ಸರ್ಕಾರದ ವೆಚ್ಚ, ಗ್ಯಾರಂಟಿಗಳಿಗೆ ಶೇ.80ರಷ್ಟು ಬಜೆಟ್‍ ಖರ್ಚಾದರೆ ಅಭಿವೃದ್ಧಿ ಹೇಗೆ ಸಾಧ್ಯ: ವಿಜಯೇಂದ್ರ ಪ್ರಶ್ನೆ

Date:

ಮುಖ್ಯಮಂತ್ರಿಗಳು ಅತಿ ಹೆಚ್ಚು ಮೊತ್ತದ ಬಜೆಟ್ ಮಂಡಿಸಿದ್ದು, ರಾಜ್ಯದ ಮೇಲೆ ಸಾಲದ ಹೊರೆ 7.6 ಲಕ್ಷ ಕೋಟಿಗೆ ಹೆಚ್ಚಾಗಿದೆ. ಸಾಲದ ಹೊರೆ ತಗ್ಗಿಸುವ ಸಲುವಾಗಿ ಹಣಕಾಸಿನ ಯಾವುದೇ ಕ್ರಿಯಾಯೋಜನೆ ರೂಪಿಸಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ವಿಧಾನಸಭಾ ಅಧಿವೇಶನದಲ್ಲಿ ಮಂಗಳವಾರ ಮಾತನಾಡಿ, “ಸರಕಾರದ ವೆಚ್ಚ, ಗ್ಯಾರಂಟಿಗಳ ವೆಚ್ಚವು ಬಜೆಟ್‍ನ ಶೇ.80 ರಷ್ಟಾಗಿದೆ. ಬಂಡವಾಳ ವೆಚ್ಚಕ್ಕೆ ಸಿಗಬೇಕಾದಷ್ಟು ಅನುದಾನ ಸಿಗುತ್ತಿಲ್ಲ. ಇದರಿಂದ ರಾಜ್ಯದಲ್ಲಿ ಯಾವ ರೀತಿ ಅಭಿವೃದ್ಧಿ ಸಾಧ್ಯ” ಎಂದು ಪ್ರಶ್ನಿಸಿದರು.

“ಸಾಲದ ಪ್ರಮಾಣ ಒಂದೆಡೆ ಏರುತ್ತಿದೆ. 2025-26ನೇ ಸಾಲಿನ ಅಂತ್ಯಕ್ಕೆ ರಾಜ್ಯ ಸರಕಾರವು 45,600 ಕೋಟಿ ಬಡ್ಡಿ ಪಾವತಿಸಬೇಕಾಗುತ್ತದೆ. 2027-28ಕ್ಕೆ ಸುಮಾರು 60 ಸಾವಿರಕ್ಕೂ ಹೆಚ್ಚು ಕೋಟಿ ರೂಪಾಯಿಗಳನ್ನು ಕೇವಲ ಬಡ್ಡಿಗೆ ಮೀಸಲಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. 2027-28ಕ್ಕೆ ರಾಜ್ಯದ ಒಟ್ಟು ಸಾಲ 9 ಲಕ್ಷ ಕೋಟಿ ದಾಟಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಒಂದು ಕಡೆ ಬೆಲೆ ಏರಿಕೆ ಪರಿಣಾಮವಾಗಿ ಹಣದುಬ್ಬರ ಹೆಚ್ಚಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಅತಿ ಹೆಚ್ಚು ಹಣದುಬ್ಬರ ಇದೆ. ಶೇ 5.03ರಷ್ಟು ಹಣದುಬ್ಬರ ನಮ್ಮ ರಾಜ್ಯದಲ್ಲಿದ್ದರೆ, ಪಕ್ಕದ ಮಹಾರಾಷ್ಟ್ರದಲ್ಲಿ ಅದು 3.39 ರಷ್ಟಿದೆ. ಆಂಧ್ರ ಪ್ರದೇಶದಲ್ಲಿ 4.02, ಗುಜರಾತ್‍ನಲ್ಲಿ 3.88 ರಷ್ಟಿದೆ. ಇಡೀ ದೇಶದಲ್ಲಿ ಅತಿ ಹೆಚ್ಚು ಹಣದುಬ್ಬರ ನಮ್ಮ ರಾಜ್ಯದಲ್ಲಿ ಇದೆ” ಎಂದು ಗಮನ ಸೆಳೆದರು.

ಜಿಡಿಪಿ ಬೆಳವಣಿಗೆ ಬಗ್ಗೆ ಮಾತನಾಡಿ, “ನಮ್ಮ ಬಿಜೆಪಿ ಸರಕಾರ ರಾಜ್ಯದಲ್ಲಿ ಇದ್ದಾಗ 2022-23ರಲ್ಲಿ ಅದು 14.2 ಶೇಕಡಾದಷ್ಟಿತ್ತು. ಈ ಕಾಂಗ್ರೆಸ್ ಸರಕಾರ ಬಂದ ಬಳಿಕ 2023-24ರಲ್ಲಿ ಶೇ.9.6 ರಷ್ಟಾಗಿದೆ. ಅಂದರೆ ಹಿಂದಿನ ಬಿಜೆಪಿ ಸರಕಾರದಲ್ಲಿ 14.2 ಶೇ ಇದ್ದರೆ, ಈಗಿನ ಕಾಂಗ್ರೆಸ್ ಸರಕಾರದಲ್ಲಿ ಅದು ಶೇ.9.6ಕ್ಕೆ ಇಳಿದಿದೆ. ಆರ್ಥಿಕ ಪರಿಸ್ಥಿತಿ ಏನಾಗುತ್ತಿದೆ ಎಂದು ನಾವು ಚರ್ಚೆ ಮಾಡಬೇಕಿದೆ” ಎಂದು ತಿಳಿಸಿದರು.

“ಬಂಡವಾಳ ಹೂಡಿಕೆಯು ಕೇವಲ ಹಾಳೆ ಮೇಲಿದೆಯೇ ಹೊರತು ಯಾವುದೂ ಅನುಷ್ಠಾನಕ್ಕೆ ಬಂದಿಲ್ಲ. ಕಳೆದ 20 ತಿಂಗಳಿನಲ್ಲಿ ಸರಕಾರ ತಲೆ ಕೆಡಿಸಿಕೊಳ್ಳದ ಕಾರಣ ಕೈಗಾರಿಕಾ ಬೆಳವಣಿಗೆ ಕಡಿಮೆಯಾಗಿದೆ. ಈ ಬಜೆಟ್ ಅವಲೋಕನ ಮಾಡಿದರೆ ಇದು ರಾಜ್ಯದ ಯಾವುದೇ ವರ್ಗದ ಜನರಿಗೆ ಸಂತೃಪ್ತಿ ತಂದಿಲ್ಲ. ನಾಡಿನ ಕೃಷಿಕರು, ಬಡವರು, ಮಹಿಳೆಯರು, ಯುವಕರು ಸೇರಿ ಎಲ್ಲರಿಗೂ ಈ ಬಜೆಟ್ ನಿರಾಸೆ ತಂದಿದೆ. ಶಿಕ್ಷಣ, ಆರೋಗ್ಯ ಸೇರಿ ಯಾವುದೇ ಆದ್ಯತಾ ಕ್ಷೇತ್ರಗಳಿಗೂ ಗಮನ ಹರಿಸಿಲ್ಲ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...