ಮಂಗನ ಕಾಯಿಲೆ | ಮರಣ ಪ್ರಮಾಣ ತಗ್ಗಿಸಲು ಡಿಹೆಚ್‌ಒಗಳಿಗೆ ಹೆಚ್ಚಿನ ಹೊಣೆ: ಸಚಿವ ಗುಂಡೂರಾವ್

Date:

  • ಮಲೆನಾಡು ಭಾಗದ ಶಾಸಕರೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಸಭೆ
  • ಕೆಎಫ್.ಡಿ ಟೆಸ್ಟಿಂಗ್ ನಲ್ಲಿ ವಿಳಂಬ ಆಗದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ

ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳ ತಾಲೂಕುಗಳಲ್ಲಿ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಮಲೆನಾಡು ಭಾಗದ ಶಾಸಕರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಮಹತ್ವದ ಸಭೆ ನಡೆಸಿದರು.

ಬಳಿಕ ಮಾಹಿತಿ ನೀಡಿದ ಸಚಿವರು, “ಈಗಾಗಲೇ ಮಂಗನ ಕಾಯಿಲೆಯಿಂದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಂದು ಸಾವು ಸಂಭವಿಸಿದ್ದು, ಮರಣ ಪ್ರಮಾಣ ತಗ್ಗಿಸಲು ಆಯಾ ಜಿಲ್ಲೆಗಳ ಡಿಹೆಚ್‌ಒಗಳಿಗೆ ಹೆಚ್ಚಿನ ಹೊಣೆ ನೀಡಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಸದ್ಯ 103 ಮಂಗನ ಕಾಯಿಲೆ ಪ್ರಕರಣಗಳು ಸಕ್ರಿಯವಾಗಿದ್ದು ಪಾಸಿಟಿವ್‌ ಪ್ರಕರಣಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಕೆಎಫ್‌ಡಿ ಪರೀಕ್ಷೆ, ಪಾಸಿಟಿವ್‌, ಮರಣ, ಡಿಸ್ಚಾರ್ಜ್‌ ಕುರಿತಾಗಿ ದೈನಂದಿನ ಬುಲೆಟಿನ್‌ ಹೊರಗಿಸಲಾಗುತ್ತಿದೆ. ಶಿವಮೊಗ್ಗ ಮತ್ತು ಮಣಿಪಾಲದಲ್ಲಿನ ಪ್ರಯೋಗಾಲಯಗಳನ್ನು KFD ಪರೀಕ್ಷೆಗೆ ಗುರುತಿಸಲಾಗಿದ್ದು, ಶೀಘ್ರವಾಗಿ ಮಾದರಿಗಳನ್ನು ಸಂಸ್ಕರಿಸಿ ಪರೀಕ್ಷೆ ನಡೆಸಿ ವರದಿ ನೀಡಲಾಗುತ್ತಿದೆ” ಎಂದು ಆರೋಗ್ಯ ಸಚಿವರು ತಿಳಿಸಿದರು.

“ಕಳೆದ ಒಂದು ತಿಂಗಳಿನಿಂದ ಮಂಗನ ಕಾಯಿಲೆಗೆ ಲಸಿಕೆ ನೀಡಲಾಗುತ್ತಿದ್ದು, ಮುಂದಿನ ಎರಡು ತಿಂಗಳಿಗಾಗುವಷ್ಟು ಲಸಿಕೆ ಲಭ್ಯವಿದೆ. ಶಿರಸಿ ಹಾಗೂ ಸಾಗರದಲ್ಲಿ ಮಂಗನ ಕಾಯಿಲೆ ಪತ್ತೆಹಚ್ಚಲು ಹೊಸ ಪರೀಕ್ಷಾ ಕೇಂದ್ರಗಳ ಸ್ಥಾಪನೆ ಮಾಡುವ ಬಗ್ಗೆ ಯೋಚನೆ ಮಾಡಲಾಗಿದೆ. ಮಂಗನ ಕಾಯಿಲೆಗೆ ಲಸಿಕೆ ಕಂಡುಹಿಡಿಯುವ ನಿಟ್ಟಿನಲ್ಲಿ ಐಸಿಎಂಆರ್ ಜೊತೆ ಮಾತುಕತೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಲಸಿಕೆ ಲಭ್ಯವಾಗಲಿದೆ” ಎಂದು ತಿಳಿಸಿದರು.

“ಮಂಗನ ಕಾಯಿಲೆಯ ತ್ವರಿತ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್‌ಗಳ ಹೆಚ್ಚಳ ಬಗ್ಗೆ ನಿರ್ಧರಿಸಲಾಗಿದೆ. ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ ಸಹಯೋಗದಲ್ಲಿ ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರ ಮೂಲಕ ಮಂಗನ ಕಾಯಿಲೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ” ಎಂದು ತಿಳಿಸಿದರು.

ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದ ಸಚಿವರು, ಕಾಯಿಲೆ ನಿಯಂತ್ರಣಕ್ಕೆ ಹೆಚ್ಚಿನ ಕ್ರಮಗಳ ಕುರಿತು ಶಾಸಕರ ಅಭಿಪ್ರಾಯ ಆಲಿಸಿದರು.

ಮಂಗನ ಕಾಯಿಲೆಯ ರೋಗಲಕ್ಷಣಗಳು ಕಂಡುಬಂದ ತಕ್ಷಣ ಟೆಸ್ಟಿಂಗ್ ಶೀಘ್ರಗತಿಯಲ್ಲಿ ನಡೆಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ, ಕೆಎಫ್.ಡಿ ಪಾಸಿಟಿವ್ ಬಂದವರನ್ನ ಕಡ್ಡಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.‌ ಶಿರಸಿಯಲ್ಲಿ ಕೆಎಫ್.ಡಿ ಟೆಸ್ಟಿಂಗ್‌ಗೆ ಪ್ರಯೋಗಾಲಯ ಸ್ಥಾಪನೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಇದನ್ನು ಓದಿದ್ದೀರಾ? ಸಿಎಂ ಜನಸ್ಪಂದನ 2.0 | 11 ದಿನದಲ್ಲಿ 14,685 ಅರ್ಜಿಗಳ ಪೈಕಿ 4,321 ಅರ್ಜಿ ವಿಲೇವಾರಿ ಯಶಸ್ವಿ: ಎಲ್ ಕೆ ಅತೀಕ್‌

ಸಭೆಯಲ್ಲಿ ಸಚಿವರಾದ ಮಧು ಬಂಗಾರಪ್ಪ, ಮಂಕಾಳ್ ಎಸ್‌. ವೈದ್ಯ, ಶಾಸಕರಾದ ಆರಗ ಜ್ಞಾನೇಂದ್ರ, ಹೆಚ್‌.ಡಿ.ತಮ್ಮಯ್ಯ, ಬೇಳೂರು ಗೋಪಾಲಕೃಷ್ಣ, ನಯನಾ ಮೋಟಮ್ಮ ಸೇರಿದಂತೆ ಜನಪ್ರತಿನಿಧಿಗಳು, ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...