ಮಗನ ಚುನಾವಣೆ ಎಂದು ಕಂಪನಿಗಳ ಮೂಲಕ ಎಚ್‌ಡಿಕೆ ಸಾಕಷ್ಟು ಹಣ ಪಡೆದಿದ್ದಾರೆ: ಸಚಿವ ಚಲುವರಾಯಸ್ವಾಮಿ

Date:

ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರಿಗೆ ಬೇರೆ ಸಮಯದಲ್ಲಿ ಹಣ ಸಿಗುತ್ತದೋ ಇಲ್ವೋ ಗೊತ್ತಿಲ್ಲ. ಆದರೆ ಮಗನ ಚುನಾವಣೆ ಎಂದು ಸಾಕಷ್ಟು ಗಿಫ್ಟ್ ಪಡೆದಿದ್ದಾರೆ. ಸಾಕಷ್ಟು ಕಂಪನಿ ಮೂಲಕ ಸಾವಿರಾರು ಕೋಟಿ ರೂಪಾಯಿ ಹಣ ಪಡೆದಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಗಂಭೀರವಾಗಿ ಆರೋಪಿಸಿದರು.

ಮಂಡ್ಯದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, “ದುಡ್ಡು ಖರ್ಚು ಮಾಡಿದ ತಕ್ಷಣ ಚುನಾವಣೆ ಗೆಲ್ಲಲ್ಲ. ಉಪ ಚುನಾವಣೆಯಲ್ಲಿ ದುಡ್ಡಿನಲ್ಲಿ ಅವರ ಜೊತೆ ಫೈಟ್ ಮಾಡಲಾಗಲಿಲ್ಲ. ಹಣದ ವಿಚಾರದಲ್ಲಿ ಬಿಜೆಪಿ, ಜೆಡಿಎಸ್​ನವರ ಜೊತೆ ಹೋಲಿಕೆ ಸಾಧ್ಯವಿಲ್ಲ. ನಮ್ಮ ಬಳಿ ಹಣವಿಲ್ಲ, ಗ್ಯಾರಂಟಿ ನೀಡಿದ್ದೇವೆ” ಎಂದರು.

“40 ಪರ್ಸೆಂಟ್ ಹಗರಣ ಮಾಡಿದ್ದರಿಂದಲೇ ಬಿಜೆಪಿ ಸರ್ಕಾರ ಹೋಯ್ತು. ನಮ್ಮ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಮತ್ತೆ ಪ್ರಯತ್ನ ಮಾಡುತ್ತಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರಲ್ಲೂ ವಾಗ್ದಾಳಿ

“ಬಾಯಿಗೆ ಬಂದಂತೆ ಮಾತನಾಡಿದರೆ ಕೇಳಿಸಿಕೊಳ್ಳೇಕೆ ನಾವು ಸಿದ್ಧರಿಲ್ಲ, ಸ್ನೇಹಿತರನ್ನು ಬಿಟ್ಟು ಜೆಡಿಎಸ್ ಪಕ್ಷ ಈಗ ಕುಟುಂಬದ ಪಕ್ಷವಾಗಿದೆ. ಇತಿಹಾಸದ ಚರ್ಚೆ ಅವಶ್ಯಕತೆ ಇದ್ದರೆ ಆಹ್ವಾನ ಕೊಡುತ್ತೇನೆ, ವೇದಿಕೆ ಸಿದ್ದಪಡಿಸಲಿ” ಎಂದು ಕುಮಾರಸ್ವಾಮಿಯವರಿಗೆ ಚಲುವರಾಯಸ್ವಾಮಿ ಸವಾಲು ಹಾಕಿದರು.

ಜಮೀರ್ ಹಾಗೂ ಆ ನಾಲ್ವರ ಜೊತೆ ಇದ್ದಿದ್ದು ನನ್ನ ಕರಾಳ ದಿನ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಣಿಪುರ – ಭಾರತವನ್ನು ದೇಶವಾಗಿ ಉಳಿಸಿಕೊಳ್ಳಲು ಶಾಂತಿ, ಸೋದರತೆ ಅಗತ್ಯವೆಂದು ಪ್ರಧಾನಿ ಅರಿತಿರುವರೇ?

“ನನಗೆ ಕುಮಾರಸ್ವಾಮಿಯಂತೆ ಮಾಧ್ಯಮದವರ ಮುಂದೆ ನಾಲಗೆ ಹರಿಬಿಡಲು ಸಾಧ್ಯವಿಲ್ಲ. ಅವರು ಚರ್ಚೆಗೆ ಬರುವುದಾದರೆ ಒಂದು ವೇದಿಕೆ ಸಿದ್ಧಮಾಡಿ. ಯಾರು ಹೊಲಸು, ಕಚಡಾ ಎಂದು ಚರ್ಚೆ ಮಾಡೋಣ. 20 ವರ್ಷ ಅವರ ಜತೆ ಇದ್ದೆವು, ಯಾರು ಸ್ನೇಹ ಬಿಟ್ಟರು ಎಂದು ಚರ್ಚಿಸೋಣ” ಎಂದರು.

“ಸ್ನೇಹಿತರಿಂದಲೇ ಸಿಎಂ ಆದೇ ಎಂದು ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದರು. ಆಗ ಅದು ಕರಾಳದಿನ ಆಗಿರಲಿಲ್ಲವಾ? ಅಷ್ಟು ದಿನ ಏಕೆ ಕೊಳಚೆ ವಾಸನೆ ಕುಡಿದಿದ್ದರಾ? ಕುಮಾರಸ್ವಾಮಿ ಆ ರೀತಿ ಮಾತನಾಡಿದ್ದು ಎಷ್ಟು ಸರಿ? ಉತ್ತರ ಕೊಡುವುದು ಸೂಕ್ತ ಎಂದರೆ ಕೊಡುತ್ತೇನೆ. ಮಾತಿನಿಂದ ಯಾರೂ ದೊಡ್ಡವರು ಆಗುವುದಿಲ್ಲ, ನಡವಳಿಕೆಯಿಂದ ದೊಡ್ಡವರಾಗಬೇಕು” ಎಂದು ಹೇಳಿದರು.

“ಇವರದ್ದು ಕುಟುಂಬದ ಪಕ್ಷ ಆಗಿ ಉಳಿದಿದೆ. ಸಾಕಷ್ಟು ಇತಿಹಾಸ ಇದೆ, ಹೆಗಡೆ, ಜೆ.ಹೆಚ್‌. ಪಟೇಲ್‌ ಜೊತೆ ಎಷ್ಟು ದಿನ ಚೆನ್ನಾಗಿದ್ದರು? ಈ ಬಗ್ಗೆ ಅವರೇ ಹೇಳಲಿ, ಸದನದಲ್ಲಿ ಚರ್ಚೆಯಾದರೆ ಒಳ್ಳೆಯದು, ಬರಲು ಹೇಳಿ. ಒಂದು ವೇದಿಕೆ ನಿರ್ಮಾಣ ಮಾಡೋಣಾ, ಒಂದು ಸಮಯ ನಿಗದಿ ಮಾಡಿ. ನಾವು ಬರಲು ತಯಾರಿದ್ದೇವೆ, ಜನರಿಗೂ ಅಸಲಿ ಸಂಗತಿ ಗೊತ್ತಾಗಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...