ಹಾಸನ | ಉಂಡ ಮನೆಗೆ ದ್ರೋಹ ಬಗೆದವರು ಏಕೈಕ ಕಾಂಗ್ರೆಸ್ ಶಾಸಕ; ನಿಖಿಲ್ ಕುಮಾರಸ್ವಾಮಿ

Date:

ರಜತ ಮಹೋತ್ಸವ ಅದ್ದೂರಿಯಾಗಿ ಜೆಡಿಎಸ್ ಪಕ್ಷದಿಂದ ಕಾರ್ಯಕ್ರಮವನ್ನು ಹಾಸನ ಜಿಲ್ಲಾ ಮಟ್ಟದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಹೆತ್ತ ತಾಯಿ, ಉಂಡ ಮನೆಗೆ ದ್ರೋಹ ಬಗೆದವರು ಇಂದು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕರಾಗಿದ್ದಾರೆ ಎಂದು ಪರೋಕ್ಷವಾಗಿ ಶಾಸಕ ಶಿವಲಿಂಗೇಗೌಡ ಅವರ ವಿರುದ್ಧ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ 

ಕಾಂಗ್ರೆಸ್ ಪಕ್ಷದ ಸಾಧನೆ ಬಗ್ಗೆ ಹೇಳಿಕೊಳ್ಳುವುದಕ್ಕಿಂತ ಹೆಚ್ಚಾಗಿ ದೇವೇಗೌಡರು ಕುಟುಂಬವನ್ನು ಟೀಕಿಸಿದ್ದೇ ಹೆಚ್ಚು  ಜಿಲ್ಲೆಯಲ್ಲಿ ಎಷ್ಟು ಜನ ಕಾಂಗ್ರೆಸ್ ಶಾಸಕರು ಗೆದ್ದಿದ್ದಾರೆ. ನಮ್ಮ ಜೊತೆಯಲ್ಲಿ ಇದ್ದವನ್ನು ನಮ್ಮ ಬೆನ್ನಿಗೆ ಚೂರಿ ಹಾಕಿ ಮಂತ್ರಿಗಿರಿ ಆಸೆಗಾಗಿ ಕಾಂಗ್ರೆಸ್ ಗೆ ಹೋದವರು ಇಂದು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕರಾಗಿದ್ದಾರೆ. ಆದರೂ ಅವರಿಗೆ ಮಂತ್ರಿಗಿರಿ ಸಿಕ್ಕಿಲ್ಲ. ಹಾಸನದಲ್ಲಿ ಮಂತ್ರಿಯಾಗುವರು ಯಾರು ಇಲ್ಲವೇ? ಬೆಂಗಳೂರಿನವರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದಾರೆ ಎಂದು ಪರೋಕ್ಷವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದರು.

ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಹಾಸನ ಜಿಲ್ಲೆಗೆ ಕಾಂಗ್ರೆಸ್ ಕೊಡುಗೆ ಏನು ಎಂಬುದನ್ನು ಜನತೆಗೆ ತಿಳಿಸಬೇಕಿದೆ, ಇತ್ತಿಚಿಗೆ ಹಾಸನದಲ್ಲಿ ಸರಣಿ ಸಮಾವೇಶ ಸರ್ಕಾರಿ ಕಾರ್ಯಕ್ರಮಗಳನ್ನು ಮಾಡಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಬದಲಾಗಿ ಕೇವಲ ದೇವೇಗೌಡರ ಕುಟುಂಬವನ್ನು ದೋಷಿಸುವ ಮೂಲಕ ಅದಕಷ್ಟೇ ಕಾರ್ಯಕ್ರಮ ಸೀಮಿತ  ಮಾಡಿಕೊಂಡಿರುವುದು ಕಾಂಗ್ರೆಸ್ ಕೊಡುಗೆ ಶೂನ್ಯ ಎಂಬುದನ್ನು ಸಾಬೀತು ಮಾಡಿದೆ. ಕರ್ನಾಟಕ ರಾಜ್ಯ ಪಾಪಿಗಳ ಕೈ ಸೇರಿದೆ ಜನರ ಹಿತ ಕಾಯುವ ನಾಯಕನ ಅಗತ್ಯವಿದೆ, ಅದರಿಂದ ಈ ರಾಜ್ಯಕ್ಕೆ ಸಾಕಷ್ಟು ಸೇವೆಯ ಅಗತ್ಯವಿದೆ. ಆದುದರಿಂದ ಮುಂದಿನ ಚುನಾವಣೆಯಲ್ಲಿ ಮತ್ತೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿ ರಾಜ್ಯವನ್ನು ಕಾಪಾಡುವ ಅಗತ್ಯ ಇದೆ ಎಂದು ರಾಜ್ಯದ ಜನರು ತನಗೆ ಸಲಹೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ | 2028ರ ಚುನಾವಣೆ: ಎನ್ ಡಿಎ ಸರ್ಕಾರ ಅಧಿಕಾರಕ್ಕೇರುವುದು ಶತಸಿದ್ಧ; ಸೂರಜ್ ರೇವಣ್ಣ

ಕುಮಾರಸ್ವಾಮಿ  ಅವರು ಮುಂದಿನ 2028 ರ ಚುನಾವಣೆಯಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ಇಡೀ ರಾಜ್ಯಕ್ಕೆ ನೀಡಿರುವ ಕೊಡಿಗೆ ಅಪಾರವಾಗಿದೆ. ಶತಾಯುಷಿ ದೇವೇಗೌಡರು ಬದುಕಿರುವಾಗಲೇ ಮತ್ತೆ ಕುಮಾರಸ್ವಾಮಿ ಅವರನ್ನು ಈ ರಾಜ್ಯದ ಮುಖ್ಯಮಂತ್ರಿ ಮಾಡಿ  ಇನ್ನಸ್ಟು ಜನಸೇವೆ ಮಾಡಲು ಅವಕಾಶ ಕಲ್ಪಿಸಬೇಕು ಈ ಸಲುವಾಗಿ ಈ ರಾಜ್ಯದ ಜನರ ಬೆಂಬಲ ಜೆಡಿಎಸ್ ಪಕ್ಷಕ್ಕೆ ಬೇಕಾಗಿದೆ. ಈ ಸಮಾವೇಶದಲ್ಲಿ ಸೇರಿರುವ ಜನಸಾಗರ ಜೆಡಿಎಸ್ ಶಕ್ತಿಗೆ ಹಿಡಿದ ಕೈಗನ್ನಡಿಯಾಗಿದೆ ಮುಂದಿನ ದಿನಗಳಲ್ಲಿ ಕೂಡ ಇದೇ ರೀತಿ ಎಲ್ಲರ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...