‘ರೈತರ ಹತ್ಯೆ’ಗೆ ಇತಿಹಾಸ ಬಿಜೆಪಿಯಿಂದ ಉತ್ತರ ಕೇಳುತ್ತದೆ; ರೈತನ ಸಾವಿಗೆ ರಾಹುಲ್ ಗಾಂಧಿ ಸಂತಾಪ

Date:

ಖಾನೌರಿ ಗಡಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ರೈತರೊಬ್ಬರು ಹತ್ಯೆಯಾಗಿದ್ದು, ಅವರ ಸಾವಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಇತಿಹಾಸವು ಖಂಡಿತವಾಗಿಯೂ ಬಿಜೆಪಿಯಿಂದ ರೈತರ ಹತ್ಯೆಗಳ ಉತ್ತರ ಕೇಳುತ್ತದೆ ಎಂದು ಹೇಳಿದ್ದಾರೆ.

‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಖರ್ಗೆ, “ರೈತರ ಜೀವ ಉಳಿಸದಿದ್ದಾಗ ಭಾರತವು ಹೇಗೆ ಮೌನವಾಗಿರುತ್ತದೆ? ಖಾನೌರಿ ಗಡಿಯಲ್ಲಿ ಗುಂಡಿನ ದಾಳಿಗೆ ಬಟಿಂಡಾದ ಯುವ ರೈತ ಶುಭಕರನ್ ಸಿಂಗ್ ಸಾವನ್ನಪ್ಪಿರುವುದು ನೋವು ತಂದಿದೆ” ಎಂದಿದ್ದಾರೆ.

“ಮೋದಿ ಸರ್ಕಾರವು – ಮೊದಲು 750 ರೈತರ ಜೀವಗಳನ್ನು ಬಲಿ ತೆಗೆದುಕೊಂಡಿತು. ಮೋದಿ ಸಂಪುಟದ ಸಚಿವರ ಮಗ ಲಖೀಂಪುರದಲ್ಲಿ ರೈತರನ್ನು ಮೇಲೆ ಕಾರು ಹರಿಸಿದನು. ಮಧ್ಯಪ್ರದೇಶದ ಮಂದಸೌರ್‌ನಲ್ಲಿಯೂ ಸಹ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುಂಡಿನ ದಾಳಿಗೆ ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂಬುದನ್ನು ನೆನಪಿಸಬೇಕಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸತ್ತಿನಲ್ಲಿ ಮೋದಿಜೀ ಅವರೇ ರೈತರನ್ನು ಆಂದೋಲಂಜೀವಿ ಮತ್ತು ಪರ್ಜೀವಿ (ಪರಾವಲಂಬಿಗಳು) ಎಂದು ಕರೆದಿದ್ದಾರೆ. 10 ವರ್ಷಗಳ ಬಿಜೆಪಿ ಆಡಳಿತ ರೈತರಿಗೆ ಬೆನ್ನಿಗೆ ದೊಣ್ಣೆಯಿಂದ ಹೊಡೆಯುತ್ತಿದೆ. ಹೊಟ್ಟೆಗೆ ಒದೆಯುವಂತಿದೆ. ಮೋದಿಯವರಿಗೆ ನಾಚಿಕೆಯಾಗಬೇಕು” ಎಂದು ಕಿಡಿಕಾರಿದ್ದಾರೆ.

ರಾಹುಲ್‌ ಗಾಂಧಿ ಕೂಡ ಪೋಸ್ಟ್‌ ಮಾಡಿದ್ದು, “ಪ್ರಧಾನಿ ನರೇಂದ್ರ ಮೋದಿಯವರ ದುರಹಂಕಾರವು ಕಳೆದ ಬಾರಿ 700 ರೈತರ ಜೀವ ತೆಗೆದುಕೊಂಡಿತು. ಸರ್ಕಾರ ಈಗ ಮತ್ತೆ ರೈತರ ಶತ್ರುವಾಗಿದೆ. ಖಾನೌರಿ ಗಡಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಯುವ ರೈತ ಶುಭಕರನ್ ಸಿಂಗ್ ಸಾವಿನ ಸುದ್ದಿ ಹೃದಯವಿದ್ರಾವಕವಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪವಿದೆ” ಎಂದು ಹೇಳಿದ್ದಾರೆ..

ಸ್ನೇಹಿ ಮಾಧ್ಯಮಗಳ ಹಿಂದೆ ಅಡಗಿರುವ ಬಿಜೆಪಿಯಿಂದ ಮುಂದೊಂದು ದಿನ ಇತಿಹಾಸ ಖಂಡಿತಾ ‘ರೈತರ ಹತ್ಯೆ’ಯ ಉತ್ತರ ಕೇಳುತ್ತದೆ,” ಎಂದಿರುವ ಅವರು ‘#FarmerLivesMatter’ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಪೋಸ್ಟ್‌ ಮಾಡಿದ್ದಾರೆ.

 

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, “ಒಂದೆಡೆ ಬಂಡವಾಳಶಾಹಿಗಳೊಂದಿಗೆ ಸ್ನೇಹ, ಮತ್ತೊಂದೆಡೆ ರೈತರಿಗೆ ದ್ರೋಹ” ಎಂದು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶಂಭು ಮತ್ತು ಖಾನೌರಿಯಲ್ಲಿ ಬ್ಯಾರಿಕೇಡ್‌ಗಳನ್ನು ಭೇದಿಸಿ ದೆಹಲಿಯತ್ತ ನಡೆಯಲು ರೈತರು ಪ್ರಯತ್ನಿಸಿದ್ದು, ಅವರನ್ನು ತಡೆಯಲು ಹರಿಯಾಣ ಪೊಲೀಸರು ಅಶ್ರುವಾಯು ಶೆಲ್‌ಗಳು ಮತ್ತು ರಬ್ಬರ್ ಬುಲೆಟ್‌ಗಳನ್ನು ಹಾರಿಸಿದ್ದಾರೆ. ಈ ವೇಳೆ, ಒಬ್ಬ ರೈತ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ.

ರೈತ ಹೋರಾಟವನ್ನು ತಡೆಯಲು ಸರ್ಕಾರ ರೈತರೊಂದಿಗೆ 4ನೇ ಸುತ್ತಿನ ಮಾತುಕತೆ ನಡೆಸಿದೆ. ಆದರೆ, ಸರ್ಕಾರದ ಪ್ರಸ್ತಾಪವನ್ನು ರೈತ ಮುಖಂಡರು ತಿರಸ್ಕಾರಿಸಿದ್ದಾರೆ. ಪಂಜಾಬ್-ಹರಿಯಾಣ ಗಡಿಯಲ್ಲಿ ಮೊಕ್ಕಾಂ ಹೂಡಿರುವ ರೈತರು ಹೋರಾಟವನ್ನು ಮುಂದುವರೆಸುತ್ತೇವೆ. ದೆಹಲಿ ಚಲೋ ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ಕೃಷಿ ಸಾಲ ಮನ್ನಾ ಸೇರಿದಂತೆ ತಮ್ಮ ಹಲವು ಬೇಡಿಕೆಗಳ ಈಡೇರಿಕೆಗೆ ಕೇಂದ್ರವನ್ನು ಒತ್ತಾಯಿಸಲು ರೈತರು ತಮ್ಮ ಟ್ರ್ಯಾಕ್ಟರ್-ಟ್ರಾಲಿಗಳು, ಮಿನಿ-ವ್ಯಾನ್‌ಗಳು ಮತ್ತು ಪಿಕಪ್‌ಗಳೊಂದಿಗೆ ಫೆಬ್ರವರಿ 13ರಿಂದ ಗಡಿ ಭಾಗಗಳಲ್ಲಿ ಮೊಕ್ಕಾಂ ಹೂಡುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...