ಗುಜರಾತ್| ಕೇಂದ್ರ ಸಚಿವರ ವಿರುದ್ಧ ಕ್ಷತ್ರಿಯರ ಬೃಹತ್ ಪ್ರತಿಭಟನೆ; ಬಿಜೆಪಿಗೆ ಮುಗಿಯದ ಸಂಕಷ್ಟ!

Date:

ಕ್ಷತ್ರಿಯ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದ ಕೇಂದ್ರ ಸಚಿವರೂ ಆಗಿರುವ ಬಿಜೆಪಿಯ ಹಿರಿಯ ನಾಯಕ ಪರ್ಷೋತ್ತಮ್‌ ರೂಪಾಲಾ ಅವರ ವಿರುದ್ಧ ಕ್ಷತ್ರಿಯರು ಬೃಹತ್ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಇದರಿಂದಾಗಿ ಬಿಜೆಪಿಗೆ ಗುಜರಾತ್‌ನಲ್ಲಿ ಭಾರೀ ಸಂಕಷ್ಟ ಉಂಟಾಗಿದೆ.

ಪರ್ಷೋತ್ತಮ್‌ ರೂಪಾಲಾ ಅವರ ಉಮೇದುವಾರಿಕೆಯನ್ನು ವಜಾಗೊಳಿಸುವಂತೆ ಒತ್ತಾಯಿಸಿ ಕ್ಷತ್ರಿಯ ಸಮುದಾಯವು ಬೃಹತ್ ಪ್ರತಿಭಟನೆಯನ್ನು ಭಾನುವಾರ ರಾಜ್‌ಕೋಟ್‌ನಲ್ಲಿ ನಡೆಸಿದ್ದು, ಎರಡು ಲಕ್ಷ ಜನರು ಈ ಬಿಜೆಪಿ ಸಚಿವರ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕವಾದ ಏಪ್ರಿಲ್ 19 ರೊಳಗೆ ರೂಪಾಲಾ ಅವರನ್ನು ಪದಚ್ಯುತಗೊಳಿಸುವಂತೆ ಸಮುದಾಯದ ಮುಖಂಡರು ಆಡಳಿತಾರೂಢ ಬಿಜೆಪಿಗೆ ಗಡುವು ನೀಡಿದ್ದಾರೆ. ಅವರನ್ನು ಪದಚ್ಯುತಗೊಳಿಸದಿದ್ದರೆ ನಮ್ಮ ಈ ಪ್ರತಿಭಟನೆ ಇನ್ನಷ್ಟು ತೀವ್ರವಾಗಲಿದೆ ಎಂದು ಎಚ್ಚರಿಕೆಯನ್ನು ಕೂಡಾ ನೀಡಿದ್ದಾರೆ.

ಇದನ್ನು ಓದಿದ್ದೀರಾ?  ಗುಜರಾತ್‌| ಕ್ಷತ್ರಿಯ ಸಮುದಾಯದ ಪ್ರತಿಭಟನೆ; ಬಿಜೆಪಿಯಲ್ಲಿ ಮುಂದುವರಿದ ತಿಕ್ಕಾಟ

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಜಕೋಟ್‌ನ ಅಭ್ಯರ್ಥಿ ಪರ್ಷೋತ್ತಮ್‌ ರೂಪಾಲಾ, “ಹಲವಾರು ರಜಪೂತ ಆಡಳಿತಗಾರರು ಬ್ರಿಟಿಷರಿಗೆ ಸಹಕಾರ ನೀಡಿದ್ದರು” ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಯ ನಂತರ, ಕರ್ಣಿ ಸೇನಾದ ಮುಖ್ಯಸ್ಥ ರಾಜ್ ಶೆಖಾವತ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ರೂಪಾಲಾ ಅವರ ಹೇಳಿಕೆಯು ಕ್ಷತ್ರಿಯ ಸಮುದಾಯವನ್ನು ಕೆರಳಿಸಿದ್ದು ನಿರಂತರವಾಗಿ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ.

ರಾಜ್‌ಕೋಟ್ ಜಿಲ್ಲೆಯ ರತನ್‌ಪುರದಲ್ಲಿ 13 ಎಕರೆ ಕೃಷಿಭೂಮಿಯಲ್ಲಿ ವಿವಿಧ ರಜಪೂತ ಸಂಘಟನೆಗಳನ್ನು ಒಳಗೊಂಡ ಸಮನ್ವಯ ಸಮಿತಿಯು ಮೆಗಾ ರ್‍ಯಾಲಿಯನ್ನು ಆಯೋಜಿಸಿತ್ತು. ಸುಮಾರು ಎರಡು ಲಕ್ಷ ಜನ ಸೇರಿದ್ದರು ಎಂದು ವರದಿಯಾಗಿದೆ. ಕ್ಷತ್ರಿಯ ಸಮುದಾಯಕ್ಕೆ ಸೇರಿದ ಜನರು ಗುಜರಾತ್ ಮತ್ತು ನೆರೆಯ ರಾಜ್ಯಗಳಾದ ರಾಜಸ್ಥಾನ ಮತ್ತು ಮಹಾರಾಷ್ಟ್ರದಿಂದ ಬಂದು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇದನ್ನು ಓದಿದ್ದೀರಾ?  ಗುಜರಾತ್ ಬಿಜೆಪಿಯಲ್ಲಿ ಭಾರೀ ಕಲಹ; ಘರ್ಷಣೆಯಿಂದ ಆಸ್ಪತ್ರೆ ಸೇರಿದ ಕಾರ್ಯಕರ್ತರು

ತನ್ನ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ರೂಪಾಲಾ ಹಲವಾರು ಬಾರಿ ಕ್ಷಮೆಯಾಚಿಸಿದ್ದಾರೆ. ಆದರೆ ಸಮುದಾಯದ ಮುಖಂಡರು ಈ ಕ್ಷಮೆಯನ್ನು ಸ್ವೀಕರಿಸದೆ ಅವರನ್ನು ಪದಚ್ಯುತಗೊಳಿಸುವಂತೆ ಆಗ್ರಹಿಸಿದೆ. ಇತರೆ ಬಿಜೆಪಿ ಮುಖಂಡರೊಂದಿಗಿನ ಮಾತುಕತೆಯೂ ಕೂಡಾ ವಿಫಲವಾಗಿದೆ.

ರೂಪಾಲಾ ಅವರು ಏಪ್ರಿಲ್ 16 ರಂದು ನಾಮಪತ್ರ ಸಲ್ಲಿಸುವ ನಿರೀಕ್ಷೆಯಿದೆ. ರೂಪಾಲಾ ಅವರ ವಿರುದ್ಧ ಕ್ಷತ್ರೀಯರ ಆಕ್ರೋಶದಿಂದಾಗಿ ಆಡಳಿತಾರೂಢ ಬಿಜೆಪಿಯು ಮತ್ತಷ್ಟು ಸಂಕಷ್ಟದಲ್ಲಿ ಸಿಲುಕಿದೆ. ರಾಜಕೋಟ್‌ನಲ್ಲಿ ರೂಪಾಲಾ ಅವರೇ ಸ್ಪರ್ಧಿಸಿದರೆ ಪ್ರಭಾವಿ ಪಾಟಿದಾರ್ ಸಮುದಾಯದ ಕೆಂಗಣ್ಣಿಗೆ ಬಿಜೆಪಿ ಗುರಿಯಾಗಲಿದೆ.

ಗುಜರಾತ್‌ನಲ್ಲಿ 26 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನಾಂಕವಾಗಿದ್ದು, 16 ರಂದು ರೂಪಾಲಾ ನಾಮಪತ್ರ ಸಲ್ಲಿಸುವ ನಿರೀಕ್ಷೆಯಿದೆ. 2002ರಲ್ಲಿ ರೂಪಾಲಾ ಅವರನ್ನು ಸೋಲಿಸಿದ್ದ ಮಾಜಿ ವಿರೋಧ ಪಕ್ಷದ ನಾಯಕ ಪರೇಶ್ ಧನಾನಿ ಅವರನ್ನೇ ಮತ್ತೆ ಕಾಂಗ್ರೆಸ್ ಕಣಕ್ಕಿಳಿಸಿದೆ. ಧನಾನಿ ಪಾಟಿದಾರ್ ಸಮುದಾಯದ ಲೆಯುವಾ ಬಣಕ್ಕೆ ಸೇರಿದವರಾಗಿದ್ದು ರೂಪಾಲಾ ಅವರ ಹೇಳಿಕೆಯಿಂದಾಗಿ ಪಾಟಿದಾರ್ ಸಮುದಾಯದ ಮತಗಳು ಬಿಜೆಪಿ ಕೈಜಾರಿ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...