ಗುಜರಾತ್ | 24 ಗಂಟೆಗಳಲ್ಲಿ ನಾಲ್ಕು ದಲಿತ ದೌರ್ಜನ್ಯ ಪ್ರಕರಣ; ಇದು ಅಮೃತಕಾಲವೇ? ಎಂದ ಜಿಗ್ನೇಶ್ ಮೇವಾನಿ

Date:

  • ಚರಂಡಿ ಸ್ವಚ್ಛಗೊಳಿಸುವ ವೇಳೆ ಇಬ್ಬರ ಸಾವು
  • ದಲಿತ ಯುವತಿಯ ಮೇಲೆ ಅತ್ಯಚಾರ, ಕೊಲೆ

ಕಳೆದ 24 ಗಂಟೆಗಳ ಅವಧಿಯೊಳಗೆ ಗುಜರಾತ್‌ ಒಂದರಲ್ಲೇ ನಾಲ್ವರು ದಲಿತರ ಮೇಲೆ ದೌರ್ಜನ್ಯ ಎಸಗಿರುವ ಘಟನೆಗಳು ಜರುಗಿವೆ. ಈ ಕುರಿತು ಕಳವಳ ವ್ಯಕ್ತಪಡಿಸಿರುವ ಶಾಸಕ ಜಿಗ್ನೇಶ್ ಮೇವಾನಿ ಅವರು, “ಇದು ಅಮೃತಕಾಲವೇ?” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಗುಜರಾತಿನಲ್ಲಿ ಕೆಲವು ಪುಂಡರು ದಲಿತ ವ್ಯಕ್ತಿಗೆ ಥಳಿಸುತ್ತಿರುವ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಜಿಗ್ನೇಶ್ ಮೇವಾನಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ‘ಅಮೃತಕಾಲ’ದ ಹೇಳಿಕೆಗೆ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಜಿಗ್ನೇಶ್ ಮೇವಾನಿ, “ಕಳೆದ 24 ಗಂಟೆಗಳಲ್ಲಿಯೇ ಗುಜರಾತ್ ನಾಲ್ಕು ದಲಿತ ದೌರ್ಜನ್ಯ ಪ್ರಕರಣಗಳಿಗೆ ಸಾಕ್ಷಿಯಾಗಿದೆ. ರಾಜಕೋಟ್‌ನಲ್ಲಿ ಚರಂಡಿ ಸ್ವಚ್ಛಗೊಳಿಸಲು ತೆರಳಿ ಇಬ್ಬರು ಬಲಿಯಾದರು, ಮಹಿಸಾಗರ್ ಜಿಲ್ಲೆಯ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಸ್ಥಳೀಯ ಗೂಂಡಾಗಳು ದಲಿತನ ಮೇಲೆ ಹಲ್ಲೆ ನಡೆಸಿರುವ ಮತ್ತೊಂದು ವಿಡಿಯೋ ಇಲ್ಲಿದೆ” ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“24 ಗಂಟೆಗಳ ಅವಧಿಯಲ್ಲಿಯೇ ನಾಲ್ಕು ದಲಿತ ದೌರ್ಜನ್ಯ ಪ್ರಕರಣಗಳು ನಡೆದಿವೆ. ಇದು ಅಮೃತಕಾಲವೇ?” ಎಂದು ವ್ಯಂಗ್ಯವಾಡಿದ್ದಾರೆ.

ಚರಂಡಿ ಸ್ವಚ್ಛಗೊಳಿಸುವ ವೇಳೆ ಇಬ್ಬರ ಸಾವು

ರಾಜ್‌ಕೋಟ್‌ನ ಸಾಮಾಟ್ರ್ ಕೈಗಾರಿಕ ಪ್ರದೇಶದ ಬಳಿ ತುಂಬಾ ಆಳಕ್ಕೆ ಇರುವ ಚರಂಡಿ ಸ್ವಚ್ಛಗೊಳಿಸುವ ವೇಳೆ ಮೆಹುಲ್ ಮೆಹ್ದಾ (24) ಮತ್ತು ಅಫ್ಜಲ್ ಫುಫರ್ (24) ಎಂಬುವವರು ಉಸಿರುಗಟ್ಟಿ ಮಂಗಳವಾರ ಮೃತಪಟ್ಟಿದ್ದಾರೆ.

ಸಾಮ್ರಾಟ್ ಮುಖ್ಯ ರಸ್ತೆಯಲ್ಲಿನ ಒಳಚರಂಡಿಯನ್ನು ‘ಜೆಟ್ಟಿಂಗ್’ ಯಂತ್ರ ಮತ್ತು ಯಾಂತ್ರೀಕೃತ ‘ಕ್ರೇನ್‌’ನಿಂದ ಸ್ವಚ್ಛಗೊಳಿಸುವ ವೇಳೆ ಇಬ್ಬರು ದಲಿತ ಕಾರ್ಮಿಕರು ಮೃತರಾಗಿದ್ದಾರೆ. ಈ ಕುರಿತು ತನಿಖೆ ನಡೆಸುತ್ತಿರುವುದಾಗಿ ಗುಜರಾತ್ ಪೊಲೀಸರು ಹೇಳಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...