ಹೆಚ್‌ಡಿಕೆ ಜಮೀನು ಕದ್ದಿಲ್ಲ ಎಂದರೆ ಅದಕ್ಕೆ ದಾಖಲೆ ಇರುತ್ತೆ, ಯಾಕೆ ಗಾಬರಿ: ಡಿ.ಕೆ.ಶಿವಕುಮಾರ್ ಪ್ರಶ್ನೆ

Date:

ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಮಾಡಿಕೊಂಡಿಲ್ಲ, ಜಮೀನು ಕದ್ದಿಲ್ಲ ಎಂದರೆ ಕದ್ದಿಲ್ಲ. ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ? ಇದಕ್ಕೂ ಸಿದ್ದರಾಮಯ್ಯ ಹಾಗೂ ಶಿವಕುಮಾರ್‌ಗೂ ಏನು ಸಂಬಂಧ? ಕುಮಾರಸ್ವಾಮಿ ಅವರು ಏಕೆ ಗಾಬರಿಯಾಗಬೇಕು? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಛೇಡಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಸರಣಿ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು.

“ಕಾಂಗ್ರೆಸ್ ಗೆ ನಾನೇ ಟಾರ್ಗೆಟ್, ದ್ವೇಷದ ರಾಜಕಾರಣ ಮಾಡಲಾಗುತ್ತಿದೆ” ಎನ್ನುವ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ನಾನು ಹಾಗೂ ಸಿದ್ದರಾಮಯ್ಯ ಎಂದಿಗೂ ದ್ವೇಷದ ರಾಜಕಾರಣ ಮಾಡಿಲ್ಲ. ಅದರ ಅವಶ್ಯಕತೆಯೂ ಇಲ್ಲ. ನ್ಯಾಯಾಲಯ ಹೇಳಿದಂತೆ ಕಾನೂನು ಪ್ರಕಾರ ಕೆಲಸ ಮಾಡಲಾಗಿದೆ. ಕೇತಗಾನಹಳ್ಳಿ ಸುದ್ದಿಗೆ ನಾವು ಹೋಗಿಲ್ಲ. ನಮಗೆ ಈ ವಿಚಾರ ಗೊತ್ತೂ ಇಲ್ಲ. ಯಾರೋ ಇದರ ಬಗ್ಗೆ ಪಿಐಎಲ್ ಹಾಕಿದ್ದಾರೆ. ಇದು ಬಹಳ ವರ್ಷದಿಂದ ನಡೆದಿದೆ. ಭೂಒತ್ತುವರಿ ಬಗ್ಗೆ ಸರಿಯಾಗಿ ಕ್ರಮ ತೆಗೆದುಕೊಂಡಿಲ್ಲ ಎಂದು ನ್ಯಾಯಲಯವು ಅಧಿಕಾರಿಗಳಿಗೆ ಛೀಮಾರಿ ಹಾಕಿದೆ. ಇದರ ಬಗ್ಗೆ ನಾವು ಮಾಧ್ಯಮದಲ್ಲಿ ಓದಿದ್ದೇವೆ. ನ್ಯಾಯಾಲಯ ಕ್ರಮ ತೆಗೆದುಕೊಳ್ಳಲು ಗಡವು ನೀಡಿದ ಕಾರಣಕ್ಕೆ ಅಧಿಕಾರಿಗಳು ಹೋಗಿ ಅಳತೆ ಮಾಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಾಟ್ಸಪ್ ಅಲ್ಲಿ ಬಂದ ಸುದ್ದಿ ನೋಡಿದೆ. ಅಧಿಕಾರಿಗಳು ನೋಟಿಸ್ ನೀಡದೆ ಅಳತೆ ಮಾಡಲು ಸಾಧ್ಯವೇ? ಮೊದಲಿನಿಂದಲೂ ಅಳತೆ ಮಾಡಲಾಗಿತ್ತು. ಅವರ ಸಿಬ್ಬಂದಿ ಹೆಚ್ಚುವರಿ ಭೂಮಿಯಿದ್ದರೆ ವಾಪಸ್ ತೆಗೆದುಕೊಳ್ಳಿ ಎಂದು ಏಕೆ ಪತ್ರ ಬರೆದಿದ್ದಾರೆ? ಎಷ್ಟು ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದು ತಿಳಿದಿಲ್ಲ. ಅವರು ನಮ್ಮ ಮೇಲೆ ಈ ಹಿಂದೆ ಏನು ಮಾತನಾಡಿದ್ದಾರೆ ಎಂಬುದನ್ನು ಈಗ ಒಮ್ಮೆ ನೆನಪು ಮಾಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

ನಮ್ಮದನ್ನೂ ಹೊರಗೆ ತೆಗೆದಿಡಲಿ

“ನಮ್ಮದೂ ಬೇಕಾದಷ್ಟು ದಾಖಲೆ ತೆಗೆದಿಟ್ಟುಕೊಂಡಿದ್ದಾರಂತೆ.‌ ನಾವು ಏನಾದರೂ ಒತ್ತುವರಿ ಮಾಡಿಕೊಂಡಿದ್ದರೆ ತೆಗೆದಿಡಲಿ. ಎಲ್ಲವೂ ನನ್ನ ಬಳಿ ಇದೆ, ಅದನ್ನು ಬಿಡುಗಡೆ ಮಾಡುತ್ತೇನೆ ಎಂದು ಅವರು ಹೇಳಿದ್ದ ನೆನಪು. ಮಧ್ಯರಾತ್ರಿ ಒತ್ತಿಸಿಕೊಂಡಿದ್ದಾರೆ, ಬರೆಸಿಕೊಂಡಿದ್ದಾರೆ ಎಂದು ನಮ್ಮ ವಿರುದ್ಧ ಆರೋಪ ಮಾಡಿದ್ದರು. ಕಾಸು ಕೊಟ್ಟು ಬರೆಸಿಕೊಂಡಿದ್ದೇವೆ. ಪುಗಸಟ್ಟೆ ಯಾರೂ ಬರೆದು ಕೊಡುವುದಿಲ್ಲ. ನಾನು ಒತ್ತುವರಿಗೆ ಯಾರಿಗಾದರೂ ಭಯಪಡಿಸಿದ್ದರೆ ಅವರಿಂದ ದೂರು ದಾಖಲಿಸಲಿ ಅಥವಾ ಇವರೇ ದೂರು ನೀಡಲಿ. ಇವರು ಮಾತ್ರ ಶುದ್ಧ, ನಾವು ಅಶುದ್ಧವೇ? ನಾವು ಯಾವುದೇ ದ್ವೇಷದ ರಾಜಕಾರಣಕ್ಕೆ ಹೋಗಿಲ್ಲ. ನನ್ನ ಮೇಲೂ ಬೇಕಾದಷ್ಟು ಪಿಐಎಲ್ ಹಾಕಿದ್ದಾರೆ” ಎಂದು ಹರಿಹಾಯ್ದರು.

“ನನ್ನ ಮೇಲೂ ಈ ಹಿಂದೆ ಅವರು ಬೇಕಾದಷ್ಟು ಆರೋಪ ಮಾಡಿಲ್ಲವೇ? ಗ್ರಾನೈಟ್ ಅದು, ಇದು ಕದ್ದಿದ್ದೀರಿ ಎಂದು ಹೇಳಿರಲಿಲ್ಲವೇ? ನನ್ನ ಹೆಂಡತಿ, ತಂಗಿ, ತಮ್ಮನ ಮೇಲೆ ತನಿಖೆ ನಡೆದಿರಲಿಲ್ಲವೇ? ಬಳ್ಳಾರಿಗೆ ಹೋಗಿ ಕದ್ದುಕೊಂಡು ಬಂದಿದ್ದೀರಿ ಎಂದು ಪ್ರಕರಣ ದಾಖಲಿಸಿರಲಿಲ್ಲವೇ? ಇವರ ಅಣ್ಣ ಆದಾಯ ತೆರಿಗೆ, ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಬೇಕಾದಂತೆ ಅರ್ಜಿ ಬರೆದುಕೊಟ್ಟಿರಲಿಲ್ಲವೇ? ನಮಗೆಲ್ಲಾ ಇದು ತಿಳಿದಿಲ್ಲವೇ? ಸುಮ್ಮನೆ ಕಾಂಗ್ರೆಸ್, ಕಾಂಗ್ರೆಸ್ ಎನ್ನುತ್ತಾರೆ.‌ ಯಾವ ಕಾಂಗ್ರೆಸ್ಸಿಗರು ಇವರ ವಿಚಾರಕ್ಕೆ ಹೋಗಿಲ್ಲ. ಇವರ ಜಮೀನು ಇದ್ದರೆ ಉಳಿದುಕೊಳ್ಳುತ್ತದೆ. ಇಲ್ಲದಿದ್ದರೇ ಬಿಟ್ಟುಕೊಡಬೇಕಾಗುತ್ತದೆ” ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

“ಗ್ರೇಟರ್ ಬೆಂಗಳೂರಿನಿಂದ ಲೂಟಿ ಮಾಡಲಾಗುತ್ತಿದೆ, ನಾವು ಯಾವುದೇ ಲೂಟಿ ಮಾಡುತ್ತಿಲ್ಲ” ಎನ್ನುವ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, “ಅವರಿಗೆ ರಾಜಕೀಯವಾಗಿ ಜೀವ ಕೊಟ್ಟ ರಾಮನಗರ ಜಿಲ್ಲೆಗೆ ಹೊಸ ರೂಪ ನೀಡಲು ನಾವು ಈ ನಿರ್ಧಾರ ಮಾಡಿದ್ದೇವೆ. ಆದರೆ ಅವರು ರಾಜಕೀಯ ಆರೋಪ ಮಾಡಬೇಕು ಎಂದು ಮಾಡುತ್ತಿದ್ದಾರೆ. ಅವರು ನನ್ನನ್ನು ಬೈಯದೇ ಇನ್ಯಾರನ್ನು ಬೈಯುತ್ತಾರೆ” ಎಂದರು.

“ಕುಮಾರಸ್ವಾಮಿ ಅವರೇ ಹೆಚ್ಚು ಅನುಕೂಲ ಪಡೆದವರು, ಆದರೂ ನಿಮ್ಮ ಮೇಲೆ ಏಕೆ ಆರೋಪ ಮಾಡುತ್ತಿದ್ದಾರೆ. ಅವರಿಗೆ ನೀವೇ ಅನುಕೂಲ ಮಾಡಿಕೊಟ್ಟಿದ್ದೀರಿ ಅಲ್ಲವೇ” ಎಂದು ಮರು ಪ್ರಶ್ನಿಸಿದಾಗ, ” “ಅವರ ಜಮೀನು ಪಕ್ಕದಲ್ಲಿ ಇದೆ ಎನ್ನುವ ಕಾರಣಕ್ಕೆ ನಾವು ದ್ವೇಷ ರಾಜಕಾರಣ ಮಾಡಲು ಆಗುತ್ತದೆಯೇ? ಅವರ ತಂದೆ 5- 6 ಸಾವಿರಕ್ಕೆ 1984-85 ರಲ್ಲಿ ಅವರ ಅತ್ತೆ, ನಾದಿನಿ ಹೆಸರಿಗೆ ಜಮೀನು ತೆಗೆದುಕೊಂಡಿದ್ದರು. ಅದು ಕುಮಾರಸ್ವಾಮಿ ಅವರಿಗೆ ಉಡುಗೊರೆಯಾಗಿ ಬಂದಿದೆ. 7-8 ಕೋಟಿಗೆ ಹೋಗುತ್ತದೆ. ಬೆಂಗಳೂರು ದಕ್ಷಿಣ ಜಿಲ್ಲೆ ಎಂದಾದರೆ 10 ಕೋಟಿಯಾಗುತ್ತದೆ. ನಾವು 2-3 ಸಾವಿರಕ್ಕೆ ಒಂದು ಕಾಲದಲ್ಲಿ ಜಮೀನು ತೆಗೆದುಕೊಂಡಿದ್ದೆವು, ಅವುಗಳ ಬೆಲೆ ಸಹ ಹೆಚ್ಚಾಗಿದೆ ಏನು ಮಾಡಲು ಆಗುತ್ತದೆ” ಎಂದು ಮಾರ್ಮಿಕವಾಗಿ ನುಡಿದರು.

“ಏನಾದರೂ ಒಳ್ಳೆ ಕೆಲಸಗಳು ಮಾಡುವಾಗ ಅಡಚಣೆಗಳು ಉಂಟಾಗುತ್ತವೆ. ಅದಕ್ಕೆ ಕಲ್ಲೆಸೆಯುವವರು, ಅಡಚಣೆ ಉಂಟು ಮಾಡುವವರು ಇರುತ್ತಾರೆ. ಈ ಜಾಗವನ್ನು ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗಲೇ ರಾಮನಗರ, ಸಾತನೂರು, ಸೋಲೂರು, ತ್ಯಾಮಗೊಂಡ್ಲು ಸೇರಿದಂತೆ ಒಟ್ಟು ಐದು ಕಡೆ ನೋಟಿಫಿಕೇಶನ್ ಮಾಡಿದ್ದರು. ನಾನು ಡಿನೋಟಿಫಿಕೇಷನ್ ಗೆ ಹೋಗಿರಲಿಲ್ಲ. ಹೊಸ ಮಾದರಿಯ ಅಂತರರಾಷ್ಟ್ರೀಯ ಮಟ್ಟದ ನಗರ ಮಾಡಬೇಕು ಎನ್ನುವ ಆಲೋಚನೆಯನ್ನು ಇಟ್ಟುಕೊಂಡು ಈ ಯೋಜನೆಗಳನ್ನು ಕ್ಯಾಬಿನೆಟ್ ಮುಂದೆ ಇಟ್ಟು ಒಪ್ಪಿಗೆ ತೆಗೆದುಕೊಳ್ಳಲಾಗಿದೆ. ಇದು ಅಂತರರಾಷ್ಟ್ರೀಯ ನಗರವಾಗಿ ಬೆಳೆಯುತ್ತದೆ. ಈಗ ಇರುವ ಬೆಂಗಳೂರಿಗಿಂತ ಹೊಸ ಬೆಂಗಳೂರನ್ನು ಸೃಷ್ಟಿ ಮಾಡಲು ಅನುಕೂಲವಾಗುತ್ತದೆ. ಕುಮಾರಸ್ವಾಮಿಗೆ ಹೆಚ್ಚು ಅನುಕೂಲವಾಗಲಿದೆ. ಅವರದ್ದೇ ಹೆಚ್ಚು ಜಮೀನುಗಳು ಅಕ್ಕಪಕ್ಕವಿರುವುದು. ಅತ್ಯಂತ ಹೆಚ್ಚು ಅನುಕೂಲ ಪಡೆಯುವವರು ಅವರ ಕುಟುಂಬದವರೇ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...