ಮಹಿಳೆಯರಿಗೆ 2,000 ಕೊಡ್ತಿದ್ದಾರೆ; ಗಂಡಸ್ರು ದುಡಿಮೆಯ 90% ಕುಡಿಯುತ್ತಿದ್ದಾರೆ: ಎಚ್‌ಡಿಕೆ

Date:

ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಾತನಾಡುವ ಮೂಲಕ ಮಾಜಿ ಮುಖ್ಯಮಂತ್ರಿ, ಮಂಡ್ಯ ಲೋಕಸಭಾ ಅಭ್ಯರ್ಥಿ ಎಚ್‌.ಡಿ ಕುಮಾರಸ್ವಾಮಿ ಮತ್ತೆ-ಮತ್ತೆ ವಿವಾದಕ್ಕೆ ಸಿಲುಕುತ್ತಿದ್ದಾರೆ. ಈ ಹಿಂದೆ, ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದಿದ್ದ ಕುಮಾರಸ್ವಾಮಿ, ಇದೀಗ, ಯೋಜನೆಯ ಫಲಾನುಭವಿಗಳಿರುವ ಕುಟುಂಬದ ಪುರುಷರು ಕುಡುಕರು ಎಂಬ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ.

ತುಮಕೂರು ಜಿಲ್ಲೆಯ ಮಧುರಿಯಲ್ಲಿ ನಡೆದ ವಿ ಸೋಮಣ್ಣ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, “ಇವತ್ತು ನಮ್ಮ ತಾಯಂದಿರಿಗೆ 2,000 ರೂ. ಕೊಡ್ತಿದ್ದಾರೆ. ಅದೇ ಕುಟುಂಬದಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ದುಡಿದು ಬರುವ ಯಜಮಾನ್ರು (ಗಂಡಸರು) ತಮ್ಮ ದುಡಿಮೆಯಲ್ಲಿ 80ರಿಂದ 90% ಹಣವನ್ನು ಕುಡಿತಕ್ಕೆ ಬಳಸುತ್ತಿದ್ದಾರೆ” ಎಂದು ಹೇಳಿಕೆ ನೀಡಿದ್ದಾರೆ.

“ಮೊದಲೆಲ್ಲ ಗಂಡಸರು ಸಂಜೆ ವೇಳೆ ಸ್ನೇಹಿತರ ಜೊತೆ ಹೋದ್ರೆ 25 ರೂಪಾಯಿಯಲ್ಲಿ ಕುಡಿತ ಮುಗಿಸಿಕೊಂಡು ಬರುತ್ತಿದ್ದರು. ಈಗ ಸಣ್ಣ ಬಾಟಲ್‌ಗೆ 250, 300 ರೂ. ಕೊಡಬೇಕು. ಅಂದರೆ, ತಿಂಗಳಿಗೆ ಐದಾರು ಸಾವಿರ ರೂಪಾಯಿ ಆಗುತ್ತದೆ. ಇದು ಪಿಕ್ ಪಾಕೆಟ್ ಸರ್ಕಾರ” ಎಂದು ಟೀಕಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...