ಚುನಾವಣೆ ಪೂರ್ವ ಕಾಂಗ್ರೆಸ್‌ನಿಂದ, ಚುನಾವಣೆ ಬಳಿಕ ಬಿಜೆಪಿಯಿಂದ ಆಪರೇಷನ್ ನಡೆಯಲಿದೆ: ಕುಮಾರಸ್ವಾಮಿ

Date:

  • ರಾಜ್ಯ ರಾಜಕಾರಣದಲ್ಲಿ ಈಗ ವಲಸೆ ಪರ್ವ ಆರಂಭವಾಗಿದೆ
  • ಆಪರೇಷನ್ ಕಮಲದಲ್ಲಿ ಬಿಜೆಪಿ ಗಿನ್ನಿಸ್ ದಾಖಲೆ ಮಾಡುತ್ತದೆ

ಚುನಾವಣೆಗೂ ಮೊದಲು ಕಾಂಗ್ರೆಸ್‌ನವರು ಆಪರೇಷನ್ ಹಸ್ತ ಮಾಡಿದರೆ, ಚುನಾವಣೆ ಬಳಿಕ ಅಧಿಕಾರಕ್ಕಾಗಿ ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಾರೆ ಎಂದು ಜೆಡಿಎಸ್ ಮುಖಂಡ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕುಟುಕಿದರು.

ಯಾದಗಿರಿ ಗುರುಮಿಠಕಲ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಈಗ ರಾಜ್ಯ ರಾಜಕಾರಣದಲ್ಲಿ ವಲಸೆ ಪರ್ವ ಆರಂಭವಾಗಿದೆ.

ಸದ್ಯ ಬಿಜೆಪಿಯಿಂದ ಕಾಂಗ್ರೆಸ್‌ಗೆ ನಾಯಕರ ವಲಸೆ ಪ್ರಾರಂಭವಾಗಿದೆ. ಕಾಂಗ್ರೆಸ್‌ನಿಂದ ಆಪರೇಷನ್ ಹಸ್ತ ಬಿಜೆಪಿಯಿಂದ ಆಪರೇಷನ್ ಕಮಲ ನಡೆಯುತ್ತಲೇ ಇರುತ್ತದೆ. ಇದರ ಬಗ್ಗೆ ನಾನು ವೈಯಕ್ತಿಕವಾಗಿ ಟೀಕೆ ಮಾಡುವುದಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಮಲ್ಲಿಕಾರ್ಜುನ ಖರ್ಗೆಯವರ ರಾಜಕೀಯ ಭವಿಷ್ಯ ಮುಗಿಸುತ್ತೇನೆ ಎಂದು ಚಿಂಚನಸೂರ್ ಹೇಳಿದ್ದರು. ಈಗ ಅವರು ಅದೇ ಪಕ್ಷಕ್ಕೆ ಹೋಗಿದ್ದಾರೆ. ಇದು ಚಿಂಚನಸೂರು ನೈತಿಕತೆ ಹಾಗೂ ಕಾಂಗ್ರೆಸ್‌ನಲ್ಲಿರುವ ಅಭ್ಯರ್ಥಿಗಳ ಕೊರತೆಗೆ ಹಿಡಿದ ಕೈಗನ್ನಡಿ ಎಂದು ಕುಮಾರಸ್ವಾಮಿ ಹೇಳಿದರು.

ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿರುವ ಸಂಖ್ಯೆ ತೆಗೆದು ನೋಡಿದರೆ, ಈ ವಿಚಾರದಲ್ಲಿ ಇವರು ಗಿನ್ನಿಸ್ ದಾಖಲೆ ಮಾಡಬಹುದು ಎಂದು ಹೆಚ್ಡಿಕೆ ವ್ಯಂಗ್ಯವಾಡಿದರು.

ಇದೇ ವೇಳೆ ಸಿದ್ದರಾಮಯ್ಯ ಸ್ಪರ್ಧಾಕ್ಷೇತ್ರ ಆಯ್ಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಹೆಚ್. ಡಿ ಕುಮಾರಸ್ವಾಮಿ, ಸಿದ್ಧರಾಮಯ್ಯ ಬಗ್ಗೆ ಅನುಕಂಪ ಬೇಡ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ನಮ್ಮ ಅಭ್ಯರ್ಥಿ ವಿರುದ್ಧ ಯಾರು ಸ್ಪರ್ಧಿಸುತ್ತಾರೆ ಎಂಬುವುದು ನನಗೆ ಬೇಡ. ನನಗೆ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು ಅಷ್ಟೆ. ಈ ಬಾರಿ ಚುನಾವಣೆಯಲ್ಲಿ ನಾವು 123 ಸ್ಥಾನ ಗೆಲ್ಲುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...