ಹರಿಯಾಣ ಚುನಾವಣೆ | ಮುಖ್ಯಮಂತ್ರಿ ರೇಸ್‌ನಲ್ಲಿ ಸುರ್ಜೆವಾಲಾ; ಚುನಾವಣಾ ಕಣದಲ್ಲಿ ಪುತ್ರನ ಹೋರಾಟ

Date:

ಅಕ್ಟೋಬರ್ 5, ಶನಿವಾರ ಹರಿಯಾಣ ವಿಧಾನಸಭೆಗೆ ಮತದಾನ ನಡೆಯಲಿದೆ. ರಾಜ್ಯದಲ್ಲಿ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆಬಿದ್ದಿದೆ. ಹರಿಯಾಣದಲ್ಲಿ ಭಾರೀ ಚರ್ಚೆಯಲ್ಲಿರುವ ಕೆಲವು ಕ್ಷೇತ್ರಗಳ ಪೈಕಿ, ಕೈತಾಲ್ ವಿಧಾನಸಭಾ ಕ್ಷೇತ್ರ ಕೂಡ ಮುನ್ನೆಲೆಯಲ್ಲಿದೆ. 2019ರಲ್ಲಿ ಆ ಕ್ಷೇತ್ರದಲ್ಲಿ ಕಡಿಮೆ ಅಂತರದಲ್ಲಿ ಸೋತಿದ್ದ ಹಾಲಿ ಕಾಂಗ್ರೆಸ್‌ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ತಮ್ಮ ಪುತ್ರ ಆದಿತ್ಯ ಸುರ್ಜೇವಾಲಾರನ್ನು ಕಣಕ್ಕಿಳಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಗೆದ್ದರೆ ತಾವೂ ಮುಖ್ಯಮಂತ್ರಿ ಹುದ್ದೆಗೆ ಆಕಾಂಕ್ಷಿ ಎಂಬ ಸಂದೇಶವನ್ನು ರವಾನಿಸಿರುವ ಸುರ್ಜೇವಾಲಾ, ತಮ್ಮ ಮಗನ ಗೆಲುವಿಗಾಗಿ ಹೋರಾಟ ನಡೆಸುತ್ತಿದ್ದಾರೆ.

ಸುರ್ಜೇವಾಲಾ ಅವರ ಪುತ್ರ ಆದಿತ್ಯ ಅವರು ಇತ್ತೀಚೆಗೆ ರಾಜಕಾರಣಕ್ಕೆ ಪ್ರವೇಶಿಸಿದ್ದಾರೆ. ಇದು ಆದಿತ್ಯ ಅವರ ಚೊಚ್ಚಲ ಚುನಾವಣಾ ಸ್ಪರ್ಧೆಯಾಗಿದೆ. ಮಾತ್ರವಲ್ಲದೆ, ಹರಿಯಾಣ ಚುನಾವಣಾ ಕಣದಲ್ಲಿರುವ ಅತ್ಯಂತ ಕಿರಿಯ ಅಭ್ಯರ್ಥಿಯೂ ಆಗಿದ್ದಾರೆ.

25 ವರ್ಷ ವಯಸ್ಸಿನ ಆದಿತ್ಯ, ಈ ಹಿಂದೆ, ತಮ್ಮ ತಂದೆ ರಣದೀಪ್ ಸುರ್ಜೇವಾಲಾ ಪ್ರತಿನಿಧಿಸಿದ್ದ ಕೈತಾಲ್‌ನಿಂದ ಕಣಕ್ಕಿಳಿದಿದ್ದಾರೆ. ಈ ಕ್ಷೇತ್ರವನ್ನು ಹಾಲಿ ಬಿಜೆಪಿ ಶಾಸಕಿ ಲೀಲಾ ರಾಮ್ ಪ್ರತಿನಿಧಿಸುತ್ತಿದ್ದಾರೆ. ಪ್ರಸ್ತುತ ಚುನಾವಣೆಯಲ್ಲೂ ಅವರೇ ಬಿಜೆಪಿ ಅಭ್ಯರ್ಥಿಯೂ ಆಗಿದ್ದಾರೆ. 2019ರಲ್ಲಿ ಲೀಲಾ ಅವರು ಸುರ್ಜೇವಾಲಾ ಅವರನ್ನು 1,246 ಮತಗಳಿಂದ ಸೋಲಿಸಿದ್ದರು. ಇದೀಗ, ಸುರ್ಜೇವಾಲಾ ಅವರ ಪುತ್ರನ  ವಿರುದ್ಧವೂ ಗೆಲುವು ಸಾಧಿಸಲು ಹೆಣಗಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುರ್ಜೇವಾಲಾರನ್ನು ಲೀಲಾ ಸೋಲಿಸುವುದಕ್ಕೂ ಮುನ್ನ, ಕೈತಾಲ್ ಕ್ಷೇತ್ರವು ಸುರ್ಜೇವಾಲಾ ಕುಟುಂಬದ ಭದ್ರಕೋಟೆಯಾಗಿತ್ತು. 2005ರಲ್ಲಿ ರಣದೀಪ್ ಸುರ್ಜೇವಾಲಾರ ತಂದೆ ಶಂಶೇರ್ ಸಿಂಗ್ ಸುರ್ಜೆವಾಲಾ ಅವರು ಈ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು. ಬಳಿಕ, 2009 ಮತ್ತು 2014ರಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಇದೇ ಕ್ಷೇತ್ರದಿಂದ ಶಾಸಕರಾಗಿದ್ದರು. ಇದೀಗ, ಸುರ್ಜೇವಾಲಾ ಕುಟುಂಬದ ಮೂರನೇ ತಲೆಮಾರಿನ ಆದಿತ್ಯ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ತಮ್ಮ ರಾಜಕೀಯ ಆರಂಭಕ್ಕೆ ಮುನ್ನುಡಿ ಬರೆಯಲು ಯತ್ನಿಸುತ್ತಿದ್ದಾರೆ.

ಅಂದಹಾಗೆ, ಬೆಂಗಳೂರಿನ ‘ದಿ ಇಂಟರ್‌ನ್ಯಾಶನಲ್ ಸ್ಕೂಲ್‌’ನಲ್ಲಿ ಪದವಿ ಪೂರ್ವ ಶಿಕ್ಷಣ ಪಡೆದಿದ್ದ ಆದಿತ್ಯ, ಕಳೆದ ವರ್ಷವಷ್ಟೇ ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದುಕೊಂಡಿದ್ದಾರೆ. ಅವರು ಹರಿಯಾಣ, ಹರಿಯಾಣದಾಚೆಗಿನ ರಜ್ಯ ಹಾಗೂ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿದ್ದು, ಅವರು ರಾಜಕೀಯ ದೃಷ್ಠಿಕೋನ ಪಡೆಯಲು ನೆರವಾಗಿದೆ ಎಂದು ಆದಿತ್ಯ ಹೇಳಿಕೊಂಡಿದ್ದಾರೆ.

“ನಾನು ಚಿಕ್ಕವನಿದ್ದಾಗಿನಿಂದಲೇ ನನ್ನ ಅಜ್ಜ ಮತ್ತು ನನ್ನ ತಂದೆ ಹರಿಯಾಣದ ಜನರಿಗೆ ಸೇವೆ ಸಲ್ಲಿಸುತ್ತಿರುವುದನ್ನು ಹತ್ತಿರದಿಂದ ನೋಡಿದ್ದೇನೆ. ನಾನು ಅವರಂತೆ ಕೆಲಸ ಮಾಡಲು ಕೃತಜ್ಞನಾಗಿದ್ದೇನೆ. ನಾವು ಅಭಿವೃದ್ಧಿ ಮತ್ತು ಬದಲಾವಣೆಯನ್ನು ಒಟ್ಟಿಗೆ ತರಬಹುದು. ಅದಕ್ಕಾಗಿ ದುಡಿಯಬೇಕು” ಎಂದು ಆದಿತ್ಯ ಹೇಳಿದ್ದಾರೆ.

ಗಮನಾರ್ಹವಾಗಿ, ಕೈತಾಲ್ ವಿಧಾನಸಭಾ ಕ್ಷೇತ್ರವು ಕುರುಕ್ಷೇತ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಕುರುಕ್ಷೇತ್ರದಿಂದ ಸ್ಪರ್ಧಿಸಿದ್ದ ಸುರ್ಜೇವಾಲಾ ಸಂಸದರಾಗಿದ್ದಾರೆ. ಅವರು ಈಗ, ಹರಿಯಾಣದಲ್ಲಿ ಕಾಂಗ್ರೆಸ್‌ ಗೆದ್ದರೆ, ಮುಖ್ಯಮಂತ್ರಿ ಹುದ್ದೆಗಾಗಿ ಮುಂಚೂಣಿಯಲ್ಲಿದ್ದಾರೆ. ಆದಾಗ್ಯೂ, ಹರಿಯಾಣ ಕಾಂಗ್ರೆಸ್‌ನಲ್ಲಿ ಸುರ್ಜೇವಾಲಾ ಬಣ ಮತ್ತು ಭೂಪಿಂದರ್ ಹೂಡಾ ಬಣದ ನಡುವೆ ಆಂತರಿಕ ಭಿನ್ನಾಭಿಪ್ರಾಯಗಳಿವೆ.

ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳ ಪೈಕಿ ಸುಮಾರು 70 ಕ್ಷೇತ್ರಗಳ ಟಿಕೆಟ್ ಹಂಚಿಕೆಯಲ್ಲಿ ಹೂಡಾ ಹಿಡಿತ ಸಾಧಿಸಿದ್ದಾರೆ. ಅವರೂ ಕೂಡ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ. ಕೈತಾಳದಲ್ಲಿ ತಮ್ಮ ಮಗನಿಗೆ ಟಿಕೆಟ್ ಕೊಡಿಸಿರುವ ಸುರ್ಜೇವಾಲಾ, ಮುಖ್ಯಮಂತ್ರಿ ಹುದ್ದೆಗೆ ಹಕ್ಕು ಚಲಾಯಿಸಲು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಬೇಕು ಎಂಬ ಕಡ್ಡಾಯವಿಲ್ಲ ಎಂದಿದ್ದಾರೆ. ತಮ್ಮ ಮಗನ ಗೆಲುವು ಮತ್ತು ರಾಜ್ಯದಲ್ಲಿ ಕಾಂಗ್ರೆಸ್‌ ಗೆಲುವಿನ ಬಳಿಕ ತಮಗೆ ಮುಖ್ಯಮಂತ್ರಿ ಹುದ್ದೆ ಸಿಕ್ಕರೆ, ಬಳಿಕ ವಿಧಾನಸಭೆಯಲ್ಲಿ ಸ್ಥಾನ ಪಡೆಯುವ ಬಗ್ಗೆ ಸುರ್ಜೇವಾಲಾ ಯೋಜಿಸಿದ್ದಾರೆ.

ಈ ವರದಿ ಓದಿದ್ದೀರಾ?: ಯಾರು ಈ ಜಗ್ಗಿ ವಾಸುದೇವ್? ಈತ ನಿಜಕ್ಕೂ ಸದ್ಗುರುನಾ?

“ಅಕ್ಟೋಬರ್ 5ರಂದು ನಡೆಯಲಿರುವ ಮತದಾನವು ಜನರ ಜೀವನವನ್ನು ಸುಧಾರಿಸುತ್ತದೆ. ಯುವಜನರಿಗೆ ಹೊಸ ಮಾರ್ಗಗಳನ್ನು ಹುಡುಕಿಕೊಡುತ್ತದೆ. ಬಿಜೆಪಿ ಆಡಳಿತದಿಂದ ಎದುರಾಗಿರುವ ಹಣದುಬ್ಬರನ್ನು ನಿಯಂತ್ರಿಸಲು, ಸಣ್ಣ ವ್ಯಾಪಾರ, ಅಂಗಡಿ ಮಾಲೀಕರ ಬದುಕು ಹಸನಾಗಿಸಲು ದಾರಿ ತೋರುತ್ತದೆ” ಎಂದು ಸುರ್ಜೇವಾಲಾ ಹೇಳಿದ್ದಾರೆ.

ತಮ್ಮ ಮಗನೇ ಅಭ್ಯರ್ಥಿಯಾಗಿದ್ದರೂ, ತಾವೇ ಅಭ್ಯರ್ಥಿಯೆಂಬಂತೆ ಸುರ್ಜೇವಾಲಾ ಕ್ಷೇತ್ರದಲ್ಲಿ ಎಡೆಬಿಡದೆ ಸುತ್ತಿತ್ತಿದ್ದಾರೆ. ಎಲ್ಲೆಡೆ ತಮ್ಮ ಉಪಸ್ಥಿತಿಯನ್ನು ತೋರಿಸುತ್ತಿದ್ದಾರೆ.

ಸುರ್ಜೇವಾಲಾ ಕುಟುಂಬದ ಮೂರನೇ ತಲೆ ಮಾಡಿನ ಆದಿತ್ಯ ಸ್ಪರ್ಧೆಯನ್ನು ಬಿಜೆಪಿ ಟೀಕಿಸುತ್ತಿದೆ “ಕೈತಾಲ್ ಕ್ಷೇತ್ರವು ಆದಿತ್ಯ ಅವರ ತಂದೆ ಮತ್ತು ಅಜ್ಜನ ಒಡೆತನದಲ್ಲಿದೆಯೇ” ಎಂದು ಬಿಜೆಪಿ ಪ್ರಶ್ನಿಸಿದೆ.

ಆದಾಗ್ಯೂ, “ನಾನು ತಮ್ಮ ತಂದೆ ಅಥವಾ ಪಕ್ಷದ ಒತ್ತಡದಿಂದ ರಾಜಕಾರಣಕ್ಕೆ ಬಂದಿಲ್ಲ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಯುವ ತಲೆಮಾರಿನ ನಾಯಕತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ಯುವ ನಾಯಕತ್ವದಲ್ಲಿ ನನ್ನ ಪಾತ್ರವೂ ಇರಬೇಕು. ಕಾಂಗ್ರೆಸ್‌ನ ಹಿರಿಯೊಂದಿಗೆ ಕೆಲಸ ಮಾಡಲು, ರಾಜ್ಯ ಮತ್ತು ಕೈತಾಲ್‌ನಲ್ಲಿನ ಬದಲಾವಣೆಗಾಗಿ ಸ್ಪರ್ಧಿಸಿದ್ದೇನೆ” ಎಂದು ಆದಿತ್ಯ ಹೇಳಿಕೊಂಡಿದ್ದಾರೆ.

ರಣದೀಪ್ ಸುರ್ಜೇವಾಲಾ ಅವರು ವಿಧಾನಸಭೆಯಲ್ಲಿ ಸ್ಪರ್ಧಿಸದಿದ್ದರೂ, ತಮ್ಮ ಪುತ್ರನ ಮೂಲಕ ವಿಧಾನಸಭೆಯಲ್ಲಿ ತಮ್ಮ ಹೋರಾಟವನ್ನು ಪ್ರತಿಬಿಂಬಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿ ರಾಜ್ಯದಲ್ಲಿ ಚುನಾವಣಾ ಪ್ರಚಾರವನ್ನೂ ಮಾಡಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್‌ ಗೆಲ್ಲುವುದು ಬಹುತೇಕ ಖಚಿತ ಎಂಬ ಅಭಿಪ್ರಾಯಗಳೂ ಇವೆ. ಕಾಂಗ್ರೆಸ್‌ ಗೆಲ್ಲುವ ಸಾಧ್ಯತೆಯೇ ಹೆಚ್ಚಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಗೆದ್ದರೆ, ಸುರ್ಜೇವಾಲಾಗೆ ಮುಖ್ಯಮಂತ್ರಿ ಹುದ್ದೆ ಸಿಗುವುದೇ, ಇಲ್ಲ ಹೂಡಾ ಪಾಲಾಗುವುದೇ ಇನ್ನೊಂದು ವಾರದಲ್ಲಿ ಉತ್ತರ ಸಿಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...