ಯತೀಂದ್ರ ಅವರನ್ನು ಎಂಎಲ್​ಸಿ ಮಾಡುವುದಾಗಿ ಹೈಕಮಾಂಡ್​ ಹೇಳಿದೆ: ಸಿದ್ದರಾಮಯ್ಯ

Date:

ಯತೀಂದ್ರ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್​​ನವರು ಎಂಎಲ್​ಸಿ ಮಾಡುವುದಾಗಿ ಹೇಳಿದ್ದರು. ಕಾದು ನೋಡಬೇಕು. ನಿಮ್ಮನ್ನು ಎಮ್‌ಎಲ್‌ಸಿ ಮಾಡುತ್ತೇವೆ, ನಿಮ್ಮ ತಂದೆಯವರಿಗೆ ಕ್ಷೇತ್ರ ಬಿಟ್ಟು ಕೊಡಿ ಅಂತ ಯತೀಂದ್ರ ಅವರಿಗೆ ಹೈಕಮಾಂಡ್‌ ಹೇಳಿತ್ತು. ವರಿಷ್ಠರ ಮಾತಿಗೆ ತಲೆ ಬಾಗಿ ಕ್ಷೇತ್ರ ಬಿಟ್ಟುಕೊಟ್ಟಿದ್ದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ನಾನು ಕೋಲಾರದಿಂದ ಸ್ಪರ್ಧಿಸಬೇಕು ಅಂದುಕೊಂಡಿದ್ದೆ. ಇಲ್ಲ ನೀವು ವರುಣಾದಿಂದ ಸ್ಪರ್ಧೆ ಮಾಡಿ ಅಂತ ಹೈಕಮಾಂಡ್‌ ಹೇಳಿದರು. ಯತೀಂದ್ರ ಅವರನ್ನು ಎಮ್‌ಎಲ್‌ಸಿ ಮಾಡುತ್ತಾರಾ ಕಾದು ನೋಡಬೇಕು” ಎಂದರು.

40 ಪೋನ್​ಗಳನ್ನು ಸರ್ಕಾರ ಟ್ಯಾಪ್​ ಮಾಡಿದೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, “ಪ್ರಜ್ವಲ್​ ರೇವಣ್ಣ ಅವರ ಪ್ರಕರಣವನ್ನು ಡೈವರ್ಟ್​ ಮಾಡಲು ಕುಮಾರಸ್ವಾಮಿ ಅವರು ಏನೇನೋ ಹೇಳುತ್ತಿದ್ದಾರೆ. ಕುಮಾರಸ್ವಾಮಿ ಈ ನೆಲದ ಕಾನೂನಿಗೆ ಗೌರವ ಕೊಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಜ್ವಲ್ ರೇವಣ್ಣ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳಿವೆ. ಈ ವಿಚಾರವನ್ನು ಡೈವರ್ಟ್ ಮಾಡಲು ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್​ ಅವರ ಹೆಸರು ಹೇಳುತ್ತಿದ್ದಾರೆ. ಪ್ರಜ್ವಲ್‌ ರೇವಣ್ಣರನ್ನು ನಾನು ಅಪರಾಧಿ ಅಂತ ಎಲ್ಲೂ ಹೇಳಿಲ್ಲ. ನಾನು ಸಹ ಆರೋಪಿ ಅಂತಲೇ ಹೇಳುತ್ತಿರುವುದು” ಎಂದು ತಿರುಗೇಟು ನೀಡಿದರು.

“ಪ್ರಜ್ವಲ್​ ರೇವಣ್ಣ ದೇವೇಗೌಡರು ಹಾಗೂ ಅವರ‌ ಮನೆಯವರಿಗೆ ಗೊತ್ತಿಲ್ಲದೇ ಮನೆಯಿಂದ ಹೋಗಿದ್ದಾನಾ? ಪ್ರಜ್ವಲ್ ಅವರ ಕುಟುಂಬದವರ ಸಂಪರ್ಕದಲ್ಲಿ ಇಲ್ಲವಾ? ಮೊದಲಿನಿಂದ ಪ್ರಜ್ವಲ್ ನನ್ನ ಸಂಪರ್ಕದಲ್ಲಿ ಇಲ್ಲ. ಪ್ರಜ್ವಲ್ ಪರ ಪ್ರಚಾರಕ್ಕೆ ಹೋದಾಗ ನನ್ನ ಮಗ ಎಂದಿದ್ದರು. ಆ ಹೇಳಿಕೆ ಅವರ ಸಂಪರ್ಕದಲ್ಲಿ ಇದ್ದ ಹಾಗೆ ಅಲ್ವಾ” ಎಂದು ಪ್ರಶ್ನಿಸಿದರು.

“ಪ್ರಜ್ವಲ್​ ರೇವಣ್ಣನ ಪಾಸ್​​ಪೋರ್ಟ್​ ರದ್ದು ಮಾಡುವಂತೆ ನಾನು ಪ್ರಧಾನಿ ಮೋದಿಯವರಿಗೆ ಎರಡು ಬಾರಿ ಪತ್ರ ಬರೆದಿದ್ದೇನೆ. ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನನ್ನ ಪತ್ರಕ್ಕಂತೂ ಈವರೆಗೂ ಪ್ರಧಾನಿ ಉತ್ತರವನ್ನ ಕೊಟ್ಟಿಲ್ಲ. ಒಬ್ಬ ಸಿಎಂ ಪತ್ರ ಬರೆದಾಗ ಉತ್ತರ ಕೊಡುತ್ತಾರೆಂದು ವಿಶ್ವಾಸವಿದೆ. ನೋಡೋಣ ಎರಡನೇ ಪತ್ರಕ್ಕಾದರೂ ಉತ್ತರ ಕೊಡುತ್ತಾರಾ?” ಎಂದರು.

ಲೋಕಸಭೆ ಬಳಿಕ ಸ್ಥಳೀಯ ಸಂಸ್ಥೆಗಳ ಚುನಾವಣೆ

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಗೆ ಚುನಾವಣೆ ನಡೆಸಲು ನಾವು ತಯಾರಿದ್ದೇವೆ. ಲೋಕಸಭೆ ಚುನಾವಣೆ ನೀತಿ ಸಂಹಿತೆ ಮುಗಿದ ಕೂಡಲೇ ಚುನಾವಣೆ ಮಾಡುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯವಾದ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಮೊದಲು ಕ್ಷೇತ್ರ ಪುನರ್ ವಿಂಗಡನೆ ಆಗುತ್ತದೆ. ನಂತರ ಮೀಸಲಾತಿ ಪ್ರಕಟಿಸುತ್ತೇವೆ” ಎಂದು ವಿವರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...