ರೈತ ಹೋರಾಟ | ರೈತರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಜಾರಿ ಮಾಡಿದ ಹರಿಯಾಣ ಪೊಲೀಸರು

Date:

ಎಂಎಸ್‌ಪಿ, ರೈತರ ಸಾಲ ಮನ್ನಾಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಹರಿಯಾಣ ಪೊಲೀಸರು ‘ರಾಷ್ಟ್ರೀಯ ಭದ್ರತಾ ಕಾಯ್ದೆ’ ಜಾರಿಗೊಳಿಸಿದ್ದಾರೆ. ಅಲ್ಲದೆ, ಪ್ರತಿಭಟನೆಯ ಸಮಯದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ತಿಗೆ ಯಾವುದೇ ಹಾನಿಯಾದಲ್ಲಿ, ಅದರ ನಷ್ಟವನ್ನು ತುಂಬಲು ಪ್ರತಿಭಟನಾಕಾರರ ಆಸ್ತಿ ಜಪ್ತಿ ಮಾಡುವುದು ಮತ್ತು ಬ್ಯಾಂಕ್‌ ಖಾತೆಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅಂಬಾಲಾ ಪೊಲೀಸರು, “2024ರ ಫೆಬ್ರವರಿ 13ರಿಂದ ದೆಹಲಿ ಚಲೋ ಆರಂಭಿಸಿದ ರೈತರು ಶಂಭು ಗಡಿಯಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ಒಡೆಯಲು ನಿರಂತರವಾಗಿ ಯತ್ನಿಸುತ್ತಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಾಟ ಮತ್ತು ಗದ್ದಲು ಸೃಷ್ಠಿಸುವ ಮೂಲಕ ಕಾನೂನು-ಸುವ್ಯವಸ್ಥೆ ಹಾಳುಮಾಡಲು ಪ್ರಯತ್ನಸಿಉತ್ತಿದ್ದಾರೆ. ಈ ಅವಧಿಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗೆ ಸಾಕಷ್ಟು ಹಾನಿಯಾಗಿದೆ” ಎಂದು ಹೇಳಿದ್ದಾರೆ.

“ಪ್ರತಿಭಟನಾಕಾರರಿಂದ ಸರ್ಕಾರಿ ಮತ್ತು ಖಾಸಗಿ ಆಸ್ತಿಗೆ ಉಂಟಾದ ಹಾನಿಯ ಮೌಲ್ಯವನ್ನು ಅಳೆಯಲಾಗುತ್ತಿದೆ. ಪ್ರತಿಭಟನಾನಿರತರಿಂದ ಯಾವುದೇ ಹಾನಿಯಾದರೂ, ಅದರ ನಷ್ಟವನ್ನು ಅವರ ಆಸ್ತಿಯನ್ನು ವಶಪಡಿಸಿಕೊಂಡು ಸರಿದೂಗಿಸಲಾಗುತ್ತದೆ” ಎಂದು ಆಡಳಿತವು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಳವಳಿಯ ಸಂದರ್ಭದಲ್ಲಿ ಪ್ರತಿಭಟನಾಕಾರರಿಂದ ಸಾರ್ವಜನಿಕ ಆಸ್ತಿಗೆ ಹಾನಿಯಾಗಿದ್ದರೆ, ಸುಪ್ರೀಂ ಕೋರ್ಟ್‌ನ ನಿಬಂಧನೆಗಳ ಅಡಿಯಲ್ಲಿ ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ-1984 (ಪಿಡಿಪಿಪಿ ಕಾಯ್ದೆ) ಅಡಿ ಪ್ರತಿಭಟನೆಗೆ ಕರೆಕೊಟ್ಟವರು ಜವಾಬ್ದಾರರಾಗಿರುತ್ತಾರೆ” ಎಂದು ಹೇಳಿದೆ.

“ಹರಿಯಾಣದ ಸಾರ್ವಜನಿಕ ಆಡಳಿತದ ಆಸ್ತಿ ವಸೂಲಾತಿ ಕಾಯಿದೆ 2021ರ ಪ್ರಕಾರ, ಸರ್ಕಾರಿ ಆಸ್ತಿಗೆ ಹಾನಿಯಾದಲ್ಲಿ, ಹಾನಿ ಮಾಡಿದವರ ಆಸ್ತಿ ಮತ್ತು ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಸಾರ್ವಜನಿಕ ಆಸ್ತಿಯ ನಷ್ಟವನ್ನು ಸರಿದೂಗಿಸಲು ಅವಕಾಶವಿದೆ” ಎಂದು ಜಿಲ್ಲಾ ಪೊಲೀಸರು ಹೇಳಿದ್ದಾರೆ.

“ರೈತ ಚಳವಳಿಯಲ್ಲಿ ಯಾವುದೇ ಸಮುದಾಯದ ಆಸ್ತಿಗೆ ಹಾನಿಯಾಗಿದ್ದರೆ, ಹಾನಿಯ ವಿವರವನ್ನು ಆಡಳಿತಕ್ಕೆ ನೀಡಬಹುದು. ಸರ್ಕಾರಿ ಆಸ್ತಿ ನಷ್ಟದ ಪರಿಹಾರಕ್ಕಾಗಿ ಪ್ರತಿಭಟನಾನಿರತ ರೈತರ ಆಸ್ತಿ ಜಪ್ತಿ ಮತ್ತು ಬ್ಯಾಂಕ್ ಖಾತೆಗಳನ್ನು ವಶಪಡಿಸಿಕೊಳ್ಳಲು ಪ್ರಾರಂಭಿಸಲಾಗಿದೆ,” ಎಂದು ಜಿಲ್ಲಾ ಪೊಲೀಸ್‌ ಇಲಾಖೆ ಹೇಳಿದೆ.

ಅಲ್ಲದೆ, ಪೊಲೀಸರು ರೈತ ಮುಖಂಡರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು (ಎನ್‌ಎಸ್‌ಎ) ಜಾರಿಗೊಳಿಸಿದ್ದಾರೆ.

“ರೈತ ಸಂಘಟನೆಗಳ ಮುಖಂಡರು ಮತ್ತು ಚಳವಳಿಗಾರರ ವಿರುದ್ಧ ಎನ್‌ಎಸ್‌ಎ-1980 ಅಡಿಯಲ್ಲಿ ವಿಚಾರಣೆ ಪ್ರಾರಂಭಿಸಲಾಗಿದೆ” ಎಂದು ಅಂಬಾಲಾ ಪೊಲೀಸರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಅಂದಹಾಗೆ, ಕೇಂದ್ರ ಸರ್ಕಾರ ಲಿಖಿತವಾಗಿ ಭರವಸೆ ನೀಡಿದ್ದ ಎಂಎಸ್‌ಪಿ, ರೈತ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ‘ದೆಹಲಿ ಚಲೋ’ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್‌ನಿಂದ ದೆಹಲಿಗೆ ಬರುತ್ತಿದ್ದ ರೈತರನ್ನು ಹರಿಯಾಣ ಗಡಿಯಲ್ಲಿ ತಡೆಯಾಗಿದೆ. ರೈತರ ಹಾದಿಗೆ ಬ್ಯಾರಿಕೇಡ್‌ಗಳು, ಸಿಮೆಂಟ್‌ ಬ್ಲಾಕ್‌ಗಳು, ಮುಳ್ಳಿನ ತಂತಿಗಳು, ಕಬ್ಬಿಣದ ಮೊಳೆಗಳನ್ನು ಹಾಕಲಾಗಿದೆ. ಅದನ್ನೂ ಮೀರಿ ದೆಹಲಿಯತ್ತ ಹೊರಟಿದ್ದ ರೈತರ ಮೇಲೆ ಖನೌರಿ ಗಡಿಯಲ್ಲಿ ಪೊಲೀಸರು ಟಿಯರ್ ಗ್ಯಾಸ್, ರಬ್ಬರ್ ಗುಂಡಿನ ದಾಳಿ ಮಾಡಿದ್ದಾರೆ. ಬುಧವಾರ ನಡೆದ ರಬ್ಬರ್ ಗುಂಡಿನ ದಾಳಿಯಲ್ಲಿ ರೈತರೊಬ್ಬರು ಸಾವನ್ನಪ್ಪಿದ್ದಾರೆ.

ಹರಿಯಾಣ ಮತ್ತು ಕೇಂದ್ರ ಸರ್ಕಾರಗಳ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನೇತೃತ್ವದಲ್ಲಿ ಪ್ರತಿಭಟನಾನಿರತ ರೈತರು ಶುಕ್ರವಾರದಂದು ‘ಕಪ್ಪು ಶುಕ್ರವಾರ’ ಆಚರಿಸುತ್ತಿದ್ದಾರೆ. ‘ಕಪ್ಪು ಶುಕ್ರವಾರ’ ಪ್ರತಿಭಟನೆಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿದ್ದು, ಪ್ರತಿಭಟನೆಗಳು ನಡೆಯುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...