ಮೈಸೂರು | ಸಿಎಂ ಸಿದ್ದರಾಮಯ್ಯ ಪರ ಜಿಟಿಡಿ ಅಬ್ಬರ; ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ

Date:

ಆಪಾದಿತ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿರುವ ಬಿಜೆಪಿ-ಜೆಡಿಎಸ್ ನಾಯಕರಿಗೆ ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ, ಶಾಸಕ ಜಿ ಟಿ ದೇವೇಗೌಡ ಟಾಂಗ್ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟಿಂಗ್‌ ಮಾಡುವ ಮೂಲಕ ಅಬ್ಬರಿಸಿದ್ದಾರೆ.

ಮೂಸೂರಿನಲ್ಲಿ ನಡೆದ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಜಿ.ಡಿ ದೇವೇಗೌಡ, “ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ. ರಾಜೀನಾಮೆ ಕೋಡೋದೆ ಆದರೆ, ಎಫ್ಐಆರ್ ಆಗಿರೋ ಎಲ್ಲ ನಾಯಕರು ಕೊಡಲಿ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯೂ ರಾಜೀನಾಮೆ ಕೊಡಲಿ” ಎಂದಿದ್ದಾರೆ. ತಮ್ಮದೇ ಪಕ್ಷದ ಅಧ್ಯಕ್ಷ ಕುಮಾರಸ್ವಾಮಿ ವಿರುದ್ಧವೇ ಗುಡುಗಿದ್ದಾರೆ

“ಎಲ್ಲರು ಗಾಜಿನ ಮನೆಯಲ್ಲಿ ಕೂತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದೆಯಾ? ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡವಾ? ಕುಮಾರಸ್ವಾಮಿಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ? 136 ಸ್ಥಾನ ಗೆದ್ದು ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ?” ಎಂದು ಅಬ್ಬರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ಅತ್ಯಾಚಾರ, ಕೊಲೆ ಪ್ರಕರಣವನ್ನು ಮೂರು ತಿಂಗಳು ಮಾಧ್ಯಮಗಳಲ್ಲಿ ತೋರಿಸಲಾಗುತ್ತದೆ. ಒಂದು ಎಫ್ಐಆರ್‌ನ ಎಷ್ಟು ದಿನ ತೋರಿಸುತ್ತಿರಾ? ಯಾರ ಯಾರ ಮೇಲೆ ಎಫ್‌ಐಆರ್ ಆಗಿದೆ. ಎಲ್ಲರೂ ರಾಜೀನಾಮೆ ಕೊಡಿ” ಎಂದು ಬಿಜೆಪಿ-ಜೆಡಿಎಸ್‌ ನಾಯಕರಿಗೆ ಸವಾಲು ಹಾಕಿದ್ದಾರೆ.

ಜಿಟಿ ದೇವೇಗೌಡರ ಭಾಷಣ ಕಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸೇರಿದಂತೆ ಕಾಂಗ್ರೆಸ್‌ ಸಚಿವರು, ಶಾಸಕರೇ ಆಶ್ಚರ್ಯಚಕಿತರಾದರು. ಭಾಷಣ ಮುಗಿಸಿ ತಮ್ಮ ಸ್ಥಾನಕ್ಕೆ ತೆರಳಿದ ಜಿ.ಟಿ ದೇವೇಗೌಡರಿಗೆ ಶಾಸಕ ರಮೇಶ್ ಬಂಡೀಸಿದ್ದೇಗೌಡ, ತನ್ವೀರ್ ಸೇಠ್‌ ಎದ್ದು ನಿಂತು ಗೌರವ ಸಲ್ಲಿಸಿದರು. ಸಚಿವ ಹೆಚ್.ಕೆ ಪಾಟೀಲ್, ಕೆ ವೆಂಕಟೇಶ್‌ ಹಸ್ತಲಾಘವ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...