ಉತ್ತರ ಪ್ರದೇಶ | ಕನ್ವರ್ ಯಾತ್ರೆ: ಮಾಂಸಾಹಾರಿ ರೆಸ್ಟೋರೆಂಟ್‌ಗಳ ಮುಚ್ಚಿಸಿದ ಹಿಂದೂ ಸಂಘಟನೆ, ಆಹಾರ ಹೇರಿಕೆ ವಿರುದ್ಧ ಆಕ್ರೋಶ

Date:

ಶ್ರಾವಣ ತಿಂಗಳಲ್ಲಿ ಕನ್ವರ್ ಯಾತ್ರೆ ನಡೆಯುವ ಸಂದರ್ಭದಲ್ಲಿ ಯಾರೂ ಮಾಂಸಾಹಾರ ಸೇವಿಸಬಾರದು ಎಂಬ ಆಹಾರ ಹೇರಿಕೆಯನ್ನು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಹಿಂದೂ ಸಂಘಟನೆಗಳು ಮಾಡುತ್ತಿದೆ. ಹಿಂದೂ ರಕ್ಷಾ ದಳ(ಎಚ್‌ಆರ್‌ಡಿ)ದ ಕಾರ್ಯಕರ್ತರು ಗಾಜಿಯಾಬಾದ್‌ನ ಇಂದಿರಾಪುರಂ ಪ್ರದೇಶದ ಕೆಎಫ್‌ಸಿ ಔಟ್‌ಲೆಟ್‌ಗೆ ನುಗ್ಗಿ ದಾಂಧಲೆ ನಡೆಸಿದ್ದು, ರೆಸ್ಟೋರೆಂಟ್‌ಗಳನ್ನು ಮುಚ್ಚಿಸಿದ್ದಾರೆ. ‘ಜೈ ಶ್ರೀ ರಾಮ್’ ಮತ್ತು ‘ಹರ್ ಹರ್ ಮಹಾದೇವ್’ ಎಂದು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಜುಲೈ 11ರಿಂದ ಶ್ರಾವಣ ಮಾಸ ಆರಂಭವಾಗಿದ್ದು, ಕನ್ವರ್ ಯಾತ್ರೆ ನಡೆಯುತ್ತಿದೆ. ಈ ಸಮಯದಲ್ಲಿ ಮಾಂಸಾಹಾರಿ ಆಹಾರವನ್ನು ರೆಸ್ಟೋರೆಂಟ್‌ಗಳಲ್ಲಿ ನೀಡಬಾರದು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿದೆ. ಹೋಟೆಲ್, ರೆಸ್ಟೋರೆಂಟ್‌ಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನು ಓದಿದ್ದೀರಾ? ನವರಾತ್ರಿ | ಮಧ್ಯಪ್ರದೇಶದ ಪಟ್ಟಣದಲ್ಲಿ ಮಾಂಸಾಹಾರ ನಿಷೇಧ; ಆದೇಶ ಉಲ್ಲಂಘಿಸಿದರೆ ಪರವಾನಗಿ ರದ್ದು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತೊಂದು ವಿಡಿಯೋದಲ್ಲಿ ಪ್ರತಿಭಟನಾಕಾರರು ‘ಜೈ ಶ್ರೀ ರಾಮ್’ ಮತ್ತು ‘ಹರ್ ಹರ್ ಮಹಾದೇವ್’ ಎಂದು ಘೋಷಣೆಗಳನ್ನು ಕೂಗುತ್ತಾ ರೆಸ್ಟೋರೆಂಟ್‌ಗೆ ನುಗ್ಗುತ್ತಿರುವುದು ಕಂಡುಬಂದಿದೆ. ಶ್ರಾವಣ ಮಾಸದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಬೇಕು ಅಥವಾ ಸಸ್ಯಾಹಾರಿ ಆಹಾರವನ್ನು ಮಾತ್ರ ನೀಡಬೇಕು ಎಂದು ಸಿಬ್ಬಂದಿಗಳ ಬಳಿ ಹೇಳುತ್ತಿರುವುದು ಕಂಡುಬಂದಿದೆ.

ಈ ಗುಂಪಿನ ಮುಖ್ಯಸ್ಥ ಪಿಂಕಿ ಚೌಧರಿ, “ನಮ್ಮ ಸಂದೇಶ ಸ್ಪಷ್ಟವಾಗಿದೆ. ಕನ್ವರ್ ಯಾತ್ರೆಯ ಸಮಯದಲ್ಲಿ ಎಲ್ಲಾ ಮಾಂಸಾಹಾರಿ ಆಹಾರ ಮಳಿಗೆಗಳು ಮುಚ್ಚಬೇಕು. ರೆಸ್ಟೋರೆಂಟ್ ತೆರೆದಿರಬೇಕು ಎಂದು ಬಯಸುವುದಾದರೆ ಸಸ್ಯಾಹಾರವನ್ನು ಮಾತ್ರ ನೀಡಬೇಕು” ಎಂದು ಹೇಳಿದ್ದಾರೆ.

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ, ಟ್ರಾನ್ಸ್-ಹಿಂಡನ್ ಪ್ರದೇಶದ ಡಿಸಿಪಿ ನಿಮಿಷ್ ಪಾಟೀಲ್, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 163 ಅನ್ನು ಜಾರಿ ಮಾಡಿದ್ದಾರೆ. ಪ್ರತಿಭಟನಾಕಾರರು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ ಎಂದೂ ಹೇಳಿದ್ದಾರೆ.

ಸದ್ಯ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 223 ರ ಅಡಿಯಲ್ಲಿ 10 ಅಪರಿಚಿತ ವ್ಯಕ್ತಿಗಳ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಲಾಗಿದೆ. ಹಾಗೆಯೇ ಘಟನೆಯಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಡಿಸಿಪಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕಳೆದ ವರ್ಷವೂ ಶ್ರಾವಣ ಮಾಂಸದಲ್ಲಿ ಮಾಂಸಹಾರ ತಿನ್ನುವವರ ವಿರುದ್ಧ ಆಹಾರ ಹೇರಿಕೆಯ ಪ್ರಯತ್ನ ನಡೆದಿತ್ತು. ಪ್ರಧಾನಿ ನರೇಂದ್ರ ಮೋದಿ ಅವರೇ ಮಾಂಸಹಾರ ಸೇವಿಸಿದ ವಿಪಕ್ಷ ನಾಯಕರುಗಳನ್ನು ಟೀಕಿಸಿ ಕೀಳುಮಟ್ಟದ ರಾಜಕೀಯಕ್ಕೆ ಇಳಿದಿದ್ದರು. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಆಹಾರ ಹೇರಿಕೆ ಮಾಡುವ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

“ನೀವು ತಿನ್ನದಿದ್ದರೆ ತಿನ್ನಬೇಡಿ, ಇತರರ ಮೇಲೆ ಹೇರಿಕೆ ಮಾಡುವುದೇಕೆ? ಆಹಾರ ಅವರವರ ಆಯ್ಕೆ. ಅಷ್ಟಕ್ಕೂ ಬಿಹಾರದಲ್ಲಿ ನಿಮ್ಮ ಮಿತ್ರ ಪಕ್ಷ ಜೆಡಿಯು ಮೆರವಣಿಗೆ ಬಳಿಕ ಮಟನ್ ಪಾರ್ಟಿ(ಕುರಿ ಮಾಂಸದೂಟ) ನೀಡಲಾಗಿದೆ. ಅದರ ಬಗ್ಗೆ ಏನು ಹೇಳುತ್ತೀರಿ” ಎಂದು ನೆಟ್ಟಿಗರೊಬ್ಬರು ಪ್ರಶ್ನಿಸಿದ್ದಾರೆ. ಬಿಹಾರದಲ್ಲಿ ಕೇಂದ್ರ ಸಚಿವ, ಜೆಡಿಯು ನಾಯಕ ಲಲನ್ ಸಿಂಗ್ ಶ್ರಾವಣ ತಿಂಗಳಲ್ಲೇ ಮಾಂಸದೂಟದ ಔತಣಕೂಟವನ್ನು ನಡೆಸಿದ್ದಾರೆ.

ಇನ್ನು ಕೆಲವರು “ಇದು ಯುವಕರಲ್ಲಿ ನಿರುದ್ಯೋಗ ಹೆಚ್ಚಾಗಿರುವುದಕ್ಕೆ ಒಂದು ಸಾಕ್ಷಿ” ಎಂದು ಹೇಳಿದ್ದಾರೆ. ಇನ್ನೋರ್ವ ನೆಟ್ಟಿಗರು “ದೇಶ ಸಂವಿಧಾನದ ಪ್ರಕಾರವಾಗಿ ನಡೆಯುತ್ತಿದೆಯೇ ಅಥವಾ ಮನುಸ್ಮೃತಿ ಜಾರಿಯಲ್ಲಿದೆಯೇ” ಎಂದು ಕೇಳಿದ್ದಾರೆ. ಇವೆಲ್ಲವುದರ ನಡುವೆ ಬಿಜೆಪಿ ಬೆಂಬಲಿಗರು ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...