ಗುಜರಾತ್ ಉಪಚುನಾವಣೆ | ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಶಕ್ತಿಸಿನ್ಹಾ ಗೋಹಿಲ್ ರಾಜೀನಾಮೆ

Date:

ಗುಜರಾತ್‌ನ ಕಾಡಿ ಮತ್ತು ವಿಸಾವದರ್ ಉಪಚುನಾವಣೆ ಫಲಿತಾಂಶಗಳು ಪ್ರಕಟವಾದ ಕೇವಲ ನಾಲ್ಕು ಗಂಟೆಗಳ ನಂತರ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಶಕ್ತಿಸಿನ್ಹಾ ಗೋಹಿಲ್ ರಾಜೀನಾಮೆ ನೀಡಿದ್ದಾರೆ. ಉಪಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ತನ್ನ ಸ್ಥಾನವನ್ನು ತ್ಯಜಿಸಿದ್ದಾರೆ. ಈ ಬೆನ್ನಲ್ಲೇ ಹೊಸ ಅಧ್ಯಕ್ಷರನ್ನು ನೇಮಿಸುವವರೆಗೂ ಡ್ಯಾನಿಲಿಮ್ಡಾ ಶಾಸಕ ಶೈಲೇಶ್ ಪರ್ಮಾರ್ ಅವರನ್ನು ಮಧ್ಯಂತರ ಅಧ್ಯಕ್ಷರಾಗಿ ಘೋಷಿಸಲಾಗಿದೆ.

ಗುಜರಾತ್‌ನ ಕಾಡಿ ಮತ್ತು ವಿಸಾವದರ್ ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಕಾಡಿಯಲ್ಲಿ, ಬಿಜೆಪಿಯ ರಾಜೇಂದ್ರ ಚಾವ್ಡಾ ಗೆದ್ದಿದ್ದು, ವಿಸಾವದರ್‌ನಲ್ಲಿ, ಎಎಪಿಯ ಗೋಪಾಲ್ ಇಟಾಲಿಯಾ 75,942 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕೊಡಗು | ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯವಿಲ್ಲ: ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಾದ ಬಳಿಕ ನೈತಿಕ ಹೊಣೆಗಾರಿಕೆಯನ್ನು ಹೊತ್ತು ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸೋಮವಾರ ಅಹಮದಾಬಾದ್‌ನ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “30 ವರ್ಷಗಳ ಕಾಲ ಅಧಿಕಾರದಿಂದ ಹೊರಗಿದ್ದರೂ, ನಮ್ಮ ಕಾರ್ಯಕರ್ತರು ನಿರಂತರವಾಗಿ ಪ್ರಯತ್ನಿಸಿದ್ದಾರೆ. ಕಳಪೆ ಫಲಿತಾಂಶಗಳ ನೈತಿಕ ಜವಾಬ್ದಾರಿಯನ್ನು ನಾನು ಸ್ವೀಕರಿಸುತ್ತೇನೆ ಮತ್ತು ರಾಜೀನಾಮೆ ನೀಡಿದ್ದೇನೆ. ನಾನು ಈಗಾಗಲೇ ನನ್ನ ರಾಜೀನಾಮೆಯನ್ನು ರಾಷ್ಟ್ರೀಯ ಅಧ್ಯಕ್ಷರಿಗೆ ಕಳುಹಿಸಿದ್ದೇನೆ” ಎಂದು ಹೇಳಿದ್ದಾರೆ.

ಇನ್ನು ಜಿಲ್ಲಾಧ್ಯಕ್ಷರ ನೇಮಕ ಸಂಬಂಧ ಆಂತರಿಕ ರಾಜಕೀಯದಿಂದ ರಾಜೀನಾಮೆ ನೀಡಿದ್ದಾರೆ ಎಂಬ ಊಹಾಪೋಹಗಳನ್ನು ತಳ್ಳಿಹಾಕಿದ ಗೋಹಿಲ್, “ಪ್ರತಿಯೊಬ್ಬ ಕಾರ್ಯಕರ್ತರ ಮಾತುಗಳನ್ನು ಕೇಳಿದ ನಂತರ ಜಿಲ್ಲಾ ಅಧ್ಯಕ್ಷರ ನೇಮಕವನ್ನು ಮಾಡಲಾಗಿದೆ. ಎಐಸಿಸಿ ಒಮ್ಮತದ ಆಧಾರದ ಮೇಲೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ನಾನು ನನ್ನ ಮನವೊಲಿಸಬೇಕೆಂದು ಕಾಯಲಿಲ್ಲ. ನಾನು ಜವಾಬ್ದಾರಿಯನ್ನು ತೆಗೆದುಕೊಂಡು ರಾಜೀನಾಮೆ ನೀಡಿದ್ದೇನೆ. ಇದು ಕಾಂಗ್ರೆಸ್ ಸಂಪ್ರದಾಯ. ನಾನು ಯುದ್ಧಭೂಮಿಯನ್ನು ಬಿಡುವುದಿಲ್ಲ, ನಾನು ನಿಷ್ಠಾವಂತ ಸೈನಿಕನಾಗಿರುತ್ತೇನೆ. ಪಕ್ಷವು ಕಾರ್ಯಕರ್ತರನ್ನು ನಾಯಕರನ್ನಾಗಿ ಮಾಡುತ್ತದೆ. ನಾನು ಅವರಲ್ಲಿ ಒಬ್ಬನಾಗಿದ್ದೇನೆ. ನಾನೆಂದಿಗೂ ದ್ವಿಮುಖ ರಾಜಕೀಯ ಮಾಡಿಲ್ಲ” ಎಂದು ಹೇಳಿದರು.

ಶಕ್ತಿಸಿನ್ಹಾ ಗೋಹಿಲ್ ಅಧಿಕಾರ ವಹಿಸಿಕೊಂಡ ಕೇವಲ ಎರಡು ವರ್ಷಗಳಲ್ಲಿ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ. 2022ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ಜಗದೀಶ್ ಠಾಕೂರ್ ರಾಜೀನಾಮೆ ನೀಡಿದ್ದು ಬಳಿಕ ಸಿನ್ಹಾ 2023ರ ಜೂನ್ ತಿಂಗಳಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. 1995ರಿಂದ ಗುಜರಾತ್‌ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...