು 50:50 ಆಧಾರದ ಮೇಲೆ ರಾಜ್ಯಗಳೊಂದಿಗೆ ಹಂಚಿಕೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...