ದ್ವೇಷ ಭಾಷಣ | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ: ಜ.10ಕ್ಕೆ ವಿಚಾರಣೆ ಮುಂದೂಡಿಕೆ

Date:

ಮುಸ್ಲಿಮ್‌ ಮಹಿಳೆಯರ ಅವಹೇಳನ ಮತ್ತು ಧಾರ್ಮಿಕ ದ್ವೇಷ ಬಿತ್ತುವ ಭಾಷಣಗೈದ ಆರೋಪ ಎದುರಿಸುತ್ತಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಜಾಮೀನು ಅರ್ಜಿಯ ವಿಚಾರಣೆಯು ಇಂದು ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಸೆಶನ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಿತು.

ಪ್ರಕರಣದ ದೂರುದಾರೆ, ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್‌ ಅವರ ಪರವಾಗಿ ವಕೀಲ ಎಸ್‌ ಬಾಲನ್‌ ಅವರು ಸಿಆರ್‌ಪಿಸಿ ಸೆಕ್ಷನ್‌ 301 ಮತ್ತು 302 ಅಡಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್‌ಗೆ ನೀಡಿರುವ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಬೇಕು ಎಂದು ಹಿರಿಯ ವಕೀಲ ಎಸ್ ಬಾಲನ್ ವಾದ ಮಂಡಿಸಿದರು‌.

ತನ್ನ ವಾದದ ವೇಳೆ, “ಪ್ರಭಾಕರ ಭಟ್ ಈ ರೀತಿ ಕೃತ್ಯಗಳ ಚಾಳಿ ಹೊಂದಿರುವ ವ್ಯಕ್ತಿ. ದ್ವೇಷ ಭಾಷಣ ಎನ್ನುವುದು ದೇಶ ಒಡೆಯುವ ಕೃತ್ಯ ಎಂದು ಸುಪ್ರಿಂ ಕೋರ್ಟ್ 2021 ಅಕ್ಟೋಬರ್ 21ರ ಆದೇಶದಲ್ಲಿ ಹೇಳಿದೆ. ಹಾಗಾಗಿ ಇದು ದೇಶದ್ರೋಹದ ಕೃತ್ಯ” ಎಂದು ಪ್ರಾಥಮಿಕ ವಾದ ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದರೆ ಕಲ್ಲಡ್ಕ ಪ್ರಭಾಕರ್ ಭಟ್ ಮಧ್ಯಂತರ ಜಾಮೀನು ತಕ್ಷಣ ರದ್ದು ಮಾಡಬೇಕು. ದೇಶಕ್ಕಿಂತ ಮಿಗಿಲು ಯಾರೂ ಇಲ್ಲ. ಸುಪ್ರಿಂ ಕೋರ್ಟ್ ದ್ವೇಷ ಭಾಷಣದ ಬಗ್ಗೆ ಆದೇಶ ನೀಡಿದ್ದು ಮಾತ್ರವಲ್ಲ, ತೀಕ್ಷ್ಣವಾದ ಸೂಚನೆಗಳನ್ನು ಎಲ್ಲ ರಾಜ್ಯಗಳಿಗೆ ನೀಡಿದೆ” ಎಂದು ಬಾಲನ್ ವಾದ ಮಂಡಿಸಿದರು. ವಾದವನ್ನು ಆಲಿಸಿದ ನ್ಯಾಯಾಲಯವು, ಅರ್ಜಿಯ ವಿಚಾರಣೆಯನ್ನು ಜನವರಿ 10ಕ್ಕೆ ಮುಂದೂಡಿದೆ.

ಕಲ್ಲಡ್ಕ ಪ್ರಭಾಕರ್ ಭಟ್ ಪರವಾಗಿ ಹಿರಿಯ ವಕೀಲರು ಹಾಜರಾಗದೇ ಇದ್ದುದ್ದರಿಂದ ಅವರ ಕಿರಿಯ ವಕೀಲರು ಸಮಯ ಕೇಳಿದರು. “ಆರೋಪಿ ವಿರುದ್ದ ಚಾರ್ಜ್ ಶೀಟ್ ಸಿದ್ಧವಾಗಿದೆ” ಎಂದು ನ್ಯಾಯಾಧೀಶರು ಎಸ್ ಬಾಲನ್ ಅವರಿಗೆ ತಿಳಿಸಿದರು ಎಂದು ಗೊತ್ತಾಗಿದೆ.

ಪ್ರಕರಣದ ಹಿನ್ನೆಲೆ:

ಹನುಮ ಜಯಂತ್ಯುತ್ಸವದ ಅಂಗವಾಗಿ ಡಿಸೆಂಬರ್‌ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆಯು ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಪ್ರಭಾಕರ್‌ ಭಟ್‌ ಮುಸ್ಲಿಮರ ವಿರುದ್ಧ ಧಾರ್ಮಿಕ ದ್ವೇಷಕಾರಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್‌ ನೀಡಿದ್ದರು.

ಈ ದೂರಿನ ಅನ್ವಯ ಶ್ರೀರಂಗಪಟ್ಟಣ ಟೌನ್‌ ಠಾಣೆಯ ಪೊಲೀಸರು ಪ್ರಭಾಕರ್‌ ಭಟ್‌ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 294 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಮಾತುಗಳನ್ನು ಆಡುವುದು), 509 (ಮಹಿಳೆಯ ಖಾಸಗಿತನಕ್ಕೆ ಸಂಬಂಧಿಸಿದ ಮಾತುಗಳನ್ನಾಡುವುದು), 153ಎ (ಧರ್ಮದ ಆಧಾರದಲ್ಲಿ ಸಮುದಾಯಗಳ ನಡುವೆ ದ್ವೇಷ ಹರಡುವುದು) ಮತ್ತು 298 (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು) ಅಡಿ ಪ್ರಕರಣ ದಾಖಲಿಸಿಕೊಂಡಿದ್ದರು.

ಆರೋಪಿಯನ್ನು ಬಂಧಿಸಲ್ಲ ಎಂದಿದ್ದ ಸರ್ಕಾರಿ ವಕೀಲರು!

ತನ್ನ ವಿರುದ್ಧದ ಎಫ್‌ಐಆರ್ ಅನ್ನು ವಜಾಗೊಳಿಸುವಂತೆ ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ಹೈಕೋರ್ಟಿನ ಮೊರೆ ಹೋಗಿದ್ದರು. ಈ ನಡುವೆ ಆರೋಪಿಯನ್ನು ನಾವು ಬಂಧಿಸಲ್ಲ ಎಂದು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದರಿಂದ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...