ಫೋನ್ ಟ್ಯಾಪಿಂಗ್ ಯಂತ್ರಗಳು ಕರ್ನಾಟಕಕ್ಕೆ ಎಷ್ಟು ಬಂದಿವೆ ಎಂಬುದು ತನಿಖೆಯಾಗಲಿ: ಆರ್.ಅಶೋಕ್

Date:

40-50 ಲಕ್ಷ ಕೊಟ್ಟರೆ ಚೀನಾದಿಂದ ಫೋನ್ ಟ್ಯಾಪಿಂಗ್ ಯಂತ್ರ ಅಕ್ರಮವಾಗಿ ಸಿಗುತ್ತದೆ. ಫೋನ್ ಟ್ಯಾಪಿಂಗ್ ಎಂಬುದೇ ಅಕ್ರಮ. ಚೀನಾದಿಂದ ಖರೀದಿಸಿದ ಫೋನ್ ಟ್ಯಾಪಿಂಗ್ ಯಂತ್ರಗಳು ಕರ್ನಾಟಕಕ್ಕೆ ಎಷ್ಟು ಬಂದಿವೆ? ಯಾರ ಮನೆಯಲ್ಲಿ ಇವೆ? ಎಂಬುದನ್ನು ಪತ್ತೆ ಮಾಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, “ವಿರೋಧ ಪಕ್ಷದವರ ಫೋನ್ ಟ್ಯಾಪಿಂಗ್ ಮಾಡುತ್ತಾರೆ ಎಂದು ಪೊಲೀಸ್ ಅಧಿಕಾರಿಗಳು ನನಗೂ ಹೇಳಿದ್ದಾರೆ. ಸರಕಾರ ಫೋನ್ ಟ್ಯಾಪಿಂಗ್ ಮಾಡುತ್ತಿಲ್ಲ ಎಂದಾದರೆ ಇಂಥ ಯಂತ್ರಗಳು ಎಲ್ಲೆಲ್ಲಿ ಇವೆ ಎಂದು ತನಿಖೆ ಮಾಡಲಿ” ಎಂದು ಆಗ್ರಹಿಸಿದರು.

“ಕುಮಾರಸ್ವಾಮಿಯವರು ಅವರಿಗೆ ಇರುವ ಮಾಹಿತಿಯಲ್ಲಿ ಇದನ್ನು ಹೇಳಿದ್ದಾರೆ. ಯಾರೇ ಆಗಲಿ; ಈ ತರ ಫೋನ್ ಟ್ಯಾಪಿಂಗ್ ಮಾಡುವುದು ಅಪರಾಧ. ಅಂಥವರನ್ನೆಲ್ಲ ಜೈಲಿಗೆ ಕಳುಹಿಸಬೇಕು. ಫೋನ್ ಟ್ಯಾಪಿಂಗ್ ಅಕ್ರಮಕ್ಕೆ ಕಡಿವಾಣ ಹಾಕಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ವಿಷಯವನ್ನು ಸರಕಾರವು ಸಿಬಿಐ ತನಿಖೆಗೆ ಒಪ್ಪಿಸಲಿ. ಸರಕಾರ ಇಂಥ ಅಕ್ರಮ ಮಾಡಿಲ್ಲ ಎಂದು ಧೈರ್ಯದಿಂದ ಹೇಳುವುದಾದರೆ ಸಿಬಿಐ ತನಿಖೆ ಮಾಡಿಸಲಿ. ಫೋನ್ ಟ್ಯಾಪಿಂಗ್ ಯಂತ್ರಗಳನ್ನು ಬೇರೆ ದೇಶದಿಂದ ಖರೀದಿಸಿರುವ ಸಾಧ್ಯತೆ ಇದ್ದು, ಇಲ್ಲಿನ ಪೊಲೀಸರು ಏನೂ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು.

ವಿಧಾನ ಪರಿಷತ್‌, 6 ಸ್ಥಾನ ಗೆಲ್ಲುತ್ತೇವೆ

“ಚುನಾವಣೆ ನಡೆಯುತ್ತಿರುವ ವಿಧಾನ ಪರಿಷತ್ತಿನ ಎಲ್ಲ 6 ಸ್ಥಾನಗಳಲ್ಲಿ ಗೆಲ್ಲಲು ಮಾಡಬೇಕಾದ ಪ್ರಯತ್ನದ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಇಂದು ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರದ ಪ್ರಮುಖರ ಸಭೆಯು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯಿತು” ಎಂದರು.

“ಬೂತ್‍ನಲ್ಲಿ ಮತದಾರರನ್ನು ಹುಡುಕಿ ಅವರಿಗೆ ನಮ್ಮ ಅಭ್ಯರ್ಥಿಗಳಿಗೆ ಮತ ಹಾಕಲು ವಿನಂತಿಸಬೇಕು. ವಿಧಾನಸಭಾ ಮಟ್ಟದಲ್ಲಿ ಸಭೆ ನಡೆಸಬೇಕೆಂದು ನಿರ್ಧರಿಸಲಾಗಿದೆ. ವಿಧಾನಸಭೆಯಿಂದ ಪರಿಷತ್ತಿಗೆ ಆಯ್ಕೆ ಸಂಬಂಧ ಯಾರು ಅಭ್ಯರ್ಥಿಗಳು ಎಂದು ಕೇಂದ್ರದ ನಾಯಕರು ತೀರ್ಮಾನ ಮಾಡಲಿದ್ದಾರೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...