ರಾಜ್ಯಪಾಲರು ಸರ್ಕಾರದ ಪ್ರತಿದಿನದ ತೀರ್ಮಾನಗಳ ಬಗ್ಗೆ ಮಾಹಿತಿ ಕೇಳಿದರೆ ಹೇಗೆ: ಸಚಿವ ಪರಮೇಶ್ವರ್‌ ಪ್ರಶ್ನೆ

Date:

ರಾಜ್ಯಪಾಲರದ್ದು ಅತ್ಯಂತ ಜವಾಬ್ದಾರಿಯುತ ಮತ್ತು ಗೌರವಯುತ ಸ್ಥಾನ. ಪ್ರಥಮ ಬಾರಿಗೆ ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಆಕ್ಷೇಪ ವ್ಯಕ್ತಪಡಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಂವಿಧಾನದ ಆಶಯಗಳನ್ನು ಯಾವ ರೀತಿ ರಕ್ಷಣೆ ಮಾಡಬೇಕು ಎಂಬುದು ರಾಜ್ಯಪಾಲರ ಜವಾಬ್ದಾರಿಯಾಗಿದೆ. ದಿನನಿತ್ಯ ಆಡಳಿತ ಮಾಡುವ ಅಧಿಕಾರ ಮುಖ್ಯಮಂತ್ರಿಯವರಿಗೆ ಮತ್ತು ಸರ್ಕಾರಕ್ಕೆ ಇದೆ. ಆದರೆ, ರಾಜ್ಯಪಾಲರು ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುವುದಾಗಲಿ ಅಥವಾ ಮಧ್ಯಪ್ರವೇಶಿಸುವುದನ್ನಾಗಲಿ ಎಲ್ಲಿಯೂ ಕೇಳಿಲ್ಲ‌” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“35 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಇಲ್ಲಿಯವರೆಗೆ ಅನೇಕ ರಾಜ್ಯಪಾಲರನ್ನು ಮತ್ತು ಮುಖ್ಯಮಂತ್ರಿಗಳನ್ನು ನಾವೆಲ್ಲ ನೋಡಿದ್ದೇವೆ. ಇಂತಹ ಸಂದರ್ಭ ಯಾವತ್ತು ಬಂದಿಲ್ಲ. ರಾಜ್ಯಪಾಲರು ಸರ್ಕಾರದ ಪ್ರತಿನಿತ್ಯದ ಕೆಲಸಗಳು ಮತ್ತು ತೀರ್ಮಾನಗಳ ಬಗ್ಗೆ ಮಾಹಿತಿ ಕೊಡಿ ಅಂತ ಕೇಳುತ್ತಿದ್ದಾರೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವಾಗಲಾದರೂ ಒಮ್ಮೆ ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಅಥವಾ ಕಾನೂನು ಸುವ್ಯವಸ್ಥೆಯ ವಿಚಾರ ಇದ್ದರೆ ಗೃಹ ಸಚಿವರು ಹೋಗಿ ರಾಜ್ಯಪಾಲರಿಗೆ ವಿವರಿಸುತ್ತಾರೆ. ಸಂಬಂಧಪಟ್ಟ ಸಚಿವರನ್ನು ಕರೆಸಿ ಕೇಳುವುದಕ್ಕೆ ರಾಜ್ಯಪಾಲರಿಗೆ ಹಕ್ಕು ಇದೆ. ಆದರೆ, ದಿನನಿತ್ಯ ಪತ್ರ ಬರೆದು, ಪತ್ರದ ಮುಖಾಂತರ ಮಾಹಿತಿ ಕೊಡಿ ಅಂತ ಕೇಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ” ಎಂದರು.

“ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಒಳ್ಳೆಯ ಸಂಬಂಧವಿರಬೇಕು. ಆಂದಾಗ ರಾಜ್ಯದ ಮತ್ತು ಜನಗಳ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ, ಏನು ತೀರ್ಮಾನ ತಗೆದುಕೊಳ್ಳಬೇಕು ಎಂಬುದನ್ನು ನಿರ್ಧರಿಸಲಾಗುವುದು” ಎಂದರು.

ಎಲ್ಲದಕ್ಕೂ ಉತ್ತರಿಸುವ ಅನಿವಾರ್ಯತೆ ಇಲ್ಲ

“ರಾಜ್ಯಪಾಲರಿಗೆ ಎಲ್ಲದಕ್ಕೂ ಉತ್ತರ ಕೊಡುವ ಅನಿವಾರ್ಯತೆ ಇಲ್ಲ. ಯಾವುದಕ್ಕೆ ಉತ್ತರ‌ಕೊಡಬೇಕು ಖಂಡಿತವಾಗಿಯೂ ಕೊಡುತ್ತೇವೆ. ಯಾವುದಕ್ಕೆ ಉತ್ತರಿಸುವ ಅನಿವಾರ್ಯತೆ ಇರುವುದಿಲ್ಲ, ಉತ್ತರ ಕೊಡುವುದಿಲ್ಲ. ಎಲ್ಲದಕ್ಕು ಉತ್ತರಿಸಬೇಕು ಅಂತೇನು ಇಲ್ಲ” ಎಂದು ಹೇಳಿದರು.

“ರಾಜ್ಯಪಾಲರು ಯಾವ ಉದ್ದೇಶಕ್ಕೆ ಹೀಗೆ ಮಾಡುತ್ತಿದ್ದಾರೋ ಗೊತ್ತಿಲ್ಲ. ಅವರು ಏಕಾಏಕಿಯಾಗಿ ಚುನಾಯಿತ ಜನಪ್ರತಿನಿಧಿ ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟಿಸ್ ನೀಡಿರುವುದನ್ನು ತಪ್ಪು ಅಂತ ಹೇಳಿ ಪ್ರತಿಭಟನೆ ನಡೆಸಿದ್ದೇವೆ. ಸುಮ್ಮನೇ ಪ್ರತಿಭಟನೆ‌ ನಡೆಸಿಲ್ಲ. ತನಿಖೆ‌ಯಾಗಿಲ್ಲ, ಯಾವುದೇ ವರದಿಯು ಇಲ್ಲ. ಯಾರೋ ದೂರು ನೀಡಿದರು ಎಂದ ಮಾತ್ರಕ್ಕೆ ಪರಿಶೀಲನೆ ನಡೆಸದೆಯೇ ಶೋಕಾಸ್ ನೋಟಿಸ್ ನೀಡಿರುವುದು ಸರಿಯಲ್ಲ” ಎಂದರು.

ಒಂದೇ ಮಾನದಂಡವಿಲ್ಲ

“ಮುಖ್ಯಂಮತ್ರಿಯವರಿಗೆ ಒಂದು ಮಾನದಂಡ, ಕುಮಾರಸ್ವಾಮಿಯವರಿಗೆ ಇನ್ನೊಂದು ಮಾನದಂಡ ಮಾಡಲಾಗುವುದಿಲ್ಲ. ಒಂದೇ ಮಾನದಂಡದಲ್ಲಿ ಕೆಲಸ ಮಾಡಬೇಕಾಗುತ್ತದೆ. ಇವರಿಗೆ ನೋಟಿಸ್ ನೀಡಿದ್ದೀರಿ ಎಂದಾದರೆ ಅವರಿಗೂ ನೋಟಿಸ್ ನೀಡಬೇಕು. ಈ ಬಗ್ಗೆಯೂ ರಾಜ್ಯಪಾಲರನ್ನು ಪ್ರಶ್ನಿಸಿದ್ದೇವೆ” ಎಂದು ಹೇಳಿದರು.

ಶಾಸಕ ಮುನಿರತ್ನ ಪ್ರಕರಣಸ ಕುರಿತು ಪ್ರತಿಕ್ರಿಯಿಸಿ, “ಮುನಿರತ್ನ ವಿರುದ್ಧ ದಿನಕ್ಕೊಂದು ಪ್ರಕರಣಗಳು ಹೊರಬರುತ್ತಿವೆ. ಮೇಲ್ನೋಟಕ್ಕೆ ಒಂದು ಪ್ರಕರಣ ಎಂದು ಭಾವಿಸಲಾಗಿತ್ತು. ಈಗ ಬೇರೆ ಬೇರೆ ಪ್ರಕರಣಗಳು ಸೇರ್ಪಡೆಯಾಗುತ್ತಿವೆ. ಕೂಲಂಕುಷವಾಗಿ ತನಿಖೆ ನಡೆಯಬೇಕು ಎಂಬ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಅಗತ್ಯತೆ ಮೇರೆಗೆ ಎಸ್ಐಟಿ ರಚನೆ ಮಾಡಲಾಗಿದೆ. ಎಸ್ಐಟಿಯವರು ಮುನಿರತ್ನನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...