ಹಾಸನ ಲೋಕಸಭೆ | ಎಚ್‌ ಡಿ ದೇವೇಗೌಡ, ಪುಟ್ಟಸ್ವಾಮಿಗೌಡರ ಮೊಮ್ಮಕ್ಕಳ ನಡುವೆ ಪೈಪೋಟಿ

Date:

ಹಾಸನ ಲೋಕಸಭೆ ಚುಣಾವಣೆ ಹತ್ತಿರ ಬರುತ್ತಿದ್ದಂತೆ ಹಾಸನ ಕ್ಷೇತ್ರದಲ್ಲಿ ಪೈಪೋಟಿ ಜೋರಾಗಿಯೇ ನಡೆದಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಮಾಜಿ ಸಚಿವ ದಿ.ಪುಟ್ಟಸ್ವಾಮಿಗೌಡರ ಕುಟುಂಬದ ತಲೆಮಾರಿನ ನಡುವೆ ಲೋಕಸಭಾ ಚುನಾವಣೆ ಸಜ್ಜಾಗಿದೆ.

ಮಾಜಿ ಸಚಿವ ದಿ.ಪುಟ್ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್ ಪಟೇಲ್ ಕಾಂಗ್ರೆಸ್ ಪಕ್ಷದಿಂದ ಹಾಸನ ಲೋಕಸಭೆ ಕ್ಷೇತ್ರದ ಅಧಿಕೃತ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ‌. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಬಹುತೇಕ ಟಿಕೆಟ್ ನಿಶ್ಚಿತವಾಗಿದ್ದು, ಮಾಜಿ ಪ್ರಧಾನಿ ಹಾಗೂ ಮಾಜಿ ಸಚಿವರ ಮೊಮ್ಮಕ್ಕಳ ನಡುವೆ ಹಾಸನ ಲೋಕಸಭೆ ಚುನಾವಣೆ ಮುಖಾಮುಖಿಗಳಾಗುವುದು ಬಹುತೇಕ ನಿಶ್ಚಿತ ಎನ್ನಲಾಗುತ್ತಿದೆ.

ಹಾಸನ ಜಿಲ್ಲಾ ಪಂಚಾಯತಿ ಸದಸ್ಯ ಆಗಿದ್ದ ಶ್ರೇಯಸ್ ಪಾಟೀಲ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಚ್. ಡಿ ರೇವಣ್ಣ ಅವರ ವಿರುದ್ಧ 3500 ಮತಗಳ ಅಂತರದಲ್ಲಿ ಸೋತಿದ್ದರು. ಅವಾಗಿನಿಂದಲೇ ಶ್ರೇಯಸ್ ಪಟೇಲ್ ಹಾಸನ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಎಂದು ಕ್ಷೇತ್ರದಲ್ಲಿ ಬಿಂಬಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಚ್ ಡಿ ದೇವೆಗೌಡ ಹಾಗೂ ಮಾಜಿ ಸಚಿವ ಪುಟ್ಟಸ್ವಾಮಿಗೌಡರ ನಡುವಿನ ಸ್ನೇಹ ಮುರಿದುಕೊಂಡ ಮೇಲೆ ಪ್ರತಿ ಚುಣಾವಣೆಯಲ್ಲೂ ಪ್ರತಿ ಸ್ಪರ್ಧಿಗಳಾಗಿ ಕಣಕ್ಕಿಳಿಯುತ್ತಿದ್ದರು. ಮತ್ತೆ ಈಗ ಎರಡು ಕುಟುಂಬಗಳ ಮಧ್ಯೆ ಹಾಸನ ಲೋಕಸಭೆ ಚುನಾವಣೆ ಸಾಕ್ಷಿಯಾಗಲಿದೆ.

2013 ಹಾಗೂ 2018ರ ವಿಧಾನಸಭೆ ಚುಣಾವಣೆಯಲ್ಲಿ ಎಚ್ ಡಿ ರೇವಣ್ಣ ಅವರ ವಿರುದ್ದ ದಿ. ಪುಟ್ಟಸ್ವಾಮಿಗೌಡರ ಸೊಸೆ ಅನುಪಮಾ ಸ್ಪರ್ಧೆ ಮಾಡಿ ಸೋಲನ್ನು ಅನುಭವಿಸಿದ್ದರು. 2023ರ ವಿಧಾನ ಸಭೆ ಚುಣಾವಣೆಯಲ್ಲಿ ಎಚ್ ಡಿ ರೇವಣ್ಣ ಅವರ ವಿರುದ್ದ ಶ್ರೇಯಸ್ ಪಟೇಲ್ ಅವರು 3500 ಮತಗಳ ಅಂತರದಲ್ಲಿ ಸೋತಿದ್ದರು. ಈಗ ಮತ್ತೆ 2024 ಹಾಸನ ಲೋಕಸಭೆ ಚುಣಾವಣೆಗೆ ಶ್ರೇಯಸ್ ಪಟೇಲ್ ಕಾಂಗ್ರೆಸ್ ಅಭ್ಯರ್ಥಿ ಘೋಷನೆಯಾಗಿದ್ದರಿಂದ, ಇದೀಗ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ದ ಕಣಕ್ಕೆ ಇಳಿಯಲಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಪ್ರಜ್ವಲ್ ರೇವಣ್ಣರನ್ನು ಸೋಲಿಸಲು ಪ್ರಭಲ ಸ್ಪರ್ಧಿ ಶ್ರೇಯಸ್ ಪಟೇಲ್ ಅವರನ್ನೆ ಕಣ್ಣಕ್ಕೆ ಇಳಿಬೇಕೆಂದು ಕಾಂಗ್ರೆಸ್ ಲೆಕ್ಕಾಚಾರ ಮೊದಲಿನಿಂದಲೂ ಇತ್ತು. ಅದೇ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿದ್ದಾರೆ.

ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಶ್ರೇಯಸ್ ಪಟೇಲ್ ಕ್ಷೇತ್ರದಲ್ಲಿ ಓಡಾಟ ಆರಂಭಿಸಿದ್ದಾರೆ. ಕ್ಷೇತ್ರದ ಕಾಂಗ್ರೆಸ್ ನಾಯಕರು, ಮುಖಂಡರರನ್ನು ಭೇಟಿ ಮಾಡಿ ಪ್ರಚಾರದ ಕುರಿತು ಮಾತುಕತೆ ನಡೆಸಿದ್ದಾರೆ.

ಹಾಸನ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದರು. ಬಿಜೆಪಿ- ಜೆಡಿಎಸ್ ಮೈತ್ರಿ ಕೂಟದಲ್ಲಿ ಎರಡು ಪಕ್ಷಗಳ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿದೆ. ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ನಾಯಕರು ಯಾವುದೇ ಮಾತ್ರ ಮೈತ್ರಿಯ ಬಗ್ಗೆ ಯಾವುದೇ ಸೂಚನೆ ಬಂದಿಲ್ಲ. ಎನ್ನುತ್ತಿದ್ದು, ಬಿಜೆಪಿ ಅಭ್ಯರ್ಥಿಗೆ ಟಿಕೆಟ್ ಕೊಡಬೇಕೆಂದು ಹೇಳುತ್ತಿದ್ದಾರೆ.

ಹಾಸನ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದೇಶ ನಾಗೇಂದ್ರ ಅವರು, ಜಿಲ್ಲೆಯಲ್ಲಿ ಪಕ್ಷ ಇನ್ನೂ ಬಲಿಷ್ಠವಾಗಿದೆ. ಜೆಡಿಎಸ್ ಬಿಟ್ಟು ಬಿಜೆಪಿ ಸೇರಿರುವ ಎ ಟಿ ರಾಮಸ್ವಾಮಿ ಸಮರ್ಥ ಅಭ್ಯರ್ಥಿ ಆಗಲಿದ್ದಾರೆ. ಅವರಿಗೆ ಟಿಕೆಟ್ ನೀಡದರೆ ಒಳ್ಳೆದು ಎಂದು ವರಿಷ್ಠರಿಗೂ ಹೇಳಿದ್ದೇನೆ ಎನ್ನುತ್ತಾರೆ.

WhatsApp Image 2025 11 17 at 3.46.17 PM
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...