ಹಿಂಡನ್‌ಬರ್ಗ್ | ರಾಹುಲ್ ಗಾಂಧಿ ‘ಅತ್ಯಂತ ಅಪಾಯಕಾರಿ ವ್ಯಕ್ತಿ’ ಎಂದ ಕಂಗನಾ ರಣಾವತ್

Date:

ಅದಾನಿ ಗ್ರೂಪ್ ಹಗರಣದಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಕೂಡಾ ಭಾಗಿಯಾಗಿರುವ ಬಗ್ಗೆ ಹಿಂಡನ್‌ಬರ್ಗ್ ವರದಿ ಬೆನ್ನಲ್ಲೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಸಂಸದೆ, ನಟಿ ಕಂಗನಾ ರಣಾವತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ” ಎಂದು ಕಂಗನಾ ಹೇಳಿದ್ದಾರೆ.

ಹಿಂಡನ್‌ಬರ್ಗ್‌ನ ಹೊಸ ಸಂಶೋಧನಾ ವರದಿ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡುತ್ತಾ ರಾಹುಲ್ ಗಾಂಧಿಯತ್ತ ಬೊಟ್ಟು ಮಾಡಿರುವ ಕಂಗನಾ, “ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ. ಕಹಿ, ವಿಷಕಾರಿ ಮತ್ತು ವಿನಾಶಕಾರಿ ವ್ಯಕ್ತಿಯಾಗಿದ್ದಾರೆ. ತಾನು ಪ್ರಧಾನಿಯಾಗಲು ಸಾಧ್ಯವಾಗದಿದ್ದರೆ ಈ ದೇಶವನ್ನೇ ನಾಶಪಡಿಸುವುದು ರಾಹುಲ್ ಗಾಂಧಿ ಅಜೆಂಡಾ” ಎಂದು ಆರೋಪಿಸಿದ್ದಾರೆ.

“ನಮ್ಮ ಷೇರು ಮಾರುಕಟ್ಟೆಯನ್ನು ಗುರಿಯಾಗಿಸಿಕೊಂಡು ರಾಹುಲ್ ಗಾಂಧಿ ಅನುಮೋದಿತ ಹಿಂಡನ್‌ಬರ್ಗ್ ವರದಿಯು ನಿನ್ನೆ ರಾತ್ರಿ ಟುಸ್ ಪಟಾಕಿಯಾಗಿದೆ. ಅವರು ಈ ರಾಷ್ಟ್ರದ ಭದ್ರತೆ ಮತ್ತು ಆರ್ಥಿಕತೆಯನ್ನು ಅಸ್ಥಿರಗೊಳಿಸಲು ಬೇಕಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಬಿಜೆಪಿ ಸಂಸದೆ ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹಿಂಡನ್‌ಬರ್ಗ್ | ಪತಿಯ ಬಾಲ್ಯದ ಸ್ನೇಹಿತನ ಫಂಡ್‌ನಲ್ಲಿ ಹೂಡಿಕೆ ಮಾಡಲಾಗಿದೆ, ಅದಾನಿಗಲ್ಲ: ಸೆಬಿ ಅಧ್ಯಕ್ಷೆ

“ರಾಹುಲ್ ಗಾಂಧಿ ನಿಮ್ಮ ಜೀವನದುದ್ದಕ್ಕೂ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಸಿದ್ಧರಾಗಿರಿ ಮತ್ತು ನೀವು ಅನುಭವಿಸುವ ರೀತಿಯಲ್ಲೇ ಈ ರಾಷ್ಟ್ರದ ಜನರ ವೈಭವ, ಬೆಳವಣಿಗೆ ಮತ್ತು ರಾಷ್ಟ್ರೀಯತೆಯನ್ನು ನೋಡಲು ಸಿದ್ಧರಾಗಿ. ಜನರು ನಿಮ್ಮನ್ನು ಎಂದಿಗೂ ತಮ್ಮ ನಾಯಕನನ್ನಾಗಿ ಮಾಡುವುದಿಲ್ಲ. ನೀವು ನಾಚಿಕೆಗೇಡಿನ ಮನುಷ್ಯ” ಎಂದು ಕಿಡಿಕಾರಿದ್ದಾರೆ.

ಆಗಸ್ಟ್ 10ರಂದು ರಾತ್ರಿ ಹಿಂಡನ್‌ಬರ್ಗ್ ಹೊಸದಾಗಿ ವರದಿಯೊಂದನ್ನು ಬಿಡುಗಡೆ ಮಾಡಿದೆ. ಈ ವರದಿಯಲ್ಲಿ ಅದಾನಿ ಗ್ರೂಪ್ ಹಗರಣದಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಧವಲ್‌ ಬುಚ್‌ ಭಾಗಿಯಾಗಿದ್ದಾರೆ. ಅವರೂ ಕೂಡಾ ಹೂಡಿಕೆ ಮಾಡಿದ್ದಾರೆ ಎಂದು ಈ ವರದಿಯು ಬಹಿರಂಗಪಡಿಸಿದೆ. ಆದರೆ ಸೆಬಿ ಅಧ್ಯಕ್ಷೆ ಇದು ಹಳೆಯ ಹೂಡಿಕೆ, ನಾನು ಸೆಬಿ ಅಧ್ಯಕ್ಷೆಯಾದ ಬಳಿಕ ಮಾಡಿರುವ ಹೂಡಿಕೆಯಲ್ಲ. ನನ್ನ ಪತಿಯ ಸ್ನೇಹಿತನ ಫಂಡ್‌ನಲ್ಲಿ ಮಾಡಿರುವ ಹೂಡಿಕೆ ಎಂದು ಹೇಳಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...