ಗುಜರಾತ್ ಬಿಜೆಪಿಯಲ್ಲಿ ಪಕ್ಷಪಾತ, ಭ್ರಷ್ಟಾಚಾರ ಆರೋಪಗಳ ಗದ್ದಲ; ಆಂತರಿಕ ಕಲಹ

Date:

ಒಂದು ಕಾಲದಲ್ಲಿ ಶಿಸ್ತುಬದ್ಧತೆ ಹೆಸರುವಾಸಿಯಾಗಿದ್ದ ಪ್ರಧಾನಿ ಮೋದಿ ಅವರ ತವರು ಗುಜರಾತ್‌ನ ಬಿಜೆಪಿ ಈಗ ಪಕ್ಷಪಾತ, ಭ್ರಷ್ಟಾಚಾರ, ಆಂತರಿಕ ಕಲಹಗಳಿಂದಲೇ ಸುದ್ದಿಯಾಗುತ್ತಿದೆ. ಯಾವ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ಅನ್ನು ದೂಷಿಸುತ್ತಲೇ ಗುಜರಾತ್‌ನಲ್ಲಿ ಬಿಜೆಪಿ ಬೆಳೆಯಿತೋ, ಆ ಎಲ್ಲ ವಿಚಾರಗಳು ಈಗ ಬಿಜೆಪಿಯಲ್ಲೇ ಕಾಣಿಸಿಕೊಳ್ಳುತ್ತಿವೆ ಎಂದು ವಿಮರ್ಶಕರು ಹೇಳುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಗುಜರಾತ್ ಬಿಜೆಪಿ ಹಲವಾರು ವಿವಾದಗಳ ತಾಣವಾಗಿ ಮಾರ್ಪಟ್ಟಿದೆ.

ಇತ್ತೀಚೆಗೆ, ಗುಜರಾತ್‌ನ ರಾಜ್‌ಕೋಟ್‌ನಿಂದ ಬಿಜೆಪಿ ನಾಯಕರಿಗೆ ಅನಾಮಧೇಯ ಪತ್ರವೊಂದನ್ನು ಬರೆಯಲಾಗಿದೆ. ಅದರಲ್ಲಿ, ಬಿಜೆಪಿ ಸಂಘಟನಾ ಉಸ್ತುವಾರಿ ಧವಲ್ ಡೇವ್ ಅವರು ಪಕ್ಷದ ಸ್ಥಾನಗಳನ್ನು ಹಂಚುವಲ್ಲಿ ಪಕ್ಷಪಾತ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆ ಪತ್ರವು ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯವನ್ನು ಮತ್ತಷ್ಟು ತೀವ್ರಗೊಳಿಸಿದೆ.

ಪತ್ರದ ಪ್ರಕಾರ, ಡೇವ್ ಅವರು ಪಕ್ಷದ ಹುದ್ದೆಗಳಿಗೆ ಪದಾಧಿಕಾರಿಗಳನ್ನು ನೇಮಿಸುವಾಗ ತಮ್ಮೊಂದಿಗೆ ನಿಕಟ ಸಂಬಂಧ ಹೊಂದಿರುವವರಿಗೆ ಹೆಚ್ಚು ಒತ್ತುಕೊಟ್ಟಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿಯ ಸೂಚನೆಯ ಮೇರೆಗೆ ರಾಜ್ಯ ಘಟಕದ ಉಪಾಧ್ಯಕ್ಷ ಭರತ್ ಬೋಗ್ರಾ ವಿರುದ್ಧ ಡೇವ್ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ, ಅಮ್ರೇಲಿಯಿಂದಲೂ ಒಂದು ಪತ್ರ ಬರೆಯಲಾಗಿತ್ತು. ಅದರಲ್ಲಿ, ಹಾಲಿ ಶಾಸಕ ಕೌಶಿಕ್ ವೆಕಾರಿಯಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಲಾಗಿತ್ತು.

ಒಂದೆಡೆ ಅನಾಮಧೇಯ ಪತ್ರಗಳು ಸದ್ದು ಮಾಡುತ್ತಿದ್ದರೆ, ಮತ್ತೊಂದೆಡೆ, ಪಕ್ಷವು 500-600 ಕೋಟಿ ರೂ.ಗಳ ಪೊಂಝಿ ಸ್ಕೀಮ್ ಹಗರಣದ ಆರೋಪವನ್ನು ಎದುರಿಸುತ್ತಿದೆ. ಹಗರಣದಲ್ಲಿ ಸಬರ್ಕಾಂತದ ಬಿಜೆಪಿ ನಾಯಕ ಭೂಪೇಂದ್ರಸಿಂಹ ಝಲಾ ಅವರನ್ನು ಮಾಸ್ಟರ್ ಮೈಂಡ್ ಎಂದು ಹೇಳಲಾಗಿದ್ದು, ಅವರನ್ನು ಸಿಐಡಿ ಅಪರಾಧ ವಿಭಾಗವು ಬಂಧಿಸಿದೆ.

ಈ ವರದಿ ಓದಿದ್ದೀರಾ?: ಟ್ರಂಪ್ ಟೀಮ್‌ನಿಂದ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ ಔಟ್ ಆಗಿದ್ದೇಕೆ?

ಈ ಬೆಳವಣಿಗೆಗಳ ನಡುವೆ, ಬಿಜೆಪಿಯೊಳಗಿನ ಆಂತರಿಕ ಭಿನ್ನಾಭಿಪ್ರಾಯ ಹೆಚ್ಚುತ್ತಿದೆ. ನಾಯಕರನ್ನು ನೇಮಿಸುವಲ್ಲಿ ಅರ್ಹತೆಯ ಮಾನದಂಡಗಳನ್ನು ಕಡೆಗಣಿಸಿ, ಸ್ವಜನ ಪಕ್ಷಪಾತ ಹೆಚ್ಚುತ್ತಿದೆ ಎಂದು ಪಕ್ಷದ ಕಾರ್ಯಕರ್ತರು ಹತಾಶೆ ವ್ಯಕ್ತಪಡಿಸಿದ್ದಾರೆ. ಪಕ್ಷದ ಸಿದ್ಧಾಂತ ಅಥವಾ ತಳಮಟ್ಟದ ಕೆಲಸದಲ್ಲಿ ತೊಡಗಿರುವುದಕ್ಕಿಂತ, ಉನ್ನತ ನಾಯಕತ್ವಕ್ಕೆ ನಿಷ್ಠರಾಗಿರುವುದೇ ರಾಜಕೀಯ ಪ್ರಗತಿಯ ಮಾನದಂಡವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತವಾಗುತ್ತಿದೆ.

ಆಂತರಿಕ ಕಲಹದ ಪರಿಣಾಮವು ಚುನಾವಣಾ ಹಿನ್ನಡೆಗಳಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ. ವಿಧಾನಸಭಾ ಚುನಾವಣೆಯಿಂದ ಸ್ಥಳೀಯ ಸಂಸ್ಥೆಗಳ ಸ್ಪರ್ಧೆಗಳವರೆಗೆ ವಿವಿಧ ಚುನಾವಣೆಗಳಲ್ಲಿ ಬಂಡಾಯ ನಾಯಕರು ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಈ ಬೆಳೆಯುತ್ತಿರುವ ಅಶಿಸ್ತು ಬಿಜೆಪಿಯ ಸಾಂಪ್ರದಾಯಿಕ ಸಂಘಟನಾ ಏಕತೆ ಮತ್ತು ಸೈದ್ಧಾಂತಿಕ ಬದ್ಧತೆಯಿಂದ ವಿಮುಖಗೊಳ್ಳುತ್ತಿರುವುದನ್ನು ಸೂಚಿಸುತ್ತದೆ. ಪಕ್ಷದಲ್ಲಿ ಗುಂಪುಗಾರಿಕೆ ಹೆಚ್ಚುತ್ತಿದ್ದು, ಪಕ್ಷದ ಬೆಂಬಲದ ನೆಲೆಯು ಕುಸಿಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...