ಕಲಬುರಗಿ | ರಾಮಮಂದಿರ ಉದ್ಘಾಟನೆಗೆ ಹೋಗಿದ್ದರೆ ಗಂಗಾ ಜಲದಿಂದ ಶುದ್ಧಿಗೊಳಿಸುತ್ತಿದ್ದರು : ಮಲ್ಲಿಕಾರ್ಜುನ ಖರ್ಗೆ

Date:

ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರಿಗೆ ರಾಮ ಮಂದಿರ ಉದ್ಘಾಟನೆ ಕಾರ್ಯಾಕ್ರಮಕ್ಕೆ ಆಹ್ವಾನಿಸಿದರೂ ಏಕೆ ಬರಲಿಲ್ಲ? ಎಂದು ಪ್ರಧಾನಿ ಮೋದಿಯವರು ಪದೇ ಪದೇ ಪ್ರಶ್ನಿಸುತ್ತಿದ್ದಾರೆ. ಆದರೆ ನಾನು ರಾಮ ಮಂದಿರ ಉದ್ಘಾಟನೆಗೆ ಹೋಗಿ ಹೊರಬರುತ್ತಿದ್ದಂತೆ ಪೂರ್ತಿ ಮಂದಿರವನ್ನು ಗಂಗಾ ಜಲದಿಂದ ಶುದ್ಧಿಗೊಳಿಸುತ್ತಿದ್ದರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಲಬುರಗಿ ಜಿಲ್ಲೆಯ ಕಮಲಾಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

“ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ರಾಮ ಮಂದಿರ ಉದ್ಘಾಟನೆಗೆ ಏಕೆ ಕರೆಯಲಿಲ್ಲ. ಸಾಂವಿಧಾನಿಕವಾಗಿ ನಿಮಗಿಂತ ದೊಡ್ಡ ಸ್ಥಾನದಲ್ಲಿರುವ ಅವರನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಎಂಬ ತಾರತಮ್ಯದಿಂದ ಕರೆಯಲಿಲ್ಲವೇ ಎಂಬ ಪ್ರಶ್ನೆಗೆ ಮೊದಲು ಮೋದಿ ಉತ್ತರಿಸಲಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೋದಿ ದೇಶ ಸತ್ಯನಾಶ ಮಾಡಿಬಿಡ್ತಾರೆ :

ದೇಶದ ಮುಂದಿನ ಪೀಳಿಗೆಗಾಗಿ, ಮಕ್ಕಳು, ಮಹಿಳೆಯರ ರಕ್ಷಣೆಗಾಗಿ ಯೋಚಿಸಿ ಮತ ಚಲಾಯಿಸಿದರೆ ದೇಶ ಕಲ್ಯಾಣವಾಗುತ್ತದೆ. ಹುಕುಂ ಆಡಳಿತ ನಡೆಸುವ ಮೂಲಕ ಪ್ರಧಾನಿ ಮೋದಿ ದೇಶ ಸತ್ಯನಾಶ ಮಾಡಿಬಿಡ್ತಾರೆ ಎಂದರು.

“ಶ್ರೀಮಂತರ ಸಂಪತ್ತನ್ನು ಕಸಿದುಕೊಂಡು ಅದನ್ನು ಕಾಂಗ್ರೆಸ್ ಪಕ್ಷ ಬಡವರಿಗೆ ಹಾಗೂ ಮುಸ್ಲಿಮರಿಗೆ ಹಂಚಲಿದೆ ಎಂದು ಮೋದಿಯವರು ಆರೋಪಿಸಿದ್ದಾರೆ. ಆದರೆ ವಾಸ್ತವದಲ್ಲಿ ಸಾರ್ವಜನಿಕರ ಸಂಪತ್ತನ್ನು ಕೊಳ್ಳೆ ಹೊಡೆಯುತ್ತಿರುವ ಪ್ರಬಲ ಜನರು ಮೋದಿ ಅವರ ಜೊತೆಯಲ್ಲೇ ಇದ್ದಾರೆ” ಎಂದು ಮಲ್ಲಿಕಾರ್ಜುನ ಖರ್ಗೆ ಕುಟುಕಿದರು.

“ಬಂದರು, ವಿಮಾನ ನಿಲ್ದಾಣ, ಹೆದ್ದಾರಿ ಎಲ್ಲವನ್ನೂ ಅವರಿಗೆ ಮೋದಿ ಮಾರಿ ಬಿಟ್ಟಿದ್ದಾರೆ. ಈ ದೇಶದಲ್ಲಿರುವ 22 ಜನ ಶ್ರೀಮಂತರ ಬಳಿ ಸಂಗ್ರಹವಾಗಿರುವ ಸಂಪತ್ತು ಈ ದೇಶದ 70 ಕೋಟಿ ಜನರಲ್ಲಿರುವ ಸಂಪತ್ತಿಗೆ ಸರಿಸಮಾನವಾಗಿದೆ. ಇಲ್ಲಿ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ ಮತ್ತು ಬಡವರು ಮತ್ತಷ್ಟು ಬಡವರಾಗುತ್ತಿದ್ದಾರೆ” ಎಂದರು.

“ಕಾಂಗ್ರೆಸ್ಸಿನವರು ನಿಮ್ಮ ಮಂಗಳಸೂತ್ರವನ್ನು ಕಿತ್ತುಕೊಳ್ಳುತ್ತಾರೆ ಎಂದು ಆರೋಪಿಸುತ್ತಾ ಬೂಟಾಟಿಕೆಯ ಮಾತಿನ ಮೂಲಕ ಜನರನ್ನು ಮರಳು ಮಾಡುವ ಕೆಲಸಕ್ಕೆ ಮಾತ್ರ ಮೋದಿ ಸೀಮಿತರಾಗಿದ್ದಾರೆ” ಎಂದು ಕಿಡಿಕಾರಿದರು.

ಈ ಸುದ್ದಿಓದಿದ್ದೀರಾ? ಪೆನ್‌ಡ್ರೈವ್‌ ಕೇಸು| ಮಹತ್ವದ ತಿರುವು: ಬಿಜೆಪಿ ನಾಯಕನ ವಿರುದ್ಧ ಎಚ್‌ಡಿಕೆ ಆರೋಪ

“ಹಿಂದೆ ಕೋವಿಡ್ ಸಂದರ್ಭದಲ್ಲಿ ಹಾಗೂ ಈಗ ಬರಗಾಲದ ಸಂದರ್ಭದಲ್ಲಿ ನರೇಗಾ ದಿನಗಳನ್ನ 100ರಿಂದ 150 ದಿನಗಳಿಗೆ ಏರಿಸುವಂತೆ ನಾನು ಮೋದಿಯವರಿಗೆ ನಾನು ಮನವಿ ಮಾಡಿದೆ. ಆದರೆ ಜನರಿಗೆ ಸಹಾಯ ಆಗುವಂತಹ ಕೆಲಸವನ್ನು ಅವರು ಮಾಡಲೇ ಇಲ್ಲಾ. ಈ ಮೂಲಕ ಕಷ್ಟಪಟ್ಟು ದುಡಿಯುವ ಬಡ ಕಾರ್ಮಿಕರ ಶ್ರಮಕ್ಕೆ ಅವರು ದ್ರೋಹ ಮಾಡಿದರು. ಆ ದ್ರೋಹಕ್ಕೆ ಈ ಬಾರಿ ತಕ್ಕ ಉತ್ತರ ನೀಡಲು ಜನ ತೀರ್ಮಾನಿಸಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...