ಹಿಂದೂಗಳು ಹಲಾಲ್ ಮಾಂಸ ತ್ಯಜಿಸಿ, ಜಟ್ಕಾ ಮಾಂಸವನ್ನೇ ತಿನ್ನಬೇಕು: ಕೇಂದ್ರ ಸಚಿವನಿಂದ ವಿವಾದಾತ್ಮಕ ಹೇಳಿಕೆ

Date:

ಸದಾ ವಿವಾದಾತ್ಮಕ ಹೇಳಿಕೆ ಹಾಗೂ ಮುಸ್ಲಿಮರ ವಿರುದ್ಧ ದ್ವೇಷಕ್ಕೆ ಕರೆ ನೀಡುವುದರಲ್ಲಿ ಗುರುತಿಸಿಕೊಂಡಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್, “ಹಿಂದೂಗಳು ಹಲಾಲ್ ಮಾಂಸ ತಿನ್ನುವುದನ್ನು ಬಿಟ್ಟು, ಜಟ್ಕಾ ಮಾಂಸ ಮಾತ್ರ ತಿನ್ನಬೇಕು” ಎಂದು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹಲಾಲ್ ವಿಚಾರವಾಗಿ ಹೇಳಿಕೆ ನೀಡಿರುವ ಅವರು, “ಷಡ್ಯಂತ್ರದ ಭಾಗವಾಗಿ ಹಿಂದೂಗಳಿಗೆ ಹಲಾಲ್ ಮಾಂಸವನ್ನು ನೀಡಲಾಗುತ್ತಿದೆ ಮತ್ತು ಅವರ ಧರ್ಮವನ್ನು ಭ್ರಷ್ಟಗೊಳಿಸಲಾಗುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

ಬಿಹಾರದ ಬೇಗುಸರಾಯ್‌ ಕ್ಷೇತ್ರದ ಬಿಜೆಪಿ ಸಂಸದನಾಗಿರುವ ಗಿರಿರಾಜ್ ಸಿಂಗ್, ನರೇಂದ್ರ ಮೋದಿ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೂಡ ಆಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

111011 tjlhuciffq 1570031713

ಬೇಗುಸರಾಯ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, “ಅನೇಕ ದೇವಸ್ಥಾನಗಳಲ್ಲಿ ಪ್ರಾಣಿ ಬಲಿ ಕೊಡುವ ಪದ್ಧತಿ ಹಿಂದೂ ಧರ್ಮದ ಭಾಗವಾಗಿದ್ದರೂ ಅದನ್ನು ನಿಷೇಧಿಸುವ ಷಡ್ಯಂತ್ರ ನಡೆಸಲಾಗುತ್ತಿದೆ. ಮತ್ತೊಂದೆಡೆ ಹಿಂದೂಗಳು ಮಾಡುವ ತ್ಯಾಗ ಬಲಿದಾನವಾದರೆ ಮುಸಲ್ಮಾನರ ಬಲಿದಾನವನ್ನೂ ಸರ್ಕಾರ ನಿಲ್ಲಿಸಬೇಕು. ಹಿಂದೂಗಳ ಮನೆಯಲ್ಲಿ ತಯಾರಿಸಿದ ಮಾಂಸವನ್ನು ಯಾವ ಮುಸಲ್ಮಾನರೂ ತಿನ್ನುವುದಿಲ್ಲ. ಆದರೆ ಹಿಂದೂಗಳು ಮುಸ್ಲಿಮರ ಮನೆಯಲ್ಲಿ ಬೇಯಿಸಿದ ಹಲಾಲ್ ಮಾಂಸವನ್ನು ತಿನ್ನುತ್ತಾರೆ. ಇದರಿಂದ ಹಿಂದೂಗಳ ಧರ್ಮ ಭ್ರಷ್ಟವಾಗುತ್ತಿದೆ. ರಾಜ್ಯದ ನಿತೀಶ್ ಸರ್ಕಾರಕ್ಕೆ ಈ ವಿಷಯಗಳ ಬಗ್ಗೆ ಕಾಳಜಿ ಇಲ್ಲ, ಅವರು ಕೇವಲ ತಮ್ಮ ವೋಟ್ ಬ್ಯಾಂಕ್ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ” ಎಂದು ಹೇಳಿಕೆ ನೀಡಿದ್ದಾರೆ.

“ರಸ್ತೆಬದಿಯಲ್ಲಿ ಮಾಂಸ ಕತ್ತರಿಸುವುದರಿಂದ ಸುತ್ತಮುತ್ತ ಕೊಳಚೆ ಹರಡುತ್ತಿದ್ದು, ಸ್ವಚ್ಛತೆಯ ಮೇಲೂ ಪರಿಣಾಮ ಬೀರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ರಸ್ತೆಬದಿಯ ಬಯಲಿನಲ್ಲಿ ಮಾಂಸ ಕತ್ತರಿಸುವುದನ್ನು ನಿಷೇಧಿಸಬೇಕು. ಹಿಂದೂಗಳು ಹಲಾಲ್ ಮಾಂಸ ತಿನ್ನುವುದನ್ನು ಬಿಡಬೇಕು, ಜಟ್ಕಾ ಮಾಂಸವನ್ನು ಮಾತ್ರ ತಿನ್ನಬೇಕು. ಜಟ್ಕಾ ಮಾಂಸ ವಿಧಾನದಲ್ಲಿ ಪ್ರಾಣಿಯನ್ನು ಒಂದೇ ಹೊಡೆತದಲ್ಲಿ ಕೊಲ್ಲಲಾಗುತ್ತದೆ. ಇನ್ನು ಮುಂದೆ ಹಲಾಲ್ ಮಾಂಸವನ್ನು ತಿನ್ನುವ ಮೂಲಕ ನಮ್ಮ ಧರ್ಮವನ್ನು ಭ್ರಷ್ಟಗೊಳಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು” ಎಂದು ಬೆಂಬಲಿಗರಲ್ಲಿ ಮನವಿ ಮಾಡಿದ್ದಾರೆ.

ಮುಸ್ಲಿಮರ ಬಗ್ಗೆ ತೀಕ್ಷ್ಣವಾದ ಹೇಳಿಕೆಗಳನ್ನು ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿರುವ ಗಿರಿರಾಜ್ ಸಿಂಗ್, ಮುಸ್ಲಿಮರನ್ನು ಇದೇ ವೇಳೆ ಹೊಗಳಿದ್ದಾರೆ.

“ಹಲಾಲ್ ಮಾಂಸವನ್ನು ಮಾತ್ರ ತಿನ್ನುತ್ತೇವೆ ಎಂದು ನಿರ್ಧರಿಸಿದ ಎಲ್ಲ ಮುಸ್ಲಿಮರನ್ನು ನಾನು ಪ್ರಶಂಸಿಸುತ್ತೇನೆ. ಈಗ ಹಿಂದೂಗಳು ತಮ್ಮ ಧಾರ್ಮಿಕ ಸಂಪ್ರದಾಯಗಳ ಬಗ್ಗೆ ಇದೇ ರೀತಿಯ ಬದ್ಧತೆ ತೋರಿಸಬೇಕು. ಮುಸ್ಲಿಂ ಸಮುದಾಯದಲ್ಲಿ ಜಟ್ಕಾ ಮಾಂಸ ತಿನ್ನುವುದನ್ನು ನಿಷೇಧಿಸಲಾಗಿದೆ. ಈ ಕಾರಣಕ್ಕಾಗಿ ಅವರು ಹಲಾಲ್ ಮಾಂಸವನ್ನು ಮಾತ್ರ ಸೇವಿಸುತ್ತಾರೆ” ಎಂದು ಸಿಂಗ್ ಹೇಳಿದ್ದಾರೆ.

ಹಲಾಲ್-ಜಟ್ಕಾ ಬಗ್ಗೆ ಕೇಂದ್ರ ಸಚಿವ ನೀಡಿದ ಹೇಳಿಕೆಯು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ ಬಳಿಕ ಇದು ವಿವಾದ ಎಬ್ಬಿಸಿದೆ. “ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ. ಹಾಗಾಗಿ, ನರೇಂದ್ರ ಮೋದಿ ಸರ್ಕಾರದ ಕೇಂದ್ರದ ಸಚಿವರಿಗೆ ತಮ್ಮ ಸಾಧನೆಗಳ ಬಗ್ಗೆ ಹೇಳಿಕೊಳ್ಳಲು ಏನೂ ಇಲ್ಲ. ಹಾಗಾಗಿ, ಮತ ಗಳಿಸಲು ಇಂತಹ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ವಿಭಜನೆ ಮಾಡುವ ಕಾಯಕವಷ್ಟೇ ಗೊತ್ತು” ಎಂದು ವಿಪಕ್ಷಗಳ ನಾಯಕರು ಕಿಡಿಕಾರಿದ್ದಾರೆ.

ತಮ್ಮ ಹೇಳಿಕೆಯ ಬಗ್ಗೆ ಸಮರ್ಥನೆ ನೀಡಿರುವ ಕೇಂದ್ರ ಸಚಿವರ ಗಿರಿರಾಜ್ ಸಿಂಗ್, “ನಾನು ತಮ್ಮ ಧರ್ಮಕ್ಕೆ ಬದ್ಧರಾಗಿರುವ ಮುಸ್ಲಿಮರನ್ನು ಗೌರವಿಸುತ್ತೇನೆ. ಹಿಂದೂಗಳೂ ಇದನ್ನು ಅರ್ಥ ಮಾಡಿಕೊಳ್ಳಬೇಕು. ಸನಾತನ ಧರ್ಮದಲ್ಲಿ ಜಟ್ಕಾ ಬಗ್ಗೆ ಇದೆ. ಮುಸ್ಲಿಮರು ಹೇಗೆ ಹಲಾಲ್ ಅನ್ನು ಅನುಸರಿಸುತ್ತಾರೋ, ಅದೇ ರೀತಿ ಜಟ್ಕಾವನ್ನು ಹಿಂದೂಗಳು ಅನುಸರಿಸಿ ಎಂದಷ್ಟೇ ತಿಳಿಸಿದ್ದೇನೆ. ಬೇಗುಸರಾಯ್‌ನಲ್ಲಿ ನಾನು ಕೂಡ ಜಟ್ಕಾ ಮಾಂಸದ ಅಂಗಡಿಯನ್ನು ತೆರೆಯುವ ಯೋಚನೆಯಲ್ಲಿದ್ದೇನೆ.” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...