ಬೆಲೆ ಏರಿಕೆಯಿಂದ ತತ್ತರಿಸಿದ ಜನರ ನೆರವಿಗಾಗಿ ಗ್ಯಾರಂಟಿಗಳನ್ನು ತರಬೇಕಾಯ್ತು: ದಿನೇಶ್ ಗುಂಡೂರಾವ್

Date:

  • ಬಿಜೆಪಿ ವಿರುದ್ಧ ಹರಿಹಾಯ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
  • ಜನಸಾಮಾನ್ಯರ ಹೊರೆ ಇಳಿಸಲು ತಂದ ಯೋಜನೆ ಕಾಂಗ್ರೆಸ್ ಗ್ಯಾರಂಟಿ

ಬಿಜೆಪಿ ಸರ್ಕಾರದ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ನೆರವಾಗುವ ಸಲುವಾಗಿಯೇ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕಾಯ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಉಚಿತ ಅಕ್ಕಿ ಹಂಚಿಕೆ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಸರ್ಕಾರದ ನಡೆ ಖಂಡಿಸಿದ ಅವರು, “ಕೇಂದ್ರ ಸರ್ಕಾರ ನಮಗೆ ಸಹಕಾರ ಕೊಡಲಿ, ಬಿಡಲಿ ನಾವಂತೂ ನಮ್ಮ ಯೋಜನೆಗಳನ್ನು ಜನರಿಗೆ ತಲುಪಿಸುತ್ತೇವೆ” ಎಂದರು.

ಈ ವಿಚಾರವನ್ನು ಟ್ವೀಟ್ ಮೂಲಕ ಹಂಚಿಕೊಂಡಿರುವ ಅವರು, “ಐದು ಗ್ಯಾರಂಟಿಗಳಿಂದ ಸರ್ಕಾರದ ಮೇಲೆ ಸಾಕಷ್ಟು ಹೊರ ಆಗುತ್ತಿದ್ದರೂ, ರಾಜ್ಯದ ಜನಸಾಮಾನ್ಯರ ಹೊರೆ ಇಳಿಯಲಿದೆ” ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಬಿಜೆಪಿ ಸರ್ಕಾರದ ತಪ್ಪು ಆರ್ಥಿಕ ನೀತಿಗಳಿಂದ ಬೆಲೆ ಏರಿಕೆ ಬಿಸಿ ಜನಸಾಮಾನ್ಯನಿಗೆ ತಟ್ಟಿದೆ. ಜನರ ಮೇಲಾಗಿರುವ ಬೆಲೆ ಏರಿಕೆಯ ಹೊರೆ ಕಡಿಮೆ ಮಾಡಲೆಂದೇ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನ ತರಬೇಕಾಯ್ತು” ಎಂದು ಅವರು ಹೇಳಿಕೊಂಡಿದ್ದಾರೆ.

ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮಹಿಳೆಯೋರ್ಯೊವರು ಅಕ್ಕಿ ಬೇಳೆ ಕಾಳುಗಳ ಬೆಲೆ ಏರಿಕೆ ಕಡಿಮೆ ಮಾಡಿ ಎಂದು ಮನವಿ ಮಾಡಿದ್ದರು. ಮಹಿಳೆಯ ವಿಡಿಯೋವನ್ನ ಟ್ವೀಟ್ ಮಾಡಿದ್ದ ಬಿಜೆಪಿ ಸರ್ಕಾರದ ವಿರುದ್ಧ ಮಹಿಳೆಯರು ತಿರುಗಿ ಬಿದ್ದಿದ್ದಾರೆ ಎಂದು ಆರೋಪಿಸಿತ್ತು.

ಬಿಜೆಪಿ ಟ್ವೀಟ್‌ಗೆ ತಿರುಗೇಟು ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬೆಲೆ ಏರಿಕೆ ಕೇಂದ್ರ ಬಿಜೆಪಿ ಸರ್ಕಾರದ ಕುರುಡು ಆರ್ಥಿಕ ನೀತಿಗಳಿಂದ ಆಗಿರುವುದು. ಬೆಲೆ ಏರಿಕೆಗೆ ನರೇಂದ್ರ ಮೋದಿಯವರಲ್ಲದೇ ಬೇರೆ ಯಾರು ಕಾರಣ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಗೆ ಆತ್ಮಸಾಕ್ಷಿಯಿದ್ದರೆ ಬೆಲೆ ಏರಿಕೆಗೆ ಯಾರು ಕಾರಣ ಎಂದು ತಮ್ಮನ್ನ ತಾವು ಪ್ರಶ್ನಿಸಿಕೊಳ್ಳಲಿ ಎಂದಿದ್ದಾರೆ.

ಜನಸಾಮಾನ್ಯರಿಗೆ ನೇರವಾಗಿ ಬಿಸಿ ತಟ್ಟುವಂತಹ ನಾಲ್ಕು ಉತ್ಪನ್ನಗಳ ಬೆಲೆ ಏರಿಕೆಯ ಲಿಸ್ಟ್ ಟ್ವೀಟ್ ಮಾಡಿರುವ ಗುಂಡೂರಾವ್ ಇದಕ್ಕೆ ಯಾರು ಕಾರಣ ಎಂದು ಪ್ರಶ್ನಿಸಿದ್ದಾರೆ. “65 ರೂ ಇದ್ದ ಪೆಟ್ರೋಲ್ 103 ಆಯ್ತು, 50 ರೂ ಇದ್ದ ಡಿಸೇಲ್ ಬೆಲೆ 90 ರೂಪಾಯಿಗೆ ಏರಿಸಿದ್ರು. 80 ರೂಪಾಯಿ ಇದ್ದ ಅಡುಗೆ ಎಣ್ಣೆ 170ಕ್ಕೆ, 400 ರೂ ಇದ್ದ ಸಿಲೆಂಡರ್ ಗ್ಯಾಸ್ 1150 ರೂಗೆ ಏರಿಸಿದ್ದು ನಾವಾ? ಮೋದಿಯವರಾ?” ಎಂದು ಬಿಜೆಪಿಯನ್ನ ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ; ಕೇಂದ್ರ ಸರ್ಕಾರವನ್ನು ದೂರುವುದು ಸರಿಯಲ್ಲ: ಬಿಎಸ್‌ವೈ

ಇಷ್ಟೊಂದು ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯನ ಹೊರ ಇಳಿಸಲೆಂದೇ ಕಾಂಗ್ರೆಸ್ ಸರ್ಕಾರ ಗೃಹ ಲಕ್ಷ್ಮೀ, ಅನ್ನಭಾಗ್ಯ, ಗೃಹ ಜ್ಯೋತಿಯಂಥ ಕಾರ್ಯಕ್ರಮಗಳನ್ನು ತರಬೇಕಾಯ್ತು ಎಂದು ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದಾರೆ. ಐದು ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆಯಾಗಬಹುದು. ಆದರೆ, ಜನರನ್ನು ಬೆಲೆ ಏರಿಕೆಯಿಂದ ರಕ್ಷಿಸುವುದು ಮುಖ್ಯವಾಗಿದೆ ಎಂದು ಗಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮಹಿಳೆಯರು ಬಿಜೆಪಿ ವಿರುದ್ಧ ತಿರುಗಿಬಿದ್ದು ಫಲಿತಾಂಶವನ್ನು ಕೊಟ್ಟಿದ್ದಾರೆ. ಕರ್ನಾಟಕ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಬೆಲೆ ಏರಿಕೆ ವಿರುದ್ಧ ಮಹಿಳೆಯರ ಸಿಟ್ಟು ಸೆಡವು ಸ್ಪಷ್ಟವಾಗಿ ಕಾಣಿಸುತ್ತದೆ. ಹೀಗಿರುವಾಗ ಬಿಜೆಪಿ ಆಕಾಶಕ್ಕೆ ಉಗುಳುವ ಮೂರ್ಖತನ್ನ ಏಕೆ ಮಾಡುತ್ತಿದೆ ಎಂದು ಗುಂಡೂರಾವ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...