ಅರಸು ಅವರ ಕಾರಲ್ಲಿ ಕೂತ ಮಾತ್ರಕ್ಕೆ ನೀವು ಅರಸು ಆಗಲ್ಲ: ಸಿಎಂ ವಿರುದ್ಧ ಹರಿಪ್ರಸಾದ್ ಪರೋಕ್ಷ ವಾಗ್ದಾಳಿ

Date:

  • ನಾನು ಮಂತ್ರಿ ಆಗಿದ್ದಿದ್ದರೆ ಸಮುದಾಯದ ಜನರ ಜೊತೆಗೆ ಇರಲು ಸಾಧ್ಯವಾಗುತ್ತಿರಲಿಲ್ಲ
  • ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನ ಹೊರಹಾಕಿದ ಹಿರಿಯ ಕಾಂಗ್ರೆಸ್​ ಮುಖಂಡ ಬಿಕೆ ಹರಿಪ್ರಸಾದ್​

ದೇವರಾಜ ಅರಸು ಕಾರಿನಲ್ಲಿ ಕುಳಿತರೆ ದೇವರಾಜ ಅರಸು ಆಗಲ್ಲ. ದೇವರಾಜ ಅರಸು ಅವರ ಚಿಂತನೆ ಇರಬೇಕು ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ ಕೆ ಹರಿಪ್ರಸಾದ್​ ವಾಗ್ದಾಳಿ ಮಾಡಿದರು.

ಬೆಂಗಳೂರಿನಲ್ಲಿ ಶನಿವಾರ ನಡೆದ ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತೀ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್, ಹಿಂದಿನ ಯಾವ ಮುಖ್ಯಮಂತ್ರಿಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಜಾತಿ ರಾಜಕಾರಣ ಮಾಡಲಿಲ್ಲ. ಪಂಚೆ ಹಾಕಿಕೊಂಡು ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜವಾದಿ ಅಂತ ಹೇಳಿದರೆ ಆಗೋದಿಲ್ಲ. ನಾನು ಮೂರು ಬಾರಿ ಸೋತಿರಬಹುದು, ಆದರೆ ಇನ್ನೂ ಸತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಹರಿಹಾಯ್ದಿದ್ದಾರೆ.

ನಾನು ಮಂತ್ರಿ ಆಗಿದ್ದಿದ್ದರೆ ಸಮುದಾಯದ ಜನರ ಜೊತೆಗೆ ಇರಲು ಸಾಧ್ಯವಾಗುತ್ತಿರಲಿಲ್ಲ. ನಾನು ಮುಖ್ಯಮಂತ್ರಿ ಅಥವಾ ಮಂತ್ರಿ ಆಗುತ್ತೇನೆ ಅಂತ ಸಮುದಾಯದ ಯಾರೂ ಭ್ರಮೆಯಲ್ಲಿ ಇರಬೇಡಿ. ಈಡಿಗ, ಬಿಲ್ಲವ, ನಾಮಧಾರಿ ಸಮುದಾಯದವರು ಕೇವಲ ರಾಜ್ಯದಲ್ಲಿ ಮಾತ್ರ ಅಲ್ಲ, ಎಲ್ಲ ರಾಜ್ಯಗಳಲ್ಲೂ ಇದ್ದಾರೆ ಎಂದು ಕಾಂಗ್ರೆಸ್​ ಮುಖಂಡ ಬಿಕೆ ಹರಿಪ್ರಸಾದ್​ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ-ಜೆಡಿಎಸ್‌ ಮೈತ್ರಿ: ಪಕ್ಷಗಳಿಗೆ ಅನಿವಾರ್ಯ, ರಾಜ್ಯಕ್ಕೆಷ್ಟು ಹಿತ?

ಸಚಿವ ಸ್ಥಾನ ಸಿಗದ ಕಾರಣಕ್ಕಾಗಿ ಅಸಮಾಧಾನ ಹೊಂದಿರುವ ಕಾಂಗ್ರೆಸ್​ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್​ ವಿರುದ್ಧ ಬಹಿರಂಗವಾಗಿಯೇ ಮತ್ತೊಮ್ಮೆ ಅಸಮಾಧಾನ ಹೊರ ಹಾಕಿದ್ದಾರೆ.

ದೇವರಾಜ ಅರಸು ಅವರ ಬಗ್ಗೆ ಭಾಷಣದಲ್ಲಿ ಪುಂಖಾನುಪುಂಖವಾಗಿ ಹಾಡಿ ಹೊಗಳುವರು, ಅವರ ಮೊಮ್ಮಗನಿಗೆ ಯಾವ ಸ್ಥಾನವನ್ನೂ ಕೊಟ್ಟಿಲ್ಲ ಅಂತ ಅವಮಾನ ಆಗುತ್ತಿದೆ ಎಂದು ಹರಿಪ್ರಸಾದ್ ಬೇಸರ ವ್ಯಕ್ತಪಡಿಸಿದರು.

ನಮ್ಮ ಸಮುದಾಯ ಅತಂತ್ರವಾಗಿದೆ. ಇದು ಅತಂತ್ರ ಸಮುದಾಯದ ವೇದಿಕೆ. ಚುನಾವಣೆ ಬರುವಾಗ ಘೋಷಣೆ ಮಾಡಿದ್ದೇ ಮಾಡಿದ್ದು. ಅಧಿಕಾರಕ್ಕೆ ಬರಲು ಏನೇನೋ ಭರವಸೆ ನೀಡಿದರು. ಆದರೆ ಅಧಿಕಾರಕ್ಕೆ ಬಂದ ಮೇಲೆ ಅತೀ ಹಿಂದುಳಿದ ವರ್ಗಗಳ ನೆನಪೇ ಆಗಿಲ್ಲ. ಅಧಿಕಾರ ಸಿಕ್ಕ ತಕ್ಷಣವೇ ಸಮುದಾಯಕ್ಕೆ ಸಿಗಬೇಕಾಗಿರುವುದು ಇನ್ನೂ ಸಿಕ್ಕಿಲ್ಲ. ಸಮುದಾಯದ ಶಕ್ತಿ ಏನೂ ಎನ್ನುವುದನ್ನು ನಾವೇ ಇನ್ನೂ ತಿಳಿದುಕೊಂಡಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹರಿಹಾಯ್ದಿದ್ದಾರೆ.

ಸಮಾವೇಶದಲ್ಲಿ ಆಮ್​ ಆದ್ಮಿ ಪಕ್ಷದ ಕರ್ನಾಟಕ ಘಟಕದ ಅಧ್ಯಕ್ಷ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ, ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್ ಶ್ರೀನಾಥ್, ಮಾಜಿ ಸಚಿವ ಶಿವಮೂರ್ತಿ ನಾಯಕ್, ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ದ್ವಾರಕಾನಾಥ್, ಬಿಜೆಪಿ ಮುಖಂಡ ನರೇಂದ್ರಬಾಬು ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...