ಉದಯನಿಧಿ ಪೂರ್ವಜರು ಕೂಡ ಸನಾತನ ಧರ್ಮದ ಬಗ್ಗೆ ಮಾತನಾಡಿದ್ದರು: ನಟ ಕಮಲ್ ಹಾಸನ್

Date:

  • ಕೊಯಮತ್ತೂರಿನಲ್ಲಿ ಮಕ್ಕಳ್ ನೀಧಿ ಮೈಯಂ ಪಕ್ಷದ ಸಭೆಯಲ್ಲಿ ಹೇಳಿಕೆ ನೀಡಿದ ಸ್ಥಾಪಕ
  • ಪೆರಿಯಾರ್ ಅವರನ್ನು ತಮಿಳುನಾಡು ತಮ್ಮವರು ಎಂದು ಹೇಳಿಕೊಳ್ಳಲಿ ಎಂದ ನಟ

ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿದ್ದಕ್ಕೆ ಬಲಪಂಥೀಯ ಸಂಘಟನೆ ಹಾಗೂ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿರುವ ತಮಿಳುನಾಡಿನ ಯುವಜನ ಮತ್ತು ಕ್ರೀಡಾ ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯ ವಿಚಾರವಾಗಿ ಮಾತನಾಡಿರುವ ಮಕ್ಕಳ್ ನೀಧಿ ಮೈಯಂ ಪಕ್ಷದ ಸ್ಥಾಪಕಾಧ್ಯಕ್ಷ, ಖ್ಯಾತ ನಟ ಕಮಲ್ ಹಾಸನ್, “ಸನಾತನ’ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಪೂರ್ವಜರು ಕೂಡ ಈ ಹಿಂದೆಯೇ ಮಾತನಾಡಿದ್ದರು” ಎಂದು ಅಭಿಪ್ರಾಯಿಸಿದ್ದಾರೆ.

ಕೊಯಮತ್ತೂರಿನಲ್ಲಿ ಇಂದು ನಡೆದ ಮಕ್ಕಳ್ ನೀಧಿ ಮೈಯಂ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು,”ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಇಂದು ಚಿಕ್ಕ ಮಗು (ಉದಯನಿಧಿ ಸ್ಟಾಲಿನ್) ಅವರನ್ನು ಗುರಿಪಡಿಸಿ, ಬೇಟೆಯಾಡಲಾಗುತ್ತಿದೆ. ಆತನ ಪೂರ್ವಜರು ‘ಸನಾತನ’ದ ಬಗ್ಗೆ ಮಾತನಾಡಿದ್ದಾರೆ. ನಮಗೆಲ್ಲರಿಗೂ ‘ಸನಾತನ’ ಪದದ ಬಗ್ಗೆ ತಿಳಿದಿದ್ದು ಪೆರಿಯಾರ್ ಅವರಿಂದ” ಎಂದು ಹೇಳಿದರು.

“ಪೆರಿಯಾರ್ ಅವರು ದೇವಸ್ಥಾನದಲ್ಲಿಯೂ ಕೆಲಸ ಮಾಡುತ್ತಿದ್ದರು. ಹಣೆಯಲ್ಲಿ ತಿಲಕವಿಟ್ಟು ವಾರಣಾಸಿಯಲ್ಲಿ ಪೂಜೆ ಮಾಡುತ್ತಿದ್ದರು. ಅದನ್ನೆಲ್ಲ ದೂರ ಮಾಡಿದ್ದಲ್ಲದೇ, ಜನಸೇವೆಯೇ ಎಲ್ಲಕ್ಕಿಂತ ಅತಿದೊಡ್ಡ ಸೇವೆ ಎಂದು ಅರಿತು ಇಡೀ ಜೀವನಪೂರ್ತಿ ಅದನ್ನೇ ಮಾಡಿಕೊಂಡು ಬಂದವರು. ಅವರಿಗೆ ಎಷ್ಟು ಸಿಟ್ಟು ಬಂದಿರಬಹುದು ಊಹಿಸಿ” ಎಂದ ಕಮಲ್ ಹಾಸನ್, “ಡಿಎಂಕೆ ಅಥವಾ ಯಾವುದೇ ಪಕ್ಷವೇ ಆಗಲಿ ಪೆರಿಯಾರ್ ಅನ್ನು ತಮ್ಮವರು ಎಂದು ಹೇಳಿಕೊಳ್ಳಬೇಡಿ. ಪೆರಿಯಾರ್ ಅವರನ್ನು ತಮಿಳುನಾಡು ತಮ್ಮವರು ಎಂದು ಹೇಳಿಕೊಳ್ಳಲಿ” ಎಂದು ನಟ, ರಾಜಕಾರಣಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ತಮಿಳುನಾಡಿನಲ್ಲಿ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಉದಯನಿಧಿ ಸ್ಟಾಲಿನ್, “ಕೆಲವು ವಿಷಯಗಳನ್ನು ನಾವು ವಿರೋಧಿಸುವ ಬದಲು ಅವುಗಳನ್ನು ನಿರ್ಮೂಲನೆ ಮಾಡುವುದೇ ಸರಿ. ನಾವು ಕೊರೋನಾ, ಡೆಂಗ್ಯೂ, ಮಲೇರಿಯಾದಂಥ ಸೋಂಕುಗಳನ್ನು ವಿರೋಧಿಸಬಾರದು. ಆರೋಗ್ಯ ಜಾಗೃತಿಯ ಮೂಲಕ ಅವುಗಳನ್ನು ನಿರ್ಮೂಲನೆ ಮಾಡಬೇಕು. ಹಾಗೆಯೇ ಸನಾತನ ಧರ್ಮವನ್ನೂ ನಾವು ವಿರೋಧಿಸುವ ಬದಲು ಸಾಮಾಜಿಕ ಜಾಗೃತಿಯ ಮೂಲಕ ನಿರ್ಮೂಲನೆ ಮಾಡಬೇಕು” ಎಂದು ಹೇಳಿಕೆ ನೀಡಿದ್ದರು. ಇದು ಬಲಪಂಥೀಯರು ಹಾಗೂ ಬಿಜೆಪಿಯವರ ಕಣ್ಣು ಕೆಂಪಗಾಗಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...