ದೇಶದ ಅಭಿವೃದ್ಧಿಗೆ ಕೈಜೋಡಿಸಿ: ‘ಕಾಶ್ಮೀರಿ ಯುವ ವಿನಿಮಯ ಕಾರ್ಯಕ್ರಮ’ದಲ್ಲಿ ರಾಜ್ಯಪಾಲ ಗೆಹ್ಲೋಟ್

Date:

ನಮ್ಮ ಯುವಕರು ದೇಶದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಗಾಗಿ ಮತ್ತು ಪ್ರಜಾಪ್ರಭುತ್ವ ಮತ್ತು ಅಭಿವೃದ್ಧಿಯನ್ನು ಬಲಪಡಿಸುವ ಜೊತೆಗೆ ಪ್ರಮುಖ ಮಾನವ ಸಂಪನ್ಮೂಲಗಳಾಗಿದ್ದಾರೆ ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

‘ಕಾಶ್ಮೀರಿ ಯುವ ವಿನಿಮಯ ಕಾರ್ಯಕ್ರಮ’ದ ಸಮಾರೋಪ ಸಮಾರಂಭ “ವತನ್ ಕೋ ಜಾನೋ” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಭಾರತ ಯುವಕರ ದೇಶ. ಭಾರತದ ಜನಸಂಖ್ಯೆಯ ಸುಮಾರು 65 ಪ್ರತಿಶತದಷ್ಟು ಜನರು 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ ಮತ್ತು ಯುವಕರು ದೇಶದ ಭವಿಷ್ಯ ಮತ್ತು ದೇಶದ ಅಭಿವೃದ್ಧಿಯ ಪ್ರಮುಖ ಭಾಗವಾಗಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

yuva

“ಸ್ವಾತಂತ್ರ್ಯದ 75 ವರ್ಷಗಳಲ್ಲಿ ದೇಶವು ಎಲ್ಲ ಕ್ಷೇತ್ರಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿದೆ. ಸ್ವಾವಲಂಬಿ ಭಾರತವನ್ನು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇಂದು ನಮ್ಮ ಆರ್ಥಿಕತೆಯು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು ವಿಶ್ವದ 3 ನೇ ಅತಿದೊಡ್ಡ ಆರ್ಥಿಕತೆಯತ್ತ ಸಾಗುತ್ತಿದೆ. 2047ರವರೆಗಿನ ಸ್ವಾತಂತ್ರ್ಯದ ಶತಮಾನವು ಭವ್ಯವಾದ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಮತ್ತು ನಮ್ಮ ದೇಶವನ್ನು ವಿಶ್ವದ ಅತ್ಯುತ್ತಮ ದೇಶಗಳ ವರ್ಗಕ್ಕೆ ತರುವ ಕರ್ತವ್ಯದ ಅವಧಿಯಾಗಿದೆ. ಈ ಕರ್ತವ್ಯದ ಅವಧಿಯನ್ನು ಅವಕಾಶವನ್ನಾಗಿ ಪರಿವರ್ತಿಸಲು ನಾವು ಪಾಲುದಾರರಾಗಬೇಕು” ಎಂದು ಕರೆ ನೀಡಿದರು.

“ಕರ್ನಾಟಕವು ದೇಶದ ಪ್ರಗತಿಪರ, ಉತ್ತಮವಾಗಿ ಅಭಿವೃದ್ಧಿ ಹೊಂದಿದ ಮತ್ತು ಸಮೃದ್ಧ ರಾಜ್ಯವಾಗಿದೆ. ಶಿಕ್ಷಣ, ಆರೋಗ್ಯ, ಕೃಷಿ, ಮಾಹಿತಿ ಮತ್ತು ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಕೈಗಾರಿಕೆ ಮತ್ತು ವಾಣಿಜ್ಯ, ಸ್ಟಾರ್ಟ್‌ ಅಪ್‌ಗಳು, ಏರೋಸ್ಪೇಸ್, ಕೃತಕ ಬುದ್ಧಿಮತ್ತೆ, ಇಂಧನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಕರ್ನಾಟಕ ಗಮನಾರ್ಹ ಪ್ರಗತಿ ಸಾಧಿಸಿದೆ” ಎಂದು ಶ್ಲಾಘಿಸಿದರು.

rajyapala

“ಕಾಶ್ಮೀರವು ನೈಸರ್ಗಿಕ ಸೌಂದರ್ಯ ತುಂಬಿದ ರಾಜ್ಯವಾಗಿದೆ. ಅದರ ವಿಶಿಷ್ಟ ಸಂಸ್ಕೃತಿ ಮತ್ತು ಮಾತಾ ವೈಷ್ಣೋ ದೇವಿ ಮತ್ತು ಬಾಬಾ ಅಮರನಾಥರ ಗುಹೆಗಳಿಗೆ ದೇಶ ಮತ್ತು ಪ್ರಪಂಚದಲ್ಲಿ ಪ್ರಸಿದ್ಧವಾಗಿದೆ. ಭೂಮಿಯ ಮೇಲೆ ಎಲ್ಲಿಯಾದರೂ ಸ್ವರ್ಗವಿದ್ದರೆ ಅದು ಕಾಶ್ಮೀರದಲ್ಲಿದೆ ಎಂದು ಹೇಳಲಾಗುತ್ತದೆ. ಕಾಶ್ಮೀರ ಯುವ ವಿನಿಮಯ ಕಾರ್ಯಕ್ರಮದ ಮೂಲಕ, ನಮ್ಮ ಕಾಶ್ಮೀರಿ ಯುವಕರು ನಮ್ಮ ದೇಶದ ಅನನ್ಯ ಗುರುತು, ವೈವಿಧ್ಯತೆಯಲ್ಲಿ ಏಕತೆಯ ಪರಿಕಲ್ಪನೆಯನ್ನು ತಿಳಿದುಕೊಳ್ಳಲು ಮತ್ತು ಭಾರತದ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಮತ್ತು ಪರಸ್ಪರರ ಸಾಮಾಜಿಕ ಏಕೀಕರಣವನ್ನು ತಿಳಿದುಕೊಳ್ಳಲು ಅವಕಾಶ ಪಡೆಯುತ್ತಿದ್ದಾರೆ. ರಾಜ್ಯ ಮತ್ತು ಸಾಂಸ್ಕೃತಿಕ ವಿನಿಮಯವನ್ನು ಉತ್ತೇಜಿಸಲಾಗುತ್ತಿದೆ” ಎಂದು ಹೇಳಿದರು.

ಡಿಸೆಂಬರ್ 25ರಿಂದ 31ರವರೆಗೆ ಕೊಡಗು ಜಿಲ್ಲಾ ಯುವಜನ ಸಂಘ ಮತ್ತು ಕೂರ್ಗ್ ಪಬ್ಲಿಕ್ ಸ್ಕೂಲ್, ಗೋಣಿಕೊಪ್ಪಲಿನ ಪೂರ್ವ ವಿಶ್ವವಿದ್ಯಾಲಯದ ಕಾಲೇಜು ಸಹಯೋಗದಲ್ಲಿ ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಗೃಹ ಸಚಿವಾಲಯದ ಮಾರ್ಗದರ್ಶನದಲ್ಲಿ ನೆಹರು ಯುವ ಕೇಂದ್ರ ಸಂಘಟನೆ ಕರ್ನಾಟಕದಿಂದ ಕರ್ನಾಟಕದ ಕೂರ್ಗ್‌ನಲ್ಲಿ ‘ಕಾಶ್ಮೀರಿ ಯುವ ವಿನಿಮಯ ಕಾರ್ಯಕ್ರಮ’ ಆಯೋಜಿಸಲಾಗಿತ್ತು.

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ.ಮಂತರ್ ಗೌಡ, ಎಂ.ಎನ್.ನಟರಾಜ್, ನೆಹರು ಯುವ ಕೇಂದ್ರ ಸಂಘಟನೆಯ ಪ್ರಾದೇಶಿಕ ನಿರ್ದೇಶಕ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...