ಉತ್ತರ ಪ್ರದೇಶ | ಮಸೀದಿಯಲ್ಲಿ ಪ್ರಾರ್ಥಿಸಿದ ಹಿಂದೂ ವ್ಯಾಪಾರಿ; ಶುದ್ಧೀಕರಣಕ್ಕೆ ಬಲಪಂಥೀಯರ ಆಗ್ರಹ

Date:

ಉತ್ತರ ಪ್ರದೇಶದ ಆಲಿಗಢದ ಸ್ಥಳೀಯ ಮಸೀದಿಯಲ್ಲಿ ಹಿಂದೂ ವ್ಯಾಪಾರಿಯೊಬ್ಬರು ಸ್ವಯಂಪ್ರೇರಿತವಾಗಿ ಪ್ರಾರ್ಥನೆಯಲ್ಲಿ (ನಮಾಜ್) ಭಾಗಿಯಾಗಿದ್ದು, ಬಲಪಂಥೀಯರು ವಿವಾದ ಸೃಷ್ಟಿಸಿದ್ದಾರೆ. “ಹಿಂದೂ ವ್ಯಾಪಾರಿಯ ಶುದ್ಧೀಕರಣ ಮಾಡಬೇಕು” ಎಂದು ಸಂಘಪರಿವಾರ ಆಗ್ರಹಿಸಿದೆ.

ಮಾಮೂ ಭಂಜಾ ಪ್ರದೇಶದ ವ್ಯಾಪಾರಿಯಾದ ಸುನಿಲ್ ರಜನಿ ಗುರುವಾರ ಸಂಜೆ ತನ್ನ ಮುಸ್ಲಿಂ ನೆರೆಹೊರೆಯವರೊಂದಿಗೆ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ. ಅದರ ವಿಡಿಯೋ ವೈರಲ್ ಆಗಿತ್ತು.

ಇದನ್ನು ಓದಿದ್ದೀರಾ? ದೆಹಲಿಯ ಜಾಮಾ ಮಸೀದಿಯಲ್ಲಿ ಮುಸ್ಲಿಮರಿಗೆ ಪ್ರತಿದಿನ ಇಫ್ತಾರ್ ಆಯೋಜಿಸುತ್ತಿರುವ ಹಿಂದೂ ಯುವತಿ ನೇಹಾ ಭಾರ್ತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಯುವ ಮೋರ್ಚಾದ ಸ್ಥಳೀಯ ನಾಯಕ ಮೋನು ಅಗರ್ವಾಲ್ ಅವರು ರಜನಿಯವರ ಕೃತ್ಯ ಅಪವಿತ್ರ ಎಂದು ಹೇಳಿದ್ದಾರೆ. ಹಾಗೆಯೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದಲ್ಲದೇ ರಜನಿ ದೇವಸ್ಥಾನದಲ್ಲಿ ಶುದ್ಧೀಕರಣಗೊಳ್ಳಬೇಕು ಎಂದು ಅಗರ್ವಾಲ್ ಆಗ್ರಹಿಸಿದ್ದಾರೆ.

ಇನ್ನು ರಜನಿ ಮಸೀದಿಯಿಂದ ಹೊರಬರುತ್ತಿದ್ದಂತೆ ಕೆಲವು ಸಂಘಪರಿವಾರದ ಕಾರ್ಯಕರ್ತರು ರಜನಿ ಮೇಲೆ ಗಂಗಾಜಲ ಸಿಂಪಡಿಸಲು ಮುಂದಾದರು. ಈ ಮೂಲಕ ಶುದ್ಧೀಕರಣ ಮಾಡುತ್ತೇವೆ ಎಂದು ಕಾರ್ಯಕರ್ತರು ಹೇಳಿರುವುದಾಗಿ ವರದಿಯಾಗಿದೆ.

ಇನ್ನು ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಈ ವಿಚಾರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವು ನೆಟ್ಟಿಗರು ರಜನಿ ನಡೆಯನ್ನು ಖಂಡಿಸಿದರೆ, ಇನ್ನು ಕೆಲವರು ಓರ್ವ ವ್ಯಕ್ತಿಯ ವೈಯಕ್ತಿಕ ಆಯ್ಕೆಯನ್ನು ಬಲಪಂಥೀಯರು ತಮ್ಮ ರಾಜಕಾರಣಕ್ಕೆ ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಕಾಂಗ್ರೆಸ್‌ ನಾಯಕರು ಕೋಮುವಾದದ ಪರವೋ, ವಿರುದ್ಧವೋ?

“ಓರ್ವ ಮುಸ್ಲಿಂ ವ್ಯಕ್ತಿ ಕೈ ಮುಗಿದು ಪ್ರಾರ್ಥಿಸುವಂತೆ, ಹಿಂದೂ ನಮಾಜ್ ಮಾಡಿದರೆ ಏನಾಗುತ್ತದೆ? ನಮಾಜ್ ಮಾಡಿದ ಬಳಿಕ ಅಂತ ಅನಾಹುತ ಏನಾಗಿದೆ” ಎಂದು ಮನೋಜ್ ಎಂಬ ನೆಟ್ಟಿಗರು ಪ್ರಶ್ನಿಸಿದ್ದಾರೆ. ಇನ್ನು ಹಿಂದೂ ವ್ಯಕ್ತಿ ಬಂದಿದ್ದಾರೆ ಎಂದು ನಾವು ಮಸೀದಿಯ ಶುದ್ಧೀಕರಣವೇನು ಮಾಡಿಲ್ಲ. ಎಲ್ಲಾ ಧರ್ಮವೂ ಒಂದೇ ಎಂದು ಅಮೀರ್ ಖಾನ್ ಎಂಬ ನೆಟ್ಟಿಗರು ಹೇಳಿದ್ದಾರೆ.

“ನಮಾಜ್, ಪೂಜೆ ಅಥವಾ ಅರ್ಚನೆ- ಓರ್ವ ವ್ಯಕ್ತಿ ಏನು ಮಾಡಬೇಕು ಎಂಬುದು ಆತನ ವೈಯಕ್ತಿಕ ಆಯ್ಕೆಯಾಗಿರುತ್ತದೆ. ಯಾರೂ ಕೂಡಾ ಒತ್ತಾಯಪೂರ್ವಕವಾಗಿ ಮಂದಿರ ಅಥವಾ ಮಸೀದಿಗೆ ಹೋಗುವುದಿಲ್ಲ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...