ಗುಜರಾತ್‌ SIR | ಮೂರನೇ ಎರಡರಷ್ಟು BLAಗಳು ಬಿಜೆಪಿಗರು!

Date:

ಗುಜರಾತ್‌ನಲ್ಲಿ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ಗಾಗಿ (SIR) ನಿಯೋಜಿಸಲಾದ ಒಟ್ಟು ಬೂತ್ ಮಟ್ಟದ ಏಜೆಂಟ್‌ಗಳಲ್ಲಿ (BLA) ಸುಮಾರು ಮೂರನೇ ಎರಡರಷ್ಟು ಮಂದಿ ಬಿಜೆಪಿ ಕಾರ್ಯಕರ್ತರಾಗಿದ್ದಾರೆ ಎಂದು ಆರ್‌ಟಿಐ ವರದಿಯೊಂದು ಬಹಿರಂಗಪಡಿಸಿದೆ.

ಗುಜರಾತ್‌ನಾದ್ಯಂತ ಒಟ್ಟು 73,169 ಬಿಎಲ್‌ಎಗಳನ್ನು ನಿಯೋಜಿಸಲಾಗಿದೆ. ಅವರಲ್ಲಿ, 49,168 ಜನರು ಬಿಜೆಪಿಗೆ ಸೇರಿದವರಾಗಿದ್ದಾರೆ. 18,057 ಬಿಎಲ್‌ಎಗಳು ಮಾತ್ರವೇ ಕಾಂಗ್ರೆಸ್‌ನವರಿದ್ದರೆ, 5,893 ಮಂದಿ ಎಎಪಿಗೆ ಸೇರಿದವರಾಗಿದ್ದಾರೆ. ಇನ್ನು, ಬಿಎಸ್‌ಪಿಯಿಂದ ಕೇವಲ 49 ಮಂದಿ, ಸಿಪಿಐ(ಎಂ)ನ 25 ಮಂದಿ ಮಾತ್ರವೇ ಇದ್ದಾರೆ. ನ್ಯಾಷನಲ್ ಪೀಪಲ್ಸ್ ಪಾರ್ಟಿಯಿಂದ ಯಾರೊಬ್ಬರೂ ಬಿಎಲ್‌ಎಆಗಿ ನಿಯೋಜನೆಗೊಂಡಿಲ್ಲ ಎಂದು ವರದಿ ವಿವರಿಸಿದೆ.

ಬಿಎಲ್‌ಎಗಳ ನಿಯೋಜನೆಯಲ್ಲಿ ರಾಜಕೀಯ ಅಸಮತೋಲನವು ಎಸ್‌ಐಆರ್ ಪ್ರಕ್ರಿಯೆ ಮತ್ತು ಕರಡು ಪಟ್ಟಿಯ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಜರಾತ್‌ನಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಆರಂಭವಾಯಿತು. ಆ ಸಮಯದಲ್ಲಿ ಸಾವಿರಾರು ವಲಸೆ ಕಾರ್ಮಿಕರು, ಕೂಲಿ ಕೆಲಸ ಮಾಡುವವರು, ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು ತಮ್ಮ ಹಳ್ಳಿಗಳಿಂದ ದೂರವಿದ್ದರು. ಅವರಾರೂ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಇದ್ದವರೂ, ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲಾಗಲಿಲ್ಲ. ಯಾವ ಫಾರ್ಮ್ ಅನ್ನು ಭರ್ತಿ ಮಾಡಬೇಕು? ಯಾವ ದಾಖಲೆಗಳನ್ನು ಲಗತ್ತಿಸಬೇಕು? 2002ರ ಚುನಾವಣಾ ಮ್ಯಾಪಿಂಗ್ಅನ್ನು ಹೇಗೆ ಸಾಬೀತುಪಡಿಸುವುದು? ಎಂಬುದು ಅವರಿಗೆ ತಿಳಿಯಲಿಲ್ಲ ಎಂದು ಹೇಳಲಾಗಿದೆ.

ಇದೆಲ್ಲದರ ನಡುವೆ, ಪ್ರಕ್ರಿಯೆಯಲ್ಲಿ ಚುನಾವಣಾ ಅಧಿಕಾರಿಗಳು, ಪಕ್ಷಗಳು ಹಾಗೂ ಜನರೊಂದಿಗೆ ಸಮನ್ವಯ ಸಾಧಿಸಲು ಬಿಎಲ್‌ಒಗಳಿಗೆ ನೆರವು ನೀಡಲು ಬಿಎಲ್‌ಎಗಳನ್ನು ನಿಯೋಜಿಸಲಾಗಿತ್ತು. ಆದರೆ, ಅವರಲ್ಲಿ ಹೆಚ್ಚಿನವರು ಬಿಜೆಪಿಗರೇ ಆಗಿದ್ದು, ವಿಪಕ್ಷಗಳ ಮತದಾರರ ಮತಪಟ್ಟಿಯ ಮೇಲೆ ಅವರ ಪ್ರಭಾವ ಬೀರಿರಬಹುದು ಮತ್ತು ಪ್ರಕ್ರಿಯೆಯು ಪಕ್ಷಪಾತಿಯಾಗಿ ನಡೆದಿರಬಹುದಾದ ಸಾಧ್ಯತೆಗಳ ಕುರಿತು ಅನುಮಾನಗಳು ವ್ಯಕ್ತವಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...