ಹಾಸನ ಟಿಕೆಟ್ ಗೊಂದಲ | ದೊಡ್ಡಗೌಡರ ನಿರ್ಧಾರವೇ ಅಂತಿಮ : ಇಂದೇ 2ನೇ ಪಟ್ಟಿ ಬಿಡುಗಡೆ

Date:

  • ದೇವೇಗೌಡರ ಅಂಗಳಕ್ಕೆ ಬಿದ್ದ ಹಾಸನ ಟಿಕೆಟ್‌ ಗೊಂದಲ
  • ವರಿಷ್ಠರ ನಿರ್ಧಾರವೇ ಅಂತಿಮ ಎಂದ ಸಹೋದರರು

ಜೆಡಿಎಸ್ ಪಕ್ಷದೊಳಗೆ ವಿವಾದ ಹುಟ್ಟಿಸಿರುವ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಗೊಂದಲ ನಿಭಾಯಿಸುವ ಜವಾಬ್ದಾರಿ ಮಾಜಿ ಪ್ರಧಾನಿ, ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಹೆಗಲೇರಿದೆ. ಈ ವಿಚಾರದಲ್ಲಿ ದೇವೇಗೌಡರ ನಿರ್ಧಾರವೇ ಅಂತಿಮ ಎಂದು ಕುಮಾರಸ್ವಾಮಿ ಹಾಗೂ ರೇವಣ್ಣ ಒಟ್ಟಾಗಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಇಬ್ಬರೂ ನಾಯಕರು, ಪಕ್ಷದ ಹಿತಕ್ಕಾಗಿ ವರಿಷ್ಠರ ಆಣತಿಯಂತೆ ನಡೆಯುವುದಾಗಿ ಹೇಳಿಕೊಂಡಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಹಾಸನ ವಿಚಾರದಲ್ಲಿ ನನ್ನ ನಿಲುವು ಹೇಳಿದ್ದೇನೆ. ಎಚ್ ಡಿ ದೇವೇಗೌಡರು ಅನುಭವದ ಮಾತು ಹೇಳಿದ್ದಾರೆ. ಟಿಕೆಟ್ ಬಗ್ಗೆ ಅವರೇ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಇದೇ ವೇಳೆ ಟಿಕೆಟ್ ಹಂಚಿಕೆ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಕುಮಾರಸ್ವಾಮಿ, ಇಂದು (ಏಪ್ರಿಲ್ 3) ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಸಾಧ್ಯತೆ ಬಗ್ಗೆ ಸುಳಿವು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಹೊಳೆನರಸೀಪುರದಲ್ಲಿ ಮಾತನಾಡಿ ಎಚ್ಡಿಕೆ ಸಹೋದರ ಎಚ್ಡಿ ರೇವಣ್ಣ, ದೇವೇಗೌಡರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದರು.

ಈ ಸುದ್ದಿ ಓದಿದ್ದೀರಾ? :ಆದಿ ಚುಂಚನಗಿರಿ ಸ್ವಾಮೀಜಿಗಳಿಗೊಂದು ಬಹಿರಂಗ ಪತ್ರ

ಟಿಕೆಟ್ ವಿಚಾರವಾಗಿ ನಾವು ದೇವೇಗೌಡರ ಜೊತೆ ರಾತ್ರಿ 11ರವರೆಗೆ ಹೆಚ್.ಡಿ ಕುಮಾರಸ್ವಾಮಿ ಮತ್ತು ಹೆಚ್.ಡಿ ದೇವೇಗೌಡರ ಜೊತೆ ಚರ್ಚಿಸಿರುವೆ. 60 ವರ್ಷಗಳ ರಾಜಕೀಯ ಅನುಭವ ದೇವೇಗೌಡರಿಗಿದೆ. ಅದನ್ನು ಬಳಸಿಕೊಂಡು ಮುನ್ನಡೆಯಲು ಸಿದ್ಧರಾಗಿದ್ದೇವೆ ಎಂದು ರೇವಣ್ಣ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...