ಹೈಕೋರ್ಟ್ ಲಾಯರ್ ಎಂದು ಹೇಳಿ ಹನಿಟ್ರ್ಯಾಪ್‌ ಮಾಡಲು ಬಂದಿದ್ದರು: ಸಚಿವ ಕೆ.ಎನ್.ರಾಜಣ್ಣ

Date:

ಸಚಿವರು, ಶಾಸಕರನ್ನು ಮಧುಬಲೆಗೆ (ಹನಿಟ್ರ್ಯಾಪ್‌) ಬೀಳಿಸುವ ಯತ್ನ ವಿಚಾರವಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಂಗಳವಾರ ಮತ್ತಷ್ಟು ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ತುಮಕೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ನನಗೆ ಎರಡು ಬಾರಿ ಹನಿಟ್ರ್ಯಾಪ್ ಯತ್ನ ನಡೆದಿದೆ. ಎರಡು ಬಾರಿ ಬಂದಾಗ ಹುಡುಗಿಯರು ಬೇರೆ ಬೇರೆ ಆಗಿದ್ದರು. ಆದರೆ ಎರಡು ಬಾರಿಯೂ ಒಬ್ಬನೇ ಹುಡುಗ ಬಂದಿದ್ದನು” ಎಂದು ಹೇಳಿದರು.

”ಹನಿಟ್ರ್ಯಾಪ್ ಮಾಡಲು ನನ್ನ ಮನೆಗೆ ಎರಡು ಸಲ ಒಬ್ಬನೇ ಹುಡುಗ ಹುಡುಗಿಯರನ್ನು ಕರೆದುಕೊಂಡು ಬಂದಿದ್ದನು. ಆದರೆ, ಎರಡು ಬಾರಿಯೂ ಬೇರೆ ಬೇರೆ ಹುಡುಗಿಯರು ಇದ್ದರು. ಎರಡನೇ ಬಾರಿ ಬಂದಾಗ ಹೈಕೋರ್ಟ್ ಲಾಯರ್ ಅಂತಾ ಹೇಳಿದ್ದಳು. ಮೊದಲ ಬಾರಿ ಬಂದಾಗ ಲಾಯರ್ ಅಂತಾ ಹೇಳಿರಲಿಲ್ಲ. ಪರ್ಸನಲ್ ಆಗಿ ಮಾತನಾಡಬೇಕು ಅಂತಾ ಹೇಳಿದ್ದಳು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮನೆಯಲ್ಲಿ ಸಿಸಿಟಿವಿ ಇರಲಿಲ್ಲ. ಹಾಗಾಗಿ ಸಿಸಿಟಿವಿ ವಿಡಿಯೋ ನಮ್ಮ ಬಳಿ ಇಲ್ಲ. ಯಾರು ಬಂದು ಹೋಗಿದ್ದಾರೋ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದೇನೆ. ಅಪರಿಚಿತರು ಅಂತ ದೂರಿನಲ್ಲಿ ದಾಖಲಿಸಿದ್ದೇನೆ” ಎಂದು ಮಾಹಿತಿ ನೀಡಿದರು.

ಗೃಹ ಸಚಿವರಿಗೆ ಇಂದು ದೂರು ಸಲ್ಲಿಕೆ

”ಇಲ್ಲಿಯವರೆಗೂ ಯಾಕೆ ದೂರು ನೀಡಿಲ್ಲ ಅಂತಾ ಸಿಎಂ ಕೇಳಿದ್ದಾರೆ. ಇಂದು ದೂರು ನೀಡುತ್ತೇನೆ. ಮೂರು ಪುಟಗಳ ದೂರು ಬರೆದಿದ್ದು, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಲ್ಲೇ ಇದ್ರೂ ಹುಡುಕಿಕೊಂಡು ಹೋಗಿ ದೂರು ನೀಡುತ್ತೇನೆ. ದೂರು ನೀಡಿದ ಬಳಿಕ ಎಫ್ ಐಆರ್ ಆಗುತ್ತದೆ. ಆಗ ದಾಖಲೆಗಳು ಬಹಿರಂಗವಾಗುತ್ತವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...