ಜೆಡಿಎಸ್ ಜಾತಿಗೆಟ್ಟಿದೆ ಎಂದ ಕಾಂಗ್ರೆಸ್‌ಗೆ ಚಾಟಿ ಬೀಸಿದ ಹೆಚ್ ಡಿ ಕುಮಾರಸ್ವಾಮಿ

Date:

  • ಕಾಂಗ್ರೆಸ್, ಚುನಾವಣೆ ಹೊತ್ತಿಗೆ ಸುಳ್ಳುಗಳ ಸರಮಾಲೆಯನ್ನೇ ಪೋಣಿಸುತ್ತಿದೆ
  • ಈಗಿನ ಕಾಂಗ್ರೆಸ್ ಮಹಾತ್ಮ ಗಾಂಧೀಜಿ ಅವರ ಕಾಲದ ಕಾಂಗ್ರೆಸ್ ಅಲ್ಲ

ಕಾಂಗ್ರೆಸ್ ಕುಟಿಲತೆ, ಕಪಟತನದ ಕಾಮಾಲೆ ಕಾಯಿಲೆಯಿಂದ ಬಳಲುತ್ತಿದೆ. ಕೈ ಕೊಡುವ ಚಾಳಿ ಕಾಂಗ್ರೆಸ್ ಪಕ್ಷದ ಜನ್ಮಕ್ಕೆ ಅಂಟಿದ ಆಜನ್ಮ ಜಾಢ್ಯ. ಒಳಗೊಂದು ಮುಖ, ಹೊರಗೊಂದು ಮುಖವುಳ್ಳ ಮುಖೇಡಿ ಪಕ್ಷವೇ ಕಾಂಗ್ರೆಸ್. ಅಂಥ ಕಾಂಗ್ರೆಸ್, ಚುನಾವಣೆ ಹೊತ್ತಿಗೆ ಸುಳ್ಳುಗಳ ಸರಮಾಲೆಯನ್ನೇ ಪೋಣಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ದೂರಿದ್ದಾರೆ.

ಜೆಡಿಎಸ್ ಪಕ್ಷ ಜಾತಿಗೆಟ್ಟಿದೆ ಎಂದು ಟೀಕೆ ಮಾಡಿದ್ದ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಬಗ್ಗೆ ಸರಣಿ ಟ್ವೀಟ್ ಮಾಡಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.

“ಪ್ರಧಾನಿಯಾಗಿದ್ದ ಕನ್ನಡದ ಹೆಮ್ಮೆಯ ಪುತ್ರನನ್ನು ಕೆಳಗೆಳೆದ ಕಿರಾತಕ ಪಕ್ಷ, ಅಹಿಂದ ಎನ್ನುತ್ತಲೇ ಬಿಜೆಪಿ ಹಿಂದೆಬಿದ್ದು ಬೇಳೆ ಬೇಯಿಸಿಕೊಳ್ಳುತ್ತಿರುವ ಪಕ್ಷ; ಅಂಥ ಕಳಂಕಿತ ಪಕ್ಷ ಜಾತ್ಯತೀತ ಜನತಾದಳದ ಜಾತ್ಯತೀತತೆ ಬಗ್ಗೆ ಕೀರಲು ದನಿಯಲ್ಲಿ ಕಿರಚುತ್ತಿದೆ. ಇಡೀ ದೇಶದ ಉದ್ದಗಲಕ್ಕೂ ಜಾತ್ಯತೀತ ಪಕ್ಷಗಳ ಮಾರಣಹೋಮ ನಡೆಸಿ, ಈಗ ಅಳಿವು ಉಳಿವಿಗಾಗಿ ಅದೇ ಪ್ರಾದೇಶಿಕ ಪಕ್ಷಗಳ ಬಾಲವಾಗಿ ಉಸಿರಾಡುತ್ತಿದೆ ಕಾಂಗ್ರೆಸ್. ಇನ್ನೂ ಹಳೆಯ ಅಮಲಿನಲ್ಲಿಯೇ ತೇಲುತ್ತಿದೆ ಆ ಪಕ್ಷಕ್ಕೆ ವರ್ತಮಾನದ ವರ್ತನೆಯ ಅರಿವೇ ಇಲ್ಲ” ಎಂದು ಅವರು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಕಾಂಗ್ರೆಸ್ ಮಹಾತ್ಮ ಗಾಂಧೀಜಿ ಅವರ ಕಾಲದ ಕಾಂಗ್ರೆಸ್ ಅಲ್ಲದೇ, ಅಧಿಕಾರಕ್ಕಾಗಿ ಅಡ್ಡದಾರಿ ಹಿಡಿದ ಪಕ್ಷ. ಈ ಕಾಂಗ್ರೆಸ್, ಕಾಲಚಕ್ರಕ್ಕೆ ಸಿಲುಕಿ ಕೊರಗುತ್ತಾ ನೀತಿಗೆಟ್ಟ ಕಾಂಗ್ರೆಸ್, ಕರ್ನಾಟಕದಲ್ಲಿ ಮತಗೇಡಿ ಬಿಜೆಪಿಯ ಬಾಲಂಗೋಚಿ ಆಗಿರುವುದು ಸುಳ್ಳಾ?” ಎಂದು ಪ್ರಶ್ನಿಸಿದ್ದಾರೆ.

“ಇನ್ನೊಬ್ಬರ ಬಗ್ಗೆ ಹೊಟ್ಟೆಕಿಚ್ಚು ಪಡುವ ಕೀಳುತನ ಎಂಬುದು ಕಾಂಗ್ರೆಸ್ ಪಕ್ಷಕ್ಕೆ ಅಂಟಿದ ಬಾಲಗ್ರಹ ಪೀಡೆ. ಅಧಿಕೃತ ಪ್ರತಿಪಕ್ಷವಾಗಿ ಹಗರಣಗಳ ಆಡುಂಬೋಲವಾದ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಯಕಶ್ಚಿತ್ ಒಂದು ದಾಖಲೆಯನ್ನೂ ಬಿಡುಗಡೆ ಮಾಡಲು ಯೋಗ್ಯತೆ ಇಲ್ಲದ ಪಕ್ಷ ಕಾಂಗ್ರೆಸ್” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಳ್ಳಾರಿ ರಸ್ತೆ ವಿಸ್ತರಣೆ ಕಾಮಗಾರಿ 95% ಮುಗಿದಿದೆ ಎಂದ ಬಿಬಿಎಂಪಿ ; ವರದಿ ಕೇಳಿದ ಹೈಕೋರ್ಟ್‌

“ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಮಹೋನ್ನತ ಆಶಯಕ್ಕೆ ಕುಣಿಕೆ ಬಿಗಿದ ಆಪರೇಶನ್ ಕಮಲ ಎಂಬ ಬಿಜೆಪಿಯ ಅಸಹ್ಯದಲ್ಲಿ ಅಭ್ಯಂಜನ ಮಾಡಿದವರು ಯಾರಯ್ಯ?” ಎಂದು ಕೇಳಿದ್ದಾರೆ.

“ಕಾಂಗ್ರೆಸ್ ಅನ್ನು ಹಳ್ಳ ಹಿಡಿಸಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತಿಪಕ್ಷ ಸ್ಥಾನದಿಂದ ಹೊರದಬ್ಬಲು ಯಡಿಯೂರಪ್ಪ ಅವರ ಜತೆ ನೇರ ಡೀಲಿಗಿಳಿದು ಕೋಟಿ ಕೋಟಿ ಸುಪಾರಿ ಪಡೆದು ಇಡಗಂಟು ಮಾಡಿಕೊಂಡವರ ಬಗ್ಗೆ ಕಾಂಗ್ರೆಸ್ ಅಸಹನೀಯ ಮೌನವೇಕೆ? ಆಗ ಎಲ್ಲಿತ್ತು ಜಾತ್ಯತೀತತೆ? ಆ ದಲಿತ ನಾಯಕ ಮಾಡಿದ ಅನ್ಯಾಯವೇನು?” ಎಂದು ಪ್ರಶ್ನಿಸಿದ್ದಾರೆ.

“ಧರ್ಮ, ಜಾತಿಗಳ ನಡುವೆ ವೈಷಮ್ಯದ ವಿಷಬೀಜ ಬಿತ್ತಿದ, ಹಗರಣಗಳಲ್ಲಿ ಮುಳುಗೇಳುತ್ತಿರುವ ಕಡುಕೆಟ್ಟ ಭ್ರಷ್ಟ ಈ ರಾಜ್ಯ ಬಿಜೆಪಿ ಸರ್ಕಾರ ಬರಲು ಕಾರಣರು ಯಾರಯ್ಯ? ಮೇಲೆ ಮಾತ್ರ ಜಾತ್ಯತೀತ, ಒಳಗೆ ಮಾತ್ರ ಎಲ್ಲಕ್ಕೂ ಅತೀತ! ಇದು ಯಾವ ಸೀಮೆಯ ತತ್ತ್ವ ಸಿದ್ದಾಂತ? ಇನ್ನೆಷ್ಟು ದಿನ ಈ ಟೋಪಿ ರಾಜಕಾರಣ? ರಾಜಕೀಯದಲ್ಲಿ ಕಳ್ಳ ಸಂಸಾರ ಎನ್ನುವುದು ಕಾಂಗ್ರೆಸ್ ಪಕ್ಷದ ಆವಿಷ್ಕಾರ” ಎಂದು ಕಾಂಗ್ರೆಸ್ ಪಕ್ಷಕ್ಕೆ ಚಾಟಿ ಬೀಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...