ಅನಾರೋಗ್ಯ | ರಾಜ್ಯಸಭಾ ಕಲಾಪಕ್ಕೆ ಎಚ್‌ ಡಿ ದೇವೇಗೌಡ ಗೈರು

Date:

ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ನಡೆದ ಮಹತ್ವದ ರಾಜ್ಯಸಭೆಯ ಕಲಾಪದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಗೈರು ಹಾಜರಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಎಚ್‌ ಡಿ ದೇವೇಗೌಡ, ‘ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ಮಹತ್ವದ ಸಭೆ ಆಯೋಜಿಸಲಾಗಿತ್ತು. ಸೊಂಟ ನೋವಿನ ಹಿನ್ನೆಲೆಯಲ್ಲಿ ಬಹಳ ಹೊತ್ತು ಆ ಸಭೆಯಲ್ಲಿ ಭಾಗವಹಿಸಲಾಗಲಿಲ್ಲ. ಮಹತ್ವದ ಸಭೆಯಾಗಿದ್ದರಿಂದ ಹತ್ತು ನಿಮಿಷವಷ್ಟೇ ಸಭೆಯಲ್ಲಿ ಕೂತಿದ್ದೆ. ಆ ನಂತರ ವೈದ್ಯರಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸಾಗಿ ವಿಶ್ರಾಂತಿ ಪಡೆಯುತ್ತಿದ್ದೇನೆ. ನೋವು ಕಡಿಮೆಯಾದರೆ ಬುಧವಾರ ನಡೆಯಲಿರುವ ಕಲಾಪದಲ್ಲಿ ಭಾಗವಹಿಸಲು ಶ್ರಮಿಸುತ್ತೇನೆ’ ಎಂದು ತಿಳಿಸಿದ್ದಾರೆ.

ವಿವಾದಾತ್ಮಕ ದಿಲ್ಲಿ ಸೇವೆಗಳ ಮಸೂದೆಯನ್ನು ಸೋಮವಾರ ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಗಿತ್ತು. ಐದೂವರೆ ಗಂಟೆಗಳ ಕಾಲ ನಡೆದ ವಾಕ್ಸಮರದ ಬಳಿಕ ಮಸೂದೆ ಕೇಂದ್ರ ಸರ್ಕಾರದ ಪರವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತದಾನ ನಡೆಯಲಿದ್ದ ಹಿನ್ನೆಲೆಯಲ್ಲಿ ವಯೋ ಸಹಜ ಅನಾರೋಗ್ಯದ ನಡುವೆಯೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಜ್ಯಸಭೆಗೆ ವೀಲ್‌ಚೇರ್‌ನಲ್ಲಿ ಬಂದು ಕಲಾಪದಲ್ಲಿ ಭಾಗವಹಿಸಿದ್ದರು. ಆದರೆ ಇದನ್ನು ಬಿಜೆಪಿ ಟೀಕೆ ಮಾಡಿ, ಟ್ವೀಟ್ ಮಾಡಿದೆ.

ಅನುಮಾನ: ವಿವಾದಾತ್ಮಕ ದಿಲ್ಲಿ ಸೇವೆಗಳ ಮಸೂದೆಯನ್ನು ರಾಜ್ಯಸಭೆಯಲ್ಲಿ ಸೋಮವಾರ ಮತಕ್ಕೆ ಹಾಕಲಾಗಿತ್ತು. ಈ ಮಸೂದೆಯ ಪರವಿರುವುದು ಎನ್‌ಡಿಎ ಬೆಂಬಲಿಸಿದಂತಾಗುತ್ತದೆ, ವಿರೋಧಿಸುವುದು ಇಂಡಿಯಾ ಒಕ್ಕೂಟಗಳೊಂದಿಗೆ ಗುರುತಿಸಿಕೊಂಡಂತಾಗುತ್ತದೆ. ದೇವೇಗೌಡರು ಆರೋಗ್ಯದ ನೆಪ ಹೇಳಿ ಭಾಗವಹಿಸದಿರುವುದು, ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ರಾಜಕೀಯ ನಾಯಕರು ಹೇಳುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...