ಸ್ವಕ್ಷೇತ್ರದಲ್ಲಿ ಕೈ ಮುಗಿದು ಮತಭಿಕ್ಷೆ ಕೇಳಿದ ಎಚ್ಡಿಕೆ, ಡಿಕೆಶಿ, ಬೊಮ್ಮಾಯಿ: ಬಹಿರಂಗ ಪ್ರಚಾರಕ್ಕೆ ತೆರೆ

Date:

  • ಬಹಿರಂಗ ಚುನಾವಣಾ ಪ್ರಚಾರಕ್ಕೆ ಅಧಿಕೃತ ತೆರೆ
  • ಕೊನೆ ಕ್ಷಣದ ಮತಯಾಚನೆ ನಡೆಸಿದ ನಾಯಕರು

ರಾಜ್ಯ ರಾಜಕೀಯದ ಹೊಸ ಪರ್ವ ಆರಂಭಕ್ಕಾಗಿನ ಗುದ್ದುಗೆ ಗುದ್ದಾಟದ ಕೊನೆ ಅಂಕಕ್ಕೆ ಭಾವುಕ ತೆರೆ ಬಿದ್ದಿದೆ. ಚುನಾವಣಾ ಆಯೋಗ ನಿಗದಿ ಪಡಿಸಿದಂತೆ ಮೇ 8ರಂದು ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ.

ಈ ಕ್ಷಣ ಆರಂಭವಾಗುವುದಕ್ಕೂ ಮೊದಲು ಹಾಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಹಾಗೂ ಭವಿಷ್ಯದ ಸಿಎಂ ಎಂದೇ ಬಿಂಬಿತರಾದ ಡಿಕೆ ಶಿವಕುಮಾರ್ ತಮ್ಮ ತಮ್ಮ ಸ್ವಕೇತ್ರಗಳಲ್ಲಿ ಮತಯಾಚನೆ ಮಾಡಿದರು.

ಮೂವರೂ ನಾಯಕರು ಬಹಿರಂಗ ಚುನಾವಣಾ ಪ್ರಚಾರದ ಕೊನೆ ಭಾಷಣಗಳನ್ನು ಭಾವುಕವಾಗಿಯೇ ಮಾಡುವ ಮೂಲಕ ಜನರ ಮನಗೆಲ್ಲಲು ಪ್ರಯತ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತವರು ಕ್ಷೇತ್ರ ಕನಕಪುರದ ಮೇಲೆ ವಿಪರೀತ ವ್ಯಾಮೋಹ ಹೊಂದಿರುವ ಡಿ ಕೆ ಶಿವಕುಮಾರ್ ಇದೇ ಮೊದಲ ಬಾರಿ ಕೊನೆಯ ಒಂದೇ ದಿನ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು.

ಜನರ ಬಳಿ ಕೈ ಮುಗಿದು ಮತ ಕೇಳಿದ ಅವರು ನಮ್ಮ ಕಾಂಗ್ರೆಸ್ ಪಕ್ಷವನ್ನು ಆಶೀರ್ವದಿಸಿ ಅಧಿಕಾರಕ್ಕೆ ಕೂರಿಸಿ, ನೀವು ನಮಗೆ ಹೊರಿಸಿರುವ ಜವಾಬ್ದಾರಿಯನ್ನು ಸಾಂಗವಾಗಿ ನೆರವೇರಿಸಿಕೊಡುತ್ತೇವೆ ಎಂದು ಕೇಳಿಕೊಂಡರು.

ಇನ್ನು ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಿದ ಎಚ್ ಡಿ ಕುಮಾರಸ್ವಾಮಿ, ಉಸಿರಿರೋವರೆಗೂ ನಾನು ಚನ್ನಪಟ್ಟಣದ ಮಗ, ನಂತರ ನನ್ನ ದೇಹವೂ ಇಲ್ಲೇ ಮಣ್ಣಾಗಲಿದೆ ಎಂದು ಭಾವನಾತ್ಮಕವಾಗಿ ಜನರ ಮನ ಗೆಲ್ಲಲು ಮುಂದಾದರು.

ನಮ್ಮ ಕುಟುಂಬವನ್ನು ಕೈ ಹಿಡಿದು ನಡೆಸಿದ್ದು ರಾಮನಗರ ಚನ್ನಪಟ್ಟಣ ಕ್ಷೇತ್ರಗಳು, ನಾನು ಸಿಎಂ ಆದರೆ ಇವೆರಡನ್ನೂ ಅವಳಿ ನಗರಗಳನ್ನಾಗಿ ಮಾಡಿ ಮಾದರಿ ಕ್ಷೇತ್ರ ಮಾಡುವೆ. ನನ್ನನ್ನು ಮುಖ್ಯಮಂತ್ರಿಯನ್ನಾಗಿಸುವುದೂ ಬಿಡುವುದು ನಿಮ್ಮ ಕೈಯಲ್ಲಿದೆ ಎಂದು ಹೇಳಿದರು.

ಇವರ ನಡುವೆ ಭಿನ್ನತೆ ಮೆರೆದ ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಕೊನೆ ಪ್ರಚಾರ ಕಾರ್ಯವನ್ನು ನಂಜನಗೂಡು ಅಭ್ಯರ್ಥಿ ದರ್ಶನ್‌ ಧ್ರುವನಾರಾಣ್‌ ಪರ ನಡೆಸಿದರು. ಯುವ ನಾಯಕನ ಅಗತ್ಯತೆಯನ್ನು ಕ್ಷೇತ್ರದ ಜನರಿಗೆ ಮನದಟ್ಟು ಮಾಡಿ ಆಶೀರ್ವದಿಸುವಂತೆ ಕೋರಿಕೊಂಡರು.ಬಹಿರಂಗ ಪ್ರಚಾರ

ಈ ಸುದ್ದಿ ಓದಿದ್ದೀರಾ? : ಪಕ್ಷಾಂತರಿಗಳಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ತಿರಸ್ಕರಿಸಬೇಕು

ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ ಮತಯಾಚನೆ ಮಾಡಿ ಕ್ಷೇತ್ರದ ಜನರಲ್ಲಿ ಮನವಿ ಮಾಡಿ, ಪಕ್ಷ ಹಾಗೂ ತಮ್ಮನ್ನು ಆಶೀರ್ವದಿಸಿ ಮತ್ತೊಂದು ಅವಧಿಗೆ ಅಧಿಕಾರ ನಡೆಸಲು ಅನುವು ಮಾಡಿಕೊಡುವಂತೆ ಕೋರಿಕೊಂಡರು.

ಹೀಗೆ ಮೂವರೂ ನಾಯಕರು ತಮ್ಮ ತಮ್ಮ ಜವಾಬ್ಧಾರಿ ಜೊತೆ ಪಕ್ಷ ಗೆಲ್ಲಿಸುವ ಹೊಣೆ ಹೊತ್ತು, ಮತದಾರ ಪ್ರಭುವಿನೆದುರು ನಡು ಬಗ್ಗಿಸಿ ಮತಯಾಚನೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...