ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್‌ ಏನೂ ಹೇಳಿಲ್ಲ, ಮನೆಯವರೊಂದಿಗೆ ಚರ್ಚಿಸಿ ಮುಂದುವರೆಯುವೆ: ಸಿದ್ದರಾಮಯ್ಯ

Date:

  • ಕೋಲಾರದಿಂದ ಸ್ಪರ್ಧಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ ಅಭಿಮಾನಿ
  • ಕೋಲಾರದಿಂದ ಸ್ಪರ್ಧೆ ಮಾಡಬೇಡಿ ಎಂದು ಹೈಕಮಾಂಡ್‌ ಹೇಳಿಲ್ಲ ಎಂದ ಸಿದ್ದರಾಮಯ್ಯ


ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್‌ ಏನೂ ಹೇಳಿಲ್ಲ. ಆದರೂ ಸ್ಪರ್ಧೆ ಕುರಿತು ಮನೆಯವರೊಂದಿಗೆ ಚರ್ಚಿಸಿ ಮುಂದುವರೆಯುವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾದ ಹಿನ್ನೆಲೆಯಲ್ಲಿ ರಾಜಕೀಯ ಲೆಕ್ಕಾಚಾರಗಳು ಜೋರಾಗಿವೆ. ಈ ನಡುವೆ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಗೊಂದಲದ ಸಮಸ್ಯೆ ಕಾಡುತ್ತಿದ್ದು, ಕೋಲಾರದಿಂದಲೇ ಸ್ಪರ್ಧಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, “ದೆಹಲಿಯಲ್ಲಿ ಕೋಲಾರ ಮತಕ್ಷೇತ್ರದ ಬಗ್ಗೆ ಚರ್ಚೆಯಾಗಿಲ್ಲ. ಸುಮ್ಮನೆ ಅಪಪ್ರಚಾರ ಮಾಡಲಾಗುತ್ತಿದೆ. ರಾಹುಲ್ ಗಾಂಧಿ ಅವರು ಅಪಾಯ ತೆಗೆದುಕೊಳ್ಳಬೇಡಿ ಎಂದಿದ್ದರು. ಆದರೆ, ಕೋಲಾರದಿಂದ ಸ್ಪರ್ಧೆ ಮಾಡಬೇಡಿ ಎಂದು ಹೈಕಮಾಂಡ್ ನನಗೆ ಹೇಳಿಲ್ಲ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋಲಾರದಲ್ಲಿ ನನ್ನನ್ನು ಕಟ್ಟಿ ಹಾಕಲು ಪ್ರಯತ್ನಗಳು ನಡೆಯುತ್ತಿವೆ. ಆದ್ದರಿಂದ ಅಪಾಯ ಮೈಮೇಲೆ ಎಳೆದುಕೊಳ್ಳಬೇಡಿ ಎಂದು ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ” ಎಂದು ತಿಳಿಸಿದರು.

“ರಾಹುಲ್ ಗಾಂಧಿಯಾಗಲಿ, ಮಲ್ಲಿಕಾರ್ಜುನ ಖರ್ಗೆಯಾಗಲಿ ಕೋಲಾರದಲ್ಲಿ ಸ್ಪರ್ಧಿಸಬೇಡಿ ಎಂದು ಹೇಳಿಲ್ಲ. ನಾನು ಸ್ಥಳೀಯ ನಾಯಕರೊಂದಿಗೆ ಮಾತನಾಡಿದ್ದೇನೆ. ಚುನಾವಣಾ ಸ್ಪರ್ಧೆ ವಿಚಾರವನ್ನು ಹೈಕಮಾಂಡ್ ನನಗೆ ಬಿಟ್ಟಿದೆ. ಮನೆಯವರೊಂದಿಗೆ ಮಾತನಾಡಿ ಮುಂದಿನ ನಡೆ ಬಗ್ಗೆ ನಿರ್ಧರಿಸುವೆ” ಎಂದು ಹೇಳಿದರು.

ಕೋಲಾರದಿಂದಲೇ ಸ್ಪರ್ಧಿಸುವಂತೆ ಕಾರ್ಯಕರ್ತರಿಂದ ಒತ್ತಾಯ

ಕೋಲಾರ ಮತಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ಅವರು ಎರಡು ತಿಂಗಳ ಹಿಂದಿನಿಂದಲೂ ತಯಾರಿ ಮಾಡಿಕೊಂಡು ಬಂದಿದ್ದರು. ಆದರೆ, ರಾಹುಲ್ ಗಾಂಧಿ ಅವರು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದು ಒಳಿತಲ್ಲ ಎಂದು ಸಲಹೆ ನೀಡಿದ್ದರು.

ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಕ್ಷೇತ್ರದ ಕುರಿತು ಸಾಕಷ್ಟು ಚರ್ಚೆಗಳಾಗುತ್ತಿದ್ದು, ಕೋಲಾರದಿಂದಲೇ ಸ್ಪರ್ಧಿಸುವಂತೆ ಅಭಿಮಾನಿಗಳು ಅವರ ನಿವಾಸದ ಎದುರು ಧರಣಿ ನಡೆಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿದ್ದರಾಮಯ್ಯ ಅಭಿಮಾನಿಯೊಬ್ಬರು, “ಅವರು ಕೋಲಾರದಿಂದ ಸ್ಪರ್ಧಿಸದೇ ಹೋದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದರು. ಸಾಲದೆಂಬಂತೆ ಮತ್ತೋರ್ವ ಅಭಿಮಾನಿ ಅಂಗಿ ಬಿಚ್ಚಿ ಬಾರಕೋಲಿನಿಂದ ಹೊಡೆದುಕೊಂಡಿದ್ದಾನೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...