ಮುಸ್ಲಿಂ ಸಮುದಾಯ ವಿರುದ್ಧ ದ್ವೇಷ ಕಾರುತ್ತಿರುವ ಮೋದಿ ನಡೆ ಆತಂಕ ಹುಟ್ಟಿಸಿದೆ: ಸಚಿವ ಮಹದೇವಪ್ಪ

Date:

ಆರ್ಥಿಕವಾಗಿ ಹಿಂದುಳಿದ ವರ್ಗಗಳ ಹೆಸರಿನಲ್ಲಿ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿ ಆರ್ಥಿಕತೆಯ ಆಧಾರದಲ್ಲಿ ಮೀಸಲಾತಿಯನ್ನು ಘೋಷಿಸಿದ್ದ ಪ್ರಧಾನಿಗಳು ಇದೀಗ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಾನು ಮೀಸಲಾತಿಯ ಪರವಾಗಿದ್ದೇನೆ ಎಂದು ಹೇಳುತ್ತಿರುವುದು ನಿಜಕ್ಕೂ ಬೇಜವಾಬ್ದಾರಿತನದ ಪ್ರತೀಕ ಎಂದು ಸಚಿವ ಡಾ. ಹೆಚ್ ಸಿ ಮಹದೇವಪ್ಪ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಮೀಸಲಾತಿಯು ಐಸಿಹಾಸಿಕ ದೌರ್ಜನ್ಯ ಹಾಗೂ ಅವಮಾನಕ್ಕೆ ಒಳಗಾದ ಜನ ಸಮುದಾಯಕ್ಕೆ ನೀಡಬೇಕಾದ ಅಂಶ ಎಂಬ ಸಂಗತಿಯು ಸಂವಿಧಾನದಲ್ಲಿ ಸ್ಪಷ್ಟವಾಗಿ ಇದ್ದರೂ ಕೂಡಾ ಅದನ್ನು ಸಂಪೂರ್ಣವಾಗಿ ಬದಿಗೆ ತಳ್ಳಿದ್ದಾರೆ” ಎಂದು ಕಿಡಿಕಾರಿದರು.

“ಭಾರತದ ವಿಭಜನೆ ಆದ ಸಂದರ್ಭದಲ್ಲಿ ಭಾರತವನ್ನು ತೊರೆದು ಪಾಕಿಸ್ತಾನಕ್ಕೆ ಹೋದ ಮುಸ್ಲಿಮರು ಪಾಕಿಸ್ತಾನದ ಸದಸ್ಯರಾದರು. ಭಾರತವನ್ನೇ ನಂಬಿ ಇಲ್ಲೇ ಇದ್ದ ಮುಸ್ಲಿಮರು ಭಾರತೀಯರಾದರು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆ ಸಂದರ್ಭದಲ್ಲಿ ಹೇಳಿದ ಮಾತಿದು; ಈ ದೇಶದ ಅಲ್ಪಸಂಖ್ಯಾತರು, ಇಲ್ಲಿನ ಬಹುಸಂಖ್ಯಾತರ ಮೇಲೆ ನಂಬಿಕೆಯಿಟ್ಟು ಇಲ್ಲಿ ಜೀವಿಸಲು ನಿರ್ಧರಿಸಿದ್ದಾರೆ. ನಮ್ಮ ಮೇಲೆ ವಿಶ್ವಾಸ ಇಟ್ಟ ಅವರೊಂದಿಗೆ ಸೌಹಾರ್ದತೆಯಿಂದ ಇದ್ದು ಅವರನ್ನು ಕಾಪಾಡಬೇಕಾದ್ದು ಭಾರತೀಯರಾದ ನಮ್ಮ ಜವಾಬ್ದಾರಿ ಎಂದಿದ್ದರು” ಎಂದು ನೆನಪಿಸಿದ್ದಾರೆ.

“ಆದರೆ ಇತ್ತೀಚೆಗೆ ಬಾಬಾ ಸಾಹೇಬರ ಮೇಲೆ ನಕಲಿ ಪ್ರೀತಿ ತೋರುತ್ತಿರುವ ಪ್ರಧಾನಿಗಳು ಅವರ ಮಾತುಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ತಾನೊಬ್ಬ ಎಲ್ಲ ಸಮುದಾಯಗಳ ಪ್ರಧಾನಿ ಎಂಬುದನ್ನು ಮರೆತು ಚುನಾವಣೆಯ ಕಾರಣಕ್ಕೆ ಮುಸ್ಲಿಮ್ ಸಮುದಾಯಗಳ ನೇರವಾಗಿ ದ್ವೇಷ ಕಾರುತ್ತಿರುವುದು ನನ್ನಲ್ಲಿ ಆತಂಕ ಹುಟ್ಟಿಸಿದೆ”‌ ಎಂದು ಆರೋಪಿಸಿದ್ದಾರೆ.

“ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಮೀಸಲಾತಿ ವಿರೋಧಿ ತಂತ್ರವನ್ನು ಪಾಲಿಸುತ್ತಿದ್ದ ಮತ್ತು ನಾವು ಇರುವುದೇ ಸಂವಿಧಾನ ಬದಲಾಯಿಸಲು ಎಂದು ಹೇಳುವಂತಹ ಸಂಸದರು ಮತ್ತು ಸಚಿವರನ್ನು ತನ್ನ ಸಂಪುಟದಲ್ಲಿ ಇಟ್ಟುಕೊಂಡಿರುವ ಪ್ರಧಾನಿಗಳು ಮೂಲತಃ ಮೀಸಲಾತಿಯ ವಿರೋಧಿಯೇ ಆಗಿದ್ದು ಚುನಾವಣಾ ಕಾರಣಕ್ಕಾಗಿ ಸಂವಿಧಾನದ ರಕ್ಷಣೆ ಎಂಬ ಪದವನ್ನು ಬಳಸುತ್ತಿರುವ ಇವರ ಕುತಂತ್ರದ ಮಾತುಗಳನ್ನು ಯಾರೂ ನಂಬಬಾರದು ಮತ್ತು ಈ ಸಂವಿಧಾನ ವಿರೋಧಿಗಳಿಗೆ ನಮ್ಮ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಬಾಬಾ ಸಾಹೇಬರು ಕಲ್ಪಿಸಿದ ಮತದಾನದ ಮೂಲಕವೇ ತಕ್ಕ ಉತ್ತರ ನೀಡಿ ಸಂವಿಧಾನದ ಆಶಯಗಳನ್ನು ಉಳಿಸುವ ಕೆಲಸ ಮಾಡಬೇಕೆಂದು ಈ ಮೂಲಕ ಎಲ್ಲರಲ್ಲೂ ಅರಿಕೆ ಮಾಡಿಕೊಳ್ಳುತ್ತೇನೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...