ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂದು ಅವರೇ ಸಾಬೀತುಪಡಿಸಿದ್ದಾರೆ: ಡಿ ಕೆ ಶಿವಕುಮಾರ್

Date:

ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆ ಪಕ್ಷ ಅಸ್ತಿತ್ವದಲ್ಲಿದ್ದರೆ ದೇವೇಗೌಡರ ಅಳಿಯನನ್ನು ಜೆಡಿಎಸ್ ಅಭ್ಯರ್ಥಿ ಮಾಡುತ್ತಿದ್ದರು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಬೆಂಗಳೂರಿನ ಕುಮಾರಪಾರ್ಕ್‌ನಲ್ಲಿನ ತಮ್ಮ ಸರ್ಕಾರಿ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು,”ಯಾರಾದರೂ ತಮ್ಮದೇ ಪಕ್ಷ ಇಟ್ಟುಕೊಂಡು ತಮ್ಮ ಕುಟುಂಬದವರನ್ನು ಬೇರೆ ಪಕ್ಷದಿಂದ ಕಣಕ್ಕಿಳಿಸುತ್ತಾರಾ? ಆ ಪಕ್ಷ ಇರಬೇಕು, ಪ್ರಬಲ ವಿರೋಧ ಪಕ್ಷವಾಗಬೇಕು ಎಂಬುದು ನಮ್ಮ ಆಸೆ. ಆದರೆ ಅವರೇ ತಮ್ಮ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡಿಕೊಳ್ಳುತ್ತಿದ್ದಾರೆ” ಎಂದರು.

“ದೇಶದ ಪ್ರಧಾನಿಯಾದವರು, ಎರಡು ಬಾರಿ ಮುಖ್ಯಮಂತ್ರಿಯಾದವರು ಇರುವ ಪಕ್ಷವನ್ನು ವಿಲೀನ ಮಾಡುತ್ತಿರುವುದನ್ನು ನೋಡಿ ಬೇಸರವಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐಟಿ ಇಲಾಖೆ ನೋಟೀಸ್ ಬಗ್ಗೆ ದೇವೇಗೌಡರ ಆರೋಪದ ಬಗ್ಗೆ ಕೇಳಿದಾಗ, “1823 ಕೋಟಿ ಕಟ್ಟಬೇಕು ಎಂದು ದೇಶದ ಐಟಿ ಇಲಾಖೆ ಎಐಸಿಸಿಗೆ ನೋಟೀಸ್ ನೀಡಿದೆ. ವಿರೋಧ ಪಕ್ಷಗಳ ಮೇಲೆ ಈ ರೀತಿ ದಾಳಿ ಮಾಡಲಾಗುತ್ತಿದೆ. ದೇವೇಗೌಡರು ಐಟಿ ಅಧಿಕಾರಿಯೇ? ಅವರು ಆರೋಪ ಮಾಡಬೇಕು, ಅದಕ್ಕಾಗಿ ಮಾಡಿದ್ದಾರೆ. ನಾವು ಕೂಡ ಅವರ ಮೇಲೆ ಆರೋಪ ಮಾಡಬಹುದು. ಅವರ ಆರೋಪ ನಿರಾಧಾರ. ನಾವು ಯಾರಿಗೂ ದುಡ್ಡು ಕಟ್ಟುವ ಅಗತ್ಯವಿಲ್ಲ. ನಮ್ಮ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡು ಅದರಲ್ಲಿದ್ದ ಹಣವನ್ನು ಕದ್ದಿದ್ದಾರೆ” ಎಂದು ಆರೋಪಿಸಿದರು.

“ನಮ್ಮ ಪಕ್ಷ 20ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲಿದೆ ಎಂಬುದು ಅವರಿಗೆ ಅರಿವಾಗಿದೆ. ಹೀಗಾಗಿ ಅಸೂಯೆಯಿಂದ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ”ಎಂದು ತಿರುಗೇಟು ನೀಡಿದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಸವಣ್ಣ, ಕುವೆಂಪು, ಶರೀಫರು ನಡೆದಾಡಿದ ಈ ನೆಲಕ್ಕೆ ಯೋಗಿ ಮಾದರಿಯ ಆಡಳಿತ ಬೇಕೇ ಭೈರಪ್ಪನವರೇ?

ಡಿ.ಕೆ ಸುರೇಶ್ ಪಕ್ಷದ ಬಾವುಟ ಬಿಟ್ಟು ಕನ್ನಡ ಬಾವುಟ ಇಟ್ಟುಕೊಂಡಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮಗೆ ರಾಷ್ಟ್ರಧ್ವಜ, ಪಕ್ಷದ ಧ್ವಜ, ನಾಡ ಧ್ವಜದ ಮೇಲೆ ಗೌರವವಿದೆ. ನಮ್ಮ ನಾಡು, ಭೂಮಿ, ನಮಗೆ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿ ರಾಜ್ಯದ ಹಿತ ಕಾಯಲು ನಾವು ಕನ್ನಡಿಗರಿಗೆ ಕರೆ ನೀಡುತ್ತಿದ್ದೇವೆ” ಎಂದು ತಿಳಿಸಿದರು.

ಬಿಜೆಪಿ ಅಸಮಾಧಾನಿತ ನಾಯಕ ಕರಡಿ ಸಂಗಣ್ಣ ಅವರು ನಿಮ್ಮನ್ನು ಹಾಗೂ ಮುಖ್ಯಮಂತ್ರಿಗಳನ್ನು ಸಂಪರ್ಕ ಮಾಡಿದ್ದಾರೆಯೇ ಎಂದು ಕೇಳಿದಾಗ, “ನಮ್ಮನ್ನು ಅನೇಕ ನಾಯಕರು ಸಂಪರ್ಕ ಮಾಡಿದ್ದಾರೆ. ಅವರ ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ. ನಮ್ಮ ಪಕ್ಷಕ್ಕೆ ಸೇರಲು ಬಯಸಿ ಬಿಜೆಪಿ ಹಾಗೂ ಜೆಡಿಎಸ್ ನ ಪ್ರಮುಖ ನಾಯಕರು ಮುಂದಾಗಿದ್ದಾರೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...