ಹಾಸನ ಪೆನ್‌ಡ್ರೈವ್ ಪ್ರಕರಣ | ವಿಡಿಯೋ ಫೇಕ್ ಅಲ್ಲ, ನಾಲ್ಕೈದು ವರ್ಷ ಹಳೆಯದ್ದು: ಹೆಚ್‌.ಡಿ ರೇವಣ್ಣ

Date:

ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣ ದಾಖಲಾದ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ, ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್‌.ಡಿ ರೇವಣ್ಣ, “ಹಾಸನ ವಿಡಿಯೋ ಪ್ರಕರಣ ನಾಲ್ಕೈದು ವರ್ಷ ಹಳೆಯದ್ದು” ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ಮನೆಗೆ ದಿಢೀರ್ ಭೇಟಿ ಕೊಟ್ಟ ರೇವಣ್ಣ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ಮೂರು ದಿನಗಳ ಹಿಂದೆ ಜೆಡಿಎಸ್ ಮುಖಂಡರು ಹಾಸನದ ಸೈಬರ್ ಪೊಲೀಸರಿಗೆ ನೀಡಿದ್ದ ದೂರಿನಲ್ಲಿ, ಪ್ರಜ್ವಲ್ ರೇವಣ್ಣ ಅವರದ್ದು ಎಂದು ಮಾರ್ಫ್ ಮಾಡಿದ ವಿಡಿಯೋ ಹರಿಯಬಿಡಲಾಗುತ್ತಿದೆ. ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದರು. ಆದರೆ, ಇಂದು ರೇವಣ್ಣ, ‘ವಿಡಿಯೋ ನಾಲ್ಕೈದು ವರ್ಷ ಹಳೆಯದ್ದು’ ಎಂದು ವ್ಯತಿರಿಕ್ತವಾದ ಹೇಳಿಕೆ ನೀಡುವ ಮೂಲಕ ‘ವಿಡಿಯೋ ಫೇಕ್ ಅಲ್ಲ’ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವೇಗೌಡರ ಬಳಿ ಈ ವಿಷಯವನ್ನು ಮಾತನಾಡಿಲ್ಲ. ಇದೆಲ್ಲಾ ರಾಜಕೀಯ. ನಾನು ಯಾವುದರ ಬಗ್ಗೆಯೂ ಪ್ರತಿಕ್ರಿಯೆ ನೀಡುವುದಿಲ್ಲ” ಎಂದರು.

“ಇದಕ್ಕೆಲ್ಲ ಹೆದರಿ ಓಡಿ ಹೋಗುವವನಲ್ಲ ನಾನು. ಇಲ್ಲೇ ಇದ್ದೀನಲ್ಲ. ಕಾನೂನು ರೀತಿಯಲ್ಲಿ ಏನು ಎದುರಿಸಬೇಕೋ ಅದನ್ನು ಎದುರಿಸುತ್ತೇವೆ. ನಾಲ್ಕೈದು ವರ್ಷ ಹಳೆಯದ್ದನ್ನೆಲ್ಲ ತಗೊಂದು ಬಂದು ಏನೋ ಮಾಡ್ತಿದ್ದಾರೆ. ಅದರ ಬಗ್ಗೆ ನಾನೂ ಏನೂ ಪ್ರತಿಕ್ರಿಯಿಸಲ್ಲ. ಸದ್ಯ ಎಸ್‌ಐಟಿಗೆ ತನಿಖೆಗೆ ಕೊಟ್ಟಿರುವುದರಿಂದ ಅವರ ತನಿಖೆಗೆ ಮುಜುಗರವಾಗದಿರಲು ಏನೂ ಹೇಳಿಕೆ ನೀಡುವುದಿಲ್ಲ” ಎಂದು ತಿಳಿಸಿದ್ದಾರೆ.

“ನಿಮ್ಮ ವಿರುದ್ಧವೂ ಪ್ರಕರಣ ದಾಖಲಾಗಿದೆಯಲ್ಲವೇ?” ಎಂದು ಕೇಳಿದ್ದಕ್ಕೆ, “ಇದೆಲ್ಲ ರಾಜಕೀಯ. ಈಗ ಚುನಾವಣೆಯ ಸಂದರ್ಭದಲ್ಲಿ ಹೊರಗೆ ತಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಸರ್ಕಾರ ಅಧಿಕಾರದಲ್ಲಿದೆ. ಸರ್ಕಾರ ಇದೆಯಲ್ವಾ? ಏನು ಬೇಕಾದರೂ ಕ್ರಮ ತೆಗೆದುಕೊಳ್ಳಲಿ. ಅತಿದೊಡ್ಡ ಲೈಂಗಿಕ ಅಂತಿದ್ದರೆ ಅವರು ತನಿಖೆ ಮಾಡಲಿ. ಎಸ್ಐಟಿ ಮಾಡಿದ್ದಾರಲ್ವಾ” ಎಂದು ರೇವಣ್ಣ ತಿಳಿಸಿದ್ದಾರೆ.

ಪ್ರಜ್ವಲ್ ರೇವಣ್ಣ ನಿಮ್ಮ ಸಂಪರ್ಕದಲ್ಲಿದ್ದಾರಾ? ಎಲ್ಲಿದ್ದಾರೆ? ಎಂದು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ, “ವಿದೇಶಕ್ಕೆ ಮಾಮೂಲಿಯಂತೆ ಹೋಗಿದ್ದಾನೆ. ಅವನಿಗೇನು ಗೊತ್ತು ಇಲ್ಲಿ ಎಫ್‌ಐಆರ್ ಆಗುತ್ತೆ, ಎಸ್‌ಐಟಿ ಆಗುತ್ತದೆ ಅನ್ನುವುದು. ತನಿಖೆಗೆ ಕರೆದಾಗ ಪ್ರಜ್ವಲ್ ರೇವಣ್ಣ ಬರ್ತಾನೆ. ” ಎಂದು ಹೆಚ್ ಡಿ ರೇವಣ್ಣ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಹಾಸನ ಪೆನ್‌ಡ್ರೈವ್ ಪ್ರಕರಣ | ‘ಸ್ವಂತ’ ಮೊಬೈಲ್‌ನಲ್ಲಿದ್ದ ಅಶ್ಲೀಲ ವಿಡಿಯೋ ಹೊರಗೆ ಬಂದಿದ್ದು ಹೇಗೆ?

“ದೇವೇಗೌಡರ ಬಳಿ ನಾನು ಈ ವಿಷಯ ಮಾತನಾಡಿಲ್ಲ. ಕಾನೂನು ರೀತಿ ಏನಿದೆ ಅದು ನಡೆಯಲಿ. ದೇವೇಗೌಡರ ಕುಟುಂಬದ ವಿರುದ್ಧ ಷಡ್ಯಂತ್ರ ಹೊಸದಲ್ಲ. ಇಂತಹ ಹಲವು ತನಿಖೆ ನಾವು ಎದುರಿಸಿದ್ದೇವೆ. ದೇವೇಗೌಡರ ಮೇಲೆ ಸಿಒಡಿ ತನಿಖೆ ನಡೆಸಿದ್ದರು. ದೇವೇಗೌಡರ ಕುಟುಂಬ ಲೋಕಾಯುಕ್ತ, ಸಿಐಡಿ ಎಲ್ಲ ತನಿಖೆ ಎದುರಿಸಿದ್ದೇವೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...