ನ್ಯಾಯಾಲಯದ ಆದೇಶದಂತೆ ಹಂಪಿ ಸುತ್ತಮುತ್ತ ಹೋಮ್ ಸ್ಟೇಗಳನ್ನು ತಕ್ಷಣವೇ ನಿಲ್ಲಿಸಬೇಕು: ಸಿಎಂ ಸಿದ್ದರಾಮಯ್ಯ

Date:

  • ಹಂಪಿ ವಿಶ್ವಪರಂಪರೆ ಪ್ರದೇಶದ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳ ಕುರಿತಂತೆ ಸಿಎಂ ಅಧ್ಯಕ್ಷತೆಯಲ್ಲಿ ಚರ್ಚೆ
  • ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಮುಂದಿನ ಕ್ರಮಕ್ಕೆ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಪಾರಂಪರಿಕ ತಾಣವಾದ ಹಂಪಿಯ ಸುತ್ತಲಿನ ಗ್ರಾಮಗಳ ಕುರಿತು ನ್ಯಾಯಾಲಯ ಆದೇಶ ನೀಡಿರುವಂತೆ ಹೋಮ್ ಸ್ಟೇಗಳನ್ನು ತಕ್ಷಣಕ್ಕೆ ನಿಲ್ಲಿಸಬೇಕು. ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಮುಂದಿನ ಕ್ರಮಕ್ಕೆ ತೀರ್ಮಾನ ತೆಗೆದುಕೊಳ್ಳುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಂಪಿ ವಿಶ್ವಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳ ಕುರಿತಂತೆ ಚರ್ಚಿಸಲು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರ ನೇತೃತ್ವದ ನಿಯೋಗವು ಇಂದು ಅವರನ್ನು ಭೇಟಿಯಾಗಿ ಚರ್ಚಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ವಿಶ್ವಪಾರಂಪರಿಕ ತಾಣವಾದ ಹಂಪಿಯಲ್ಲಿ ಮಾದಕವಸ್ತುಗಳ ಬಳಕೆ, ವೇಶ್ಯಾವಾಟಿಕೆಗಳಂಥ ಕಾನೂನು ಬಾಹಿರ ಚಟುವಟಿಕೆಗಳನ್ನು ಗುರುತಿಸುವಂತೆ ನ್ಯಾಯಾಲಯ ಸೂಚಿಸಿದ್ದು, ಇದನ್ನು ಗುರುತಿಸಿ ನಿಲ್ಲಿಸುವ ಕೆಲಸವಾಗಬೇಕು ಮತ್ತು ಗ್ರಾಮಸ್ಥರಿಗೆ ವಿದ್ಯುತ್ ಮುಂತಾದ ಮೂಲಭೂತ ಸೌಕರ್ಯಗಳನ್ನು ಸ್ಥಗಿತಗೊಳಿಸಬಾರದು ಎಂದು ಅವರು ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಂಪಿ ಪ್ರದೇಶದ 29 ಗ್ರಾಮಗಳಲ್ಲಿ 10 ಸಾವಿರ ಜನರಿದ್ದಾರೆ. 2009 ರಲ್ಲಿ ನಾಲ್ಕು ಸ್ವಾಮೀಜಿಗಳು ದಾವೆ ಹೂಡಿದ್ದು, ಅನಧಿಕೃತ ಚಟುವಟಿಕೆಗಳನ್ನು ಗುರುತಿಸುವ ಕೆಲಸ ಪ್ರಾಧಿಕಾರದ್ದು ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಅದರ ಆಧಾರದ ಮೇಲೆ ಸ್ಥಳೀಯರಿಗೆ ಅಂಗಡಿ ಹಾಕಲು ಅವಕಾಶವಿಲ್ಲ. 230 ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹಂಪಿ ಅಭಿವೃದ್ಧಿಗೆ ಪ್ರಾಚ್ಯವಸ್ತು ಇಲಾಖೆ ಕ್ರಮವಹಿಸಿಲ್ಲ. ಹಂಪಿಗೆ ಬರುವ ಜನರಿಗೆ ಈ ಕ್ರಮದಿಂದ ತೊಂದರೆಯಾಗಿದೆ.
ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಅವರಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕಿದೆ. ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ, ಹಾಗೂ ಆರ್ಥಿಕ ಚಟುವಟಿಕೆ ಹಮ್ಮಿಕೊಳ್ಳಲು, ಹೋಮ್ ಸ್ಟೇ ನಡೆಸಲು ಅವಕಾಶ ಕಲ್ಪಿಸಲು ಅವಕಾಶ ನೀಡುವಂತೆ ಮಾಜಿ ಸಂಸದ ಉಗ್ರಪ್ಪ ಮನವಿ ಮಾಡಿದರು.

ದಿನನಿತ್ಯದ ಅವಶ್ಯಕತೆಗಳಿಗೆ 50 ಚಟುವಟಿಕೆಗಳನ್ನು ಗುರುತಿಸಲಾಗಿದೆ. ಹೋಮ್ ಸ್ಟೇಗೆ ಇದರಲ್ಲಿ ಅವಕಾಶ ಕಲ್ಪಿಸಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಜಾಗದಲ್ಲಿ ಸ್ಟಾರ್ ಹೋಟೆಲ್ ನಿರ್ಮಿಸಲು ಅನುಮತಿ ನೀಡಲಾಗಿದೆ.‌ ಜೈನರ ಆಶ್ರಮ, ಮಠವಿದೆ, ಖಾಸಗಿಯವರಿಗೆ ಹೋಮ್ ಸ್ಟೇ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ. ಆದರೆ ಬಡವರಿಗೆ ಹೋಟೆಲು, ಹೋಮ್ ಸ್ಟೇ ನಡೆಸಲು ಅವಕಾಶವಿಲ್ಲ ಎಂದು ಉಗ್ರಪ್ಪ ಅವರು ವಿವರಿಸಿದರು.

ಹೋಮ್ ಸ್ಟೇ ವಾಣಿಜ್ಯ ಚಟುವಟಿಕೆಯಾಗಿದೆ ಎಂದು ನ್ಯಾಯಾಲಯ ಪರಿಗಣಿಸಿದೆ. ಸದ್ಯ ನ್ಯಾಯಾಲಯ ಸ್ಥಳ ಪರಿಶೀಲನೆ ಮಾಡಲು ಸೂಚಿಸಿದ್ದು, ಈ ಚಟುವಟಿಕೆಗಳಿಂದ ಪಾರಂಪರಿಕ ತಾಣಕ್ಕೆ ಹಾನಿಯಾಗುತ್ತದೆಯೇ ಎಂಬ ಅಂಶಗಳನ್ನು ಪರಿಶೀಲಿಸಲು ತಿಳಿಸಿದೆ ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು.

ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ತುಕಾರಾಂ, ಹಿರಿಯ ಕಾಂಗ್ರೆಸ್ ಮುಖಂಡ ಅಲ್ಲಂ ವೀರಭದ್ರಪ್ಪ, ಹಂಪಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಸೇರಿ ಸಂತ್ರಸ್ಥ ಗ್ರಾಮದ 50ಕ್ಕೂ ಹೆಚ್ಚು ನಿವಾಸಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...