ಕ್ರಿಕೆಟ್‌ನಲ್ಲಿ ನಿಮ್ಮ ಪುತ್ರ ಎಷ್ಟು ರನ್ ಸ್ಕೋರ್‌ ಮಾಡಿದ್ದಾರೆ? ಅಮಿತ್ ಶಾಗೆ ಸ್ಟಾಲಿನ್‌ ಪುತ್ರ ತಿರುಗೇಟು

Date:

ಡಿಎಂಕೆಯನ್ನು ವಂಶ ರಾಜಕಾರಣ ಪಕ್ಷ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ತಿರುಗೇಟು ನೀಡಿದ್ದಾರೆ. 

ಚೆನ್ನೈನಲ್ಲಿ ಡಿಎಂಕೆ ಯುವ ಘಟಕದ ನೂತನ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಉದಯನಿಧಿ, “ನಾನು ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕನಾಗಿ ಮಂತ್ರಿ ಸ್ಥಾನ ಪಡೆದಿದ್ದೇನೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿಯಾಗಿರುವ ನಿಮ್ಮ ಪುತ್ರ ಎಷ್ಟು ಕ್ರಿಕೆಟ್ ಪಂದ್ಯಗಳನ್ನು ಆಡಿ ಎಷ್ಟು ರನ್ ಗಳಿಸಿದ್ದಾರೆ” ಎಂದು ಉಯನಿಧಿ ಸ್ಟಾಲಿನ್ ಪ್ರಶ್ನಿಸಿದ್ದಾರೆ.

“ನಮ್ಮ ಪಕ್ಷದ ನಾಯಕರು ನನ್ನನ್ನು ಮುಖ್ಯಮಂತ್ರಿ ಮಾಡುವ ಗುರಿ ಹೊಂದಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಆದರೆ, ನಾನು ಅಮಿತ್ ಶಾ ಅವರನ್ನು ಕೇಳಲು ಬಯಸುತ್ತೇನೆ, ನಿಮ್ಮ ಮಗ ಬಿಸಿಸಿಐ ಕಾರ್ಯದರ್ಶಿಯಾದದ್ದು ಹೇಗೆ?” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು 2014ರಿಂದ ನಿಮ್ಮ ಮಗ ಜಯ್ ಶಾ ಜೈನ್ ಕುಸುಮ್ ಫಿನ್‌ಸರ್ವ್ ಎಂಬ ಕಂಪನಿಯನ್ನು ನಡೆಸುತ್ತಿದ್ದಾರೆ. ಆಗ ಕುಸುಮ್ ಫಿನ್‌ಸರ್ವ್‌ನ ಮೌಲ್ಯವು ಕೇವಲ 75 ಲಕ್ಷ ರೂ. ಇತ್ತು. ಈಗ ಅದರ ಮೌಲ್ಯ ಎಷ್ಟಾಗಿದೆ ಎಂದು ತಿಳಿಸುವಿರಾ? ಎಂದು ಉದಯನಿಧಿ ಸ್ಟಾಲಿನ್ ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಮಧ್ಯ ಪ್ರದೇಶದಲ್ಲಿ ಅತಿ ಹೆಚ್ಚು ಹುಲಿಗಳು; ಕರ್ನಾಟಕಕ್ಕೆ ಎರಡನೇ ಸ್ಥಾನ

ಶುಕ್ರವಾರ (ಜುಲೈ 28) ರಾಮೇಶ್ವರಂನಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರ ಪಾದಯಾತ್ರೆಗೆ ಚಾಲನೆ ನೀಡಿದ ಅಮಿತ್ ಶಾ ಅವರು ಡಿಎಂಕೆಯ ವಂಶ ರಾಜಕಾರಣದ ಬಗ್ಗೆ ಮಾತನಾಡಿದ್ದರು. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಡಿಎಂಕೆ ಮಿತ್ರಪಕ್ಷಗಳು ವಂಶ ರಾಜಕಾರಣಕ್ಕೆ ಉತ್ತೇಜಿಸುತ್ತಿದ್ದಾರೆ. ಅವರದು ವಂಶ ರಾಜಕೀಯ ಪಕ್ಷ ಎಂದು ಆರೋಪಿಸಿದ್ದರು.

ರಾಜ್ಯ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರು ತಮಿಳುನಾಡಿನಲ್ಲಿ ಎನ್ ಮಣ್, ಎನ್ ಮಕ್ಕಳ್(ನನ್ನ ನೆಲ, ನನ್ನ ಜನ) ಅಭಿಯಾನ ಆರಂಭಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಅಮಿತ್‌ ಶಾ ಚಾಲನೆ ನೀಡಿದ್ದರು.

5 ಹಂತದಲ್ಲಿ 1774 ಕಿಲೋ ಮೀಟರ್‌ನ ಈ ಪಾದಯಾತ್ರೆಯು ತಮಿಳುನಾಡಿನ 234 ವಿಧಾನಸಭೆ, 39 ಲೋಕಸಭೆ ಕ್ಷೇತ್ರಗಳನ್ನು ಒಳಗೊಳ್ಳಲಿದೆ. 2024ರ ಜನವರಿ 11ರಂದು ಯಾತ್ರೆ ಅಂತ್ಯಗೊಳ್ಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...