ಮನರೇಗಾ ಹಗರಣ | ಜಾಮೀನು ಪಡೆದ ಬೆನ್ನಲ್ಲೇ ಗುಜರಾತ್ ಬಿಜೆಪಿ ಸಚಿವರ ಮಗ ಮತ್ತೆ ಬಂಧನ

Date:

ಮನರೇಗಾ ಹಗರಣಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಜಾಮೀನು ಪಡೆದ ತಕ್ಷಣ ಗುಜರಾತ್ ಬಿಜೆಪಿ ಸಚಿವ ಬಚುಭಾಯ್ ಖಬಾದ್ ಅವರ ಪುತ್ರನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಕಳೆದ ತಿಂಗಳು ಬೆಳಕಿಗೆ ಬಂದ 71 ಕೋಟಿ ರೂ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(MGNREGA) ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಗುಜರಾತ್ ರಾಜ್ಯ ಪಂಚಾಯತ್ ಮತ್ತು ಕೃಷಿ ಸಚಿವರ ಪುತ್ರ ಕಿರಣ್ ಖಬಾದ್ ಅವರನ್ನು ಬಂಧಿಸಲಾಗಿತ್ತು.

ಇದನ್ನು ಓದಿದ್ದೀರಾ? ಲೋಕಸಭಾ ಚುನಾವಣೆ | ಮೋದಿ ಕಿ ಗ್ಯಾರಂಟಿ v/s ಕಾಂಗ್ರೆಸ್ ನ್ಯಾಯ್ ಗ್ಯಾರಂಟಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೊದಲ ಎಫ್‌ಐಆರ್‌ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ನಂತರ ಗುರುವಾರ ರಾತ್ರಿ ಕಿರಣ್ ಖಬಾದ್ ಅವರನ್ನು ಬಂಧಿಸಲಾಯಿತು. ದಾಹೋದ್ ಪೊಲೀಸರು ದಾಖಲಿಸಿದ ಹೊಸ ಪ್ರಕರಣದಲ್ಲಿ ಬಂಧಿಸಲಾಗಿದೆ.
ಕಿರಣ್ ಸೇರಿದಂತೆ ಕೆಲವು ಏಜೆನ್ಸಿಗಳು ಮನರೇಗಾ ಅಡಿಯಲ್ಲಿ ಅವರಿಗೆ ನಿಗದಿಪಡಿಸಿದ ಕೆಲಸವನ್ನು ಪೂರ್ಣಗೊಳಿಸದೆ ಸರ್ಕಾರದಿಂದ ಹಣ ಮಾತ್ರ ಪಡೆದಿವೆ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್‌ ಸಿನ್ಹಾ ಭಂಡಾರಿ ಹೇಳಿದರು.

ಮನರೇಗಾ ಅಡಿಯಲ್ಲಿ ದಾಹೋದ್‌ನ ಲಾವೇರಿಯಾ ಗ್ರಾಮದಲ್ಲಿ ಪೂರ್ಣ ಕೆಲಸ ಮಾಡದಿದ್ದರೂ ಏಜೆನ್ಸಿಗಳಿಗೆ 18.41 ಲಕ್ಷ ರೂ.ಗಳನ್ನು ಪಾವತಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಜಿಲ್ಲಾ ಗ್ರಾಮೀಣಾಭಿವೃದ್ಧಿ ಸಂಸ್ಥೆ(ಡಿಆರ್‌ಡಿಎ) ನಡೆಸಿದ ಒಟ್ಟು 71 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಮಂದಿ ವಿರುದ್ಧ ವಂಚನೆ, ನಂಬಿಕೆ ದ್ರೋಹದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಎರಡು ವಾರಗಳ ಹಿಂದೆ ಬಿಜೆಪಿ ಸಚಿವರ ಪುತ್ರ ಕಿರಣ್ ಮತ್ತು ಅವರ ಸಹೋದರ ಬಲವಂತ್ ಅವರನ್ನು ಬಂಧಿಸಲಾಗಿತ್ತು.

ಏಜೆನ್ಸಿಯು 2021 ಮತ್ತು 2024ರ ನಡುವೆ ಮಾಡಬೇಕಾದ ಕೆಲಸವನ್ನು ಪೂರ್ಣಗೊಳಿಸದೆಯೇ ಕೆಲಸ ಪೂರ್ಣವಾಗಿದೆ ಎಂದು ನಕಲಿ ಪ್ರಮಾಣಪತ್ರ, ದಾಖಲೆಗಳನ್ನು ಸಲ್ಲಿಸಿ ಹಣ ಪಡೆದುಕೊಂಡಿದೆ. ಬಲವಂತ್ ಮತ್ತು ಕಿರಣ್ ಈ ಏಜೆನ್ಸಿಯ ಮಾಲೀಕರು. ಅವರಿಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಗುರುವಾರವಷ್ಟೇ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿತ್ತು. ಇದೀಗ ಮತ್ತೆ ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...