ಹಾವೇರಿ ಗ್ಯಾಂಗ್ ರೇಪ್ ಪ್ರಕರಣ | ಎಸ್‌ಐಟಿ ತನಿಖೆಗೆ ಆಗ್ರಹಿಸಿ ಜ.20 ರಂದು ಬೃಹತ್ ಪ್ರತಿಭಟನೆ: ಬೊಮ್ಮಾಯಿ

Date:

ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ಐಟಿಗೆ ವಹಿಸುವಂತೆ ಜನವರಿ 20 ಹಾವೇರಿ ಎಸ್ಪಿ ಕಚೇರಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪ್ರತಿಭಟನೆಯಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಅನೇಕ ನಾಯಕರು ಹಾಗೂ ಜಿಲ್ಲಾ ಮುಖಂಡರು ಪಾಲ್ಗೊಳ್ಳಲಿದ್ದಾರೆ” ಎಂದರು.

“ಹಾವೇರಿಯಲ್ಲಿ ನೈತಿಕ ಪೊಲೀಸ್ ಗಿರಿ ಮಾಡಿ ಗ್ಯಾಂಗ್ ರೇಪ್ ಮಾಡಿರುವ ಪ್ರಕರಣವನ್ನು ಪೊಲೀಸರು ಮುಚ್ಚಿ ಹಾಕುವ ಯತ್ನ ಮಾಡಿದ್ದರು. ಹಾವೇರಿ ಎಸ್ಪಿ, ಹೊಮ್‌ಮಿನಿಸ್ಟರ್ ಅದನ್ನು ಒಪ್ಪಿಕೊಳ್ಳಲು ಸಿದ್ದರಿರಲಿಲ್ಲ. ಆದರೆ, ಈಗ ಹಾನಗಲ್ ಪೊಲೀಸರನ್ನು ಅವರೇ ಅಮಾನತು ಮಾಡಿದ್ದಾರೆ‌. ಹೀಗಾಗಿ ಪೊಲೀಸರಿಂದ ಲೋಪವಾಗಿರುವುದನ್ನು ಒಪ್ಪಿಕೊಂಡಂತಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ಕಾಪಾಡುವಲ್ಲಿ ರಾಜಕಾರಣ ಬಹಳ ಪಾತ್ರ ವಹಿಸುತ್ತಿದೆ. ಹಾನಗಲ್ ಪೊಲೀಸರು ಕಾನೂನು ಪ್ರಕಾರ ನಡೆದುಕೊಂಡಿಲ್ಲ. ಆ ಹೆಣ್ಣು ಮಗಳಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ. ಈ ಬಗ್ಗೆ ಸಿಎಂ ಕೂಡ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ ಎಸ್ಐಟಿ ತನಿಖೆ ನಡೆಸುವಂತೆ ಆಗ್ರಹಿಸಿ ಜನವರಿ 20 ರಂದು ಹಾವೇರಿ ಎಸ್ಪಿ ಕಚೇರಿ ಎದುರು ಪ್ರತಿಭಟನೆ ಮಾಡಲು ತೀರ್ಮಾನ ಮಾಡಿದ್ದೇವೆ. ಸಿಎಂ ಎಸ್ಐಟಿ ತನಿಖೆಗೆ ನಿರಾಕರಿಸಿರುವುದು ಅಪರಾಧ ಮಾಡುವವರಿಗೆ ಪುಷ್ಟಿ ಕೊಟ್ಟಂತೆ ಆಗುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಂಧಿ ಪ್ರಣೀತ ರಾಮನೇ ಬೇರೆ; ಮೋದಿ ರಾಮನೇ ಬೇರೆ

ಸಿಎಂಗೆ ಮೋದಿ ಫೋಬಿಯಾ

“ಸಿಎಂ ಸಿದ್ದರಾಮಯ್ಯ ಅವರಿಗೆ ಮೋದಿ ಫೋಬಿಯಾ ಇದೆ.‌ ಇಡಿ ದೇಶದಲ್ಲಿ ಪ್ರಧಾನಿ ನರೇಂದ್ರ ಮೊದಿ ದಕ್ಷ ಆಡಳಿತ ನೀಡುತ್ತಿದ್ದಾರೆ. ಎಲ್ಲ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ‌. ಮತ್ತೆ ಮೂರನೆ ಬಾರಿಗೆ ಪ್ರಧಾನಿ ಆಗಲಿದ್ದಾರೆ. ಹೀಗಾಗಿ ಅದನ್ನು ಸಹಿಸಿಕೊಳ್ಳಲಾಗದೇ ಸಿದ್ದರಾಮಯ್ಯ ಅವರ ವಿರುದ್ದ ಅನಗತ್ಯ ಆರೋಪ ಮಾಡುತ್ತಾರೆ” ಎಂದು ಕಿಡಿಕಾರಿದರು.

”ಸಿಎಂ ಪುತ್ರ ಯತೀಂದ್ರ ಅವರೇ ಹೇಳಿರುವುದನ್ನು ಕೇಳಿದರೆ, ಕಾಂಗ್ರೆಸ್ ಹೆಚ್ಚು ಸೀಟು ಬಂದರೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರೆ ಅಂತ ಹೇಳಿದ್ದಾರೆ. ಕಡಿಮೆ ಸೀಟು ಬಂದರೆ ಸಿಎಂ ಸ್ಥಾನ ಹೋಗುವ ಆತಂಕ ಅವರಿಗೆ ಕಾಡುತ್ತಿದೆ. ಅದಕ್ಕಾಗಿ ರಾಜ್ಯಕ್ಕೆ ಮೋದಿ ಬಂದಾಗೊಮ್ಮೆ ಸುಳ್ಳು ದಾಖಲೆಗಳನ್ನು ನೀಡಿ ಜನರ ದಾರಿ ತಪ್ಪಿಸಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“15 ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಅನುದಾನ ಶೇ 4.7 ನಿಂದ ಶೇ 3.6 ಗೆ ಇಳಿಯಲು ಸಿದ್ದರಾಮಯ್ಯ ಅವರೇ ಕಾರಣ. ಅವರು ಸರಿಯಾಗಿ ರಾಜ್ಯದ ವಸ್ತು ಸ್ಥಿತಿ ಬಗ್ಗೆ ಮಾಹಿತಿ ನೀಡಿಲ್ಲ. ನಮ್ಮ ಅವಧಿಯಲ್ಲಿಯೂ ಪ್ರವಾಹ ಬಂದಾಗ ಹಿಂದಿನ ಯುಪಿಎ ಸರ್ಕಾರ ಪರಿಹಾರ ನೀಡಿತ್ತಾ? ನಾವು ಕೇಂದ್ರದ ಅನುದಾನಕ್ಕಾಗಿ ಕಾಯದೇ 2,500 ಕೋಟಿ ರೂ. ಪರಿಹಾರ ನೀಡಿದ್ದೆವು. ಕರ್ನಾಟಕದ ಜನರು ನಿಮಗೆ ಮತ ಹಾಕಿದ್ದು, ಒಳ್ಳೆಯ ಆಡಳಿತ ನೀಡಲಿ ಎಂದು ಆದರೆ, ನೀವು ಅವೈಜ್ಞಾನಿಕ ಗ್ಯಾರಂಟಿ ಜಾರಿ ಮಾಡಿ ಆರ್ಥಿಕತೆ ಹಳಿ ತಪ್ಪಿಸುತ್ತಿದ್ದೀರಿ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...