ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Date:

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎನ್ನುತ್ತಾರೆ. ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಸೋಮವಾರ ಮಾತನಾಡಿ, “ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿ ಬಜೆಟ್‌ನಲ್ಲಿ ಆ ಬಗ್ಗೆ ಪ್ರಸ್ತಾಪವೇ ಇಲ್ಲ” ಎಂದರು.

“15ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ್ದ 5,495 ಕೋಟಿಗಳ ವಿಶೇಷ ಅನುದಾನ ಕೊಟ್ಟಿಲ್ಲ. ಪೆರಿಫೆರಲ್ ರಿಂಗ್ ರೋಡ್‌ಗೆ 3,000 ಕೋಟಿ ಕೊಡುವುದಾಗಿ ಹೇಳಿದ್ದರು. ಅದೂ ಇಲ್ಲ. 3,000 ಕೋಟಿ ಕೆರೆಗಳ ಅಭಿವೃದ್ಧಿಗೆ ಕೊಡುವುದಾಗಿ ಹೇಳಿದ್ದರು. ಅದೂ ಕೂಡ ಬಜೆಟ್‌ನಲ್ಲಿ ಇಲ್ಲ. ಇದು ಅನ್ಯಾಯವಲ್ಲವೇ? ಆಂಧ್ರ, ಬಿಹಾರ ರಾಜ್ಯಗಳಿಗೆ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ?” ಎಂದು ಕೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸ ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಕೊಟ್ಟಿಲ್ಲ. ರಾಯಚೂರಿಗೆ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಯಾವುದೇ ಪ್ರಸ್ತಾಪವಾಗಿಲ್ಲ” ಎಂದರು

“ಮೈಸೂರು ಅಥವಾ ಹಾಸನಕ್ಕೆ ಐಐಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು. ಅದೂ ಕೂಡ ಆಗಿಲ್ಲ. ವಾಸ್ತವ ಹೀಗಿದ್ದರೂ ಅನ್ಯಾಯವಾಗಿಲ್ಲ ಎನ್ನುತ್ತಾರೆ. ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು, ಈಗಲೂ ಸುಳ್ಳು ಹೇಳಿದ್ದಾರೆ ಅಷ್ಟೇ” ಎಂದು ಕುಟುಕಿದರು.

ಕರ್ನಾಟಕ ಭ್ರಷ್ಟ ರಾಜ್ಯವಲ್ಲ

“ಕರ್ನಾಟಕದ ಸಂಸದರು ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಬೇಕು. ಕರ್ನಾಟಕ ಭ್ರಷ್ಟ ರಾಜ್ಯ ಎಂದು ಅವರು ಮಸಿ ಬಳಿಯುತ್ತಿದ್ದಾರೆ. ಕರ್ನಾಟಕ ಭ್ರಷ್ಟ ರಾಜ್ಯವಲ್ಲ. ನಾವು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತೇವೆ ಎಂದಿದ್ದೇವೆ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ಕಡಿಮೆಯಾಗುತ್ತಿದೆ” ಎಂದು ಹೇಳಿದರು.

ಬಿಜೆಪಿ ಪಾದಯಾತ್ರೆ: ರಾಜಕೀಯ ಅಷ್ಟೇ

ವಾಲ್ಮೀಕಿ ಮತ್ತು ಮುಡಾ ಹಗರಣದ ಬಗ್ಗೆ ಪ್ರತಿಭಟಿಸಿ, “ಬಿಜೆಪಿಯವರು ಪಾದಯಾತ್ರೆ ಮಾಡಲಿ. ನಾವೂ ಕೂಡ ರಾಜಕೀಯವಾಗಿ ವಿರೋಧಿಸುತ್ತೇವೆ. ವಾಲ್ಮೀಕಿ ಹಗರಣದಲ್ಲಿ ನಾವು 84.63 ಕೋಟಿ ಹಗರಣವಾಗಿದೆ ಎನ್ನುವುದು ನಿಜ. ಎಸ್.ಐ.ಟಿ ರಚನೆಯಾಗಿದ್ದು, ತನಿಖೆಯಾಗುತ್ತಿದೆ. ಅವರೂ ಕೂಡ ಸಿಬಿಐ, ಇ.ಡಿ ಕಡೆಯಿಂದ ತನಿಖೆ ಮಾಡಿಸುತ್ತಿದ್ದಾರೆ” ಎಂದರು.

ಬಿಜೆಪಿ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ?

ಬಿಜೆಪಿ ಆಡಳಿತದ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ? ಅದಕ್ಕಾಗಿಯೇ 21 ಹಗರಣಗಳನ್ನು ಪಟ್ಟಿ ಮಾಡಿ ಹೇಳಿದ್ದೇನೆ. ಕೆಲವು ಪ್ರಕರಣಗಳ ತನಿಖೆ ನಡೆಯುತ್ತಿದೆ. ರಾಘವೇಂದ್ರ ಸಹಕಾರಿ ಬ್ಯಾಂಕ್ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಇಂದಿನವರೆಗೂ ಸಿಬಿಐ ತನಿಖೆ ಪೂರ್ಣಗೊಳಿಸಿಲ್ಲ. ಅವರ ಅವಧಿಯಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ಕೊಟ್ಟಿಲ್ಲ” ಎಂದು ಕಿಡಿಕಾರಿದರು.

ದೆಹಲಿ ಪ್ರವಾಸ

“ಸರ್ಕಾರ ಹಾಗೂ ಪಕ್ಷದ ಬಗ್ಗೆ ಚರ್ಚೆ ಮಾಡಲು ವರಿಷ್ಠರು ಕರೆದಿದ್ದಾರೆ. ಹಾಗಾಗಿ ನಾನೂ ಮತ್ತು ಉಪಮುಖ್ಯಮಂತ್ರಿಗಳು ದೆಹಲಿಗೆ ಭೇಟಿ ನೀಡುತ್ತಿದ್ದೇವೆ” ಎಂದು ಇದೇ ವೇಳೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...