ಸಿಸೋಡಿಯಾ ಇಲ್ಲಿ ಇದ್ದಿದ್ದರೆ ನನಗೆ ಈ ರೀತಿ ಆಗುತ್ತಿರಲಿಲ್ಲ: ಸ್ವಾತಿ ಮಲಿವಾಲ್

Date:

ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಈಗ ಜೈಲಿನಿಂದ ಹೊರಗೆ ಇದ್ದಿದ್ದರೆ ನಾನು ಇಂತಹ ವಿವಾದದಲ್ಲಿ ಸಿಲುಕಬೇಕಾಗಿರಲಿಲ್ಲ ಎಂದು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಭಾನುವಾರ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಸ್ವಾತಿ ಮಲಿವಾಲ್ ಪೋಸ್ಟ್ ಮಾಡಿದ್ದಾರೆ. “ನಿರ್ಭಯಾಗೆ ನ್ಯಾಯ ಕೊಡಿಸಲು ನಾವೆಲ್ಲ ಬೀದಿಗಿಳಿಯುತ್ತಿದ್ದ ಕಾಲವಿತ್ತು, ಇಂದು 12 ವರ್ಷಗಳ ನಂತರ ಸಿಸಿಟಿವಿ ದೃಶ್ಯಾವಳಿಗಳನ್ನು ಕಣ್ಮರೆಯಾಗಿಸಿ ಫೋನ್ ಫಾರ್ಮಾಟ್ ಮಾಡಿದ ಆರೋಪಿಯನ್ನು ರಕ್ಷಿಸಲು ನಾವೆಲ್ಲರೂ ಬೀದಿಗಿಳಿದಿದ್ದೇವೆಯೇ” ಎಂದು ಸ್ವಾತಿ ಮಲಿವಾಲ್ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವರು (ಎಎಪಿ) ಮನೀಶ್ ಸಿಸೋಡಿಯಾ ಅವರಿಗಾಗಿ ಇಷ್ಟು ಬಲ ಪ್ರಯೋಗ ಮಾಡುತ್ತಿದ್ದರು ಎಂದು ನಾನು ಬಯಸುತ್ತೇನೆ. ಸಿಸೋಡಿಯಾ ಇಲ್ಲಿ ಇದ್ದಿದ್ದರೆ ಬಹುಶಃ ವಿಷಯ ಇಷ್ಟು ಕೆಟ್ಟದಾಗುತ್ತಿರಲಿಲ್ಲ” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಸ್ವಾತಿ ಬರೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ?  ದೆಹಲಿ ಅಬಕಾರಿ ನೀತಿ ಪ್ರಕರಣ | ಸಿಸೋಡಿಯಾ ಜಾಮೀನು ಅರ್ಜಿ; ಸಿಬಿಐ, ಇಡಿಗೆ ಹೈಕೋರ್ಟ್ ನೋಟಿಸ್

ಮೇ 13 ರಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಅವರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ. ಸದ್ಯ ಈ ಪ್ರಕಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಭವ್ ಐದು ದಿನಗಳ ಪೊಲೀಸ್ ಕಸ್ಟರಿಯಲ್ಲಿದ್ದಾರೆ.

ಶನಿವಾರ ತಡರಾತ್ರಿ ನಡೆದ ವಿಚಾರಣೆ ವೇಳೆ ದೆಹಲಿ ಪೊಲೀಸರು ತೀಸ್ ಹಜಾರಿ ನ್ಯಾಯಾಲಯಕ್ಕೆ ಸಿಎಂ ಗೃಹ ಸಿಬ್ಬಂದಿ ಒದಗಿಸಿದ್ದ ಸಿಸಿಟಿವಿ ದೃಶ್ಯಾವಳಿಗಳು ಬ್ಲ್ಯಾಕ್ ಆಗಿರುವುದು ಕಂಡು ಬಂದಿದೆ ಎಂದು ತಿಳಿಸಿದ್ದಾರೆ.

ಕುಮಾರ್ ತಮ್ಮ ಮೊಬೈಲ್ ಫೋನ್ ನೀಡಿದ್ದರೂ ಪಾಸ್‌ವರ್ಡ್ ನೀಡಿಲ್ಲ. ಇದಲ್ಲದೆ, ಅವರು ಈಗಾಗಲೇ ಒಂದು ದಿನದ ಹಿಂದೆ ತನ್ನ ಫೋನ್ ಅನ್ನು ಫಾರ್ಮ್ಯಾಟ್ ಮಾಡಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು 2023 ಫೆಬ್ರವರಿ 26 ರಂದು ಸಿಬಿಐ ಬಂಧಿಸಿತ್ತು. ಅಂದಿನಿಂದ ಬಂಧನದಲ್ಲಿಯೇ ಇದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...