ಆಸ್ತಿ ಬರೆಸಿಕೊಂಡ ಆರೋಪದ ಹಿಂದೆ ರಾಜಕೀಯ ಕೈವಾಡ: ಮಾಜಿ ಸಚಿವ ಹೆಚ್​ಡಿ ರೇವಣ್ಣ

Date:

ಮಾಜಿ ಸಚಿವ ಎಚ್‌.ಡಿ. ರೇವಣ್ಣ‌ ಪತ್ನಿ ಭವಾನಿ ಹಾಗೂ ಮಗ, ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಗಂಭೀರ ಆರೋಪವೊಂದು ಕೆಲ ದಿನಗಳ ಹಿಂದೆ ಕೇಳಿಬಂದಿತ್ತು. 14 ವರ್ಷಗಳ ಕಾಲ ಪ್ರಜ್ವಲ್‌ ರೇವಣ್ಣ ಅವರ ಜತೆಗೆ ಕಾರು ಚಾಲಕರಾಗಿದ್ದ ಕಾರ್ತಿಕ್‌ ಎಂಬುವವರಿಗೆ ಸೇರಿದ್ದ 13 ಎಕರೆ ಜಾಗವನ್ನು ರೇವಣ್ಣ ಕುಟುಂಬ ನುಂಗಿ ಹಾಕಿದೆ ಎಂದು ಆರೋಪಿಸಲಾಗಿದೆ.

ತನಗೆ ನ್ಯಾಯ ನೀಡುವಂತೆ ಚಾಲಕ ಕಾರ್ತಿಕ್ ದಕ್ಷಿಣ ವಲಯ ಐಜಿಪಿಗೆ ದೂರು ನೀಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ, “ಆಸ್ತಿ ಬರೆಸಿಕೊಂಡ ಆರೋಪದ ಹಿಂದೆ ರಾಜಕೀಯ ಕೈವಾಡವಿದೆ” ಎಂದು ತಿಳಿಸಿದ್ದಾರೆ.

ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಅವರು, “ಲೋಕಸಭಾ ಚುನಾವಣೆ ಹತ್ತಿರ ಇರುವುದರಿಂದ ಈ ರೀತಿ ಆರೋಪ ಮಾಡಲಾಗುತ್ತಿದೆ. ಇದರ ಹಿಂದೆ ರಾಜಕೀಯ ಇದೆ. ಘಟನೆ ನಡೆದು ಎಷ್ಟು ದಿನ ಆಗಿದೆ, ಈಗ ಯಾಕೆ ಆರೋಪ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಗೆ ಇನ್ನು ಮೂರು ತಿಂಗಳು ಮಾತ್ರ ಇದೆ. ಇಂತಹ ಸಮಯದಲ್ಲಿ ಯಾಕೆ ಆರೋಪ ಬರುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭವಾನಿ ರೇವಣ್ಣ ಹೊಡೆದಿದ್ದರಿಂದ ಗರ್ಭಪಾತ ಆಗಿದೆ ಎಂಬ ಆರೋಪ ವಿಚಾರವಾಗಿ ಮಾತನಾಡಿದ ಅವರು, “ಭವಾನಿ ಹಲ್ಲೆ ಮಾಡುತ್ತಾರೆ ಎಂದರೆ ಏನು ಹೇಳೋದು. ಭವಾನಿ ಯಾರಿಗೆ ಸಹಾಯ ಮಾಡಿದ್ದಾರೆ ಅನ್ನುವುದು ದೇವರಿಗೇ ಗೊತ್ತು. ಆ ಹುಡುಗಿಯನ್ನ ಮನೆಯಲ್ಲಿ ಇಟ್ಟುಕೊಂಡು ಡಿಗ್ರಿ ಮಾಡಿಸಿದ್ದು ನಾವು. ನಮ್ಮ ಮನೆಯಲ್ಲಿ ಆಕೆಯನ್ನು ಕೆಲಸಕ್ಕೆ ಇಟ್ಟುಕೊಂಡಿರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಅಪಘಾತಕ್ಕೀಡಾದ ಕೋಳಿ ಸಾಗಾಟದ ವಾಹನ: ಚಾಲಕನ ರಕ್ಷಣೆ ಮಾಡುವ ಬದಲು ಮುಗಿಬಿದ್ದು ಕೋಳಿ ಕದ್ದೊಯ್ದ ಗ್ರಾಮಸ್ಥರು!

“ಚುನಾವಣೆ ಸಂದರ್ಭದಲ್ಲಿ ಇನ್ನೂ ಕೆಲವರು ಆರೋಪ ಮಾಡುತ್ತಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಯಾವ್ಯಾವ ಇಲಾಖೆಗೆ ಪತ್ರ ಬರೆದಿದ್ದಾರೆ ಎಂಬುದು ಎಲ್ಲವೂ ಗೊತ್ತು. ಪ್ರಜ್ವಲ್​ ಆಗಿರುವುದಕ್ಕೆ ಎಲ್ಲವನ್ನೂ ತಡೆದಿದ್ದಾನೆ” ಎಂದು ರೇವಣ್ಣ ಹೇಳಿಕೆ ನೀಡಿದ್ದಾರೆ.

ಇದೇ ವೇಳೆ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರವಾಗಿ ಕಾಂಗ್ರೆಸ್ ಆರೋಪಗಳಿಗೆ ಉತ್ತರಿಸಿದ ರೇವಣ್ಣ, “ಕಾಂಗ್ರೆಸ್ಸಿಗರು ಬೇಕಾದಾಗ ದೇವೇಗೌಡರ ಮನೆಯ ಬಳಿಗೆ ಬರುತ್ತಾರೆ. ಅಧಿಕಾರಕ್ಕೆ ನಮ್ಮನ್ನ ಬಂದಾಗ ದೂರ ಇಡುತ್ತಾರೆ. ಈ ಬಗ್ಗೆ ಅಂದೇ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದರು. ಕಾಂಗ್ರೆಸ್​ ನಂಬಬೇಡಿ ಎಂದು. ಕಾಂಗ್ರೆಸ್ ಜೊತೆ ಮೈತ್ರಿ ಬಿಟ್ಟು, ಬನ್ನಿ ನಾವು ಬೆಂಬಲಿಸುತ್ತೇವೆ ಎಂದು ಅಂದೇ ಕುಮಾರಸ್ವಾಮಿಯವರಿಗೆ ಮೋದಿಯವರು ಹೇಳಿದ್ದರು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...