ಪ್ರಧಾನಿ ಮೋದಿ ಅಮೆರಿಕ ಭೇಟಿಯಿಂದ ಗುಜರಾತಿಗೇ ಹೆಚ್ಚು ಲಾಭವಾಯಿತೇ?

Date:

  • ಟಿಎಂಸಿ ರಾಷ್ಟ್ರೀಯ ವಕ್ತಾರ ಸಾಕೇತ್ ಗೋಖಲೆ ಆರೋಪ
  • ಮೋದಿ ಭಾರತದ 27 ರಾಜ್ಯಗಳನ್ನು ಏಕೆ ನಿರ್ಲಕ್ಷಿಸಿದ್ದಾರೆ?

ಕಳೆದ ವಾರ ನಾಲ್ಕು ದಿನ ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರು, ತಮ್ಮ ತವರು ರಾಜ್ಯ ಗುಜರಾತಿಗೇ ಹೆಚ್ಚು ಲಾಭವಾಗುವಂತೆ ಮಾಡಿದ್ದಾರೆ ಎಂಬ ಅಂಶ ಇದೀಗ ಬಹಿರಂಗಗೊಂಡಿದೆ.

ದೇಶದ ಪ್ರಧಾನಿ ಎಂಬ ನೆಲೆಯಲ್ಲಿ ಮೋದಿಯವರು ಅಮೆರಿಕ ಪ್ರವಾಸ ಮಾಡಿದ್ದರೂ, ಗುಜರಾತಿಗೇ ಹೆಚ್ಚು ಲಾಭವಾಗುವಂತೆ ಮಾಡಿದ್ದಾರೆ ಎಂಬ ಅಂಶವನ್ನು ಟಿಎಂಸಿ ರಾಷ್ಟ್ರೀಯ ವಕ್ತಾರ ಸಾಕೇತ್ ಗೋಖಲೆ ಟ್ವಿಟರ್‍‌ನಲ್ಲಿ ಬಹಿರಂಗಪಡಿಸಿದ್ದಾರೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಸಾಕೇತ್ ಗೋಖಲೆ, ಒಂದೊಂದೇ ವಿವರಗಳನ್ನು ಬಹಿರಂಗಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದಲ್ಲಿ ಹೂಡಿಕೆಯನ್ನು ಬಯಸುತ್ತಿರುವ ಹಲವಾರು ಕಾರ್ಪೊರೇಟ್‌ ಸಂಸ್ಥೆಗಳ ಮುಖ್ಯಸ್ಥರು, ಮೋದಿ ಅಮೆರಿಕ ಭೇಟಿ ವೇಳೆ ನಡೆದಿದ್ದ ಔತಣಕೂಟದಲ್ಲಿ ಭಾಗವಹಿಸಿದ್ದರು. ಇದರಲ್ಲಿ ಗೂಗಲ್ ಸಿಇಓ ಸುಂದರ್ ಪಿಚೈ, ಮೈಕ್ರೋಸಾಫ್ಟ್ ಸಿಇಓ ಸತ್ಯಾ ನಾದೆಲ್ಲ ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು.

ಮೋದಿಯವರು ಗುಜರಾತಿಗೇ ಹೆಚ್ಚು ಲಾಭವಾಗುವಂತೆ ಮಾಡಿದ್ದಾರೆ ಎಂದಿರುವ ಟಿಎಂಸಿ ವಕ್ತಾರ, ಗೂಗಲ್ ಮತ್ತು ಮೈಕ್ರಾನ್ ಸಂಸ್ಥೆ ಕೂಡ ಗುಜರಾತಿನಲ್ಲಿ ಬೃಹತ್ ಹೂಡಿಕೆ ಮಾಡಿದೆ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

ಅಲ್ಲದೇ, ಗುಜರಾತ್‌ಗೆ ಮಾತ್ರ ವಿದೇಶಿ ಹೂಡಿಕೆಯನ್ನು ತರುತ್ತಿರುವ ಪ್ರಧಾನಿ ಮೋದಿ ಭಾರತದ 27 ರಾಜ್ಯಗಳನ್ನು ಏಕೆ ನಿರ್ಲಕ್ಷಿಸುತ್ತಿದ್ದಾರೆ? ಒಂಭತ್ತು ವರ್ಷಗಳಾದರೂ ಮೋದಿಯವರು ತಾವು ಭಾರತದ ಪ್ರಧಾನಿಯೇ ಹೊರತು ಗುಜರಾತಿನ ಪ್ರಧಾನಿ ಅಲ್ಲ ಎಂಬುದನ್ನು ಅರಿತುಕೊಂಡಿಲ್ಲವೇ? ಇತರ ರಾಜ್ಯಗಳ ಜನರು ಉದ್ಯೋಗಕ್ಕೆ ಅರ್ಹರಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸಾಕೇತ್ ಗೋಖಲೆ ನೀಡಿರುವ ಎಲ್ಲ ವಿವರಗಳು ಇಲ್ಲಿವೆ.

ಗುಜರಾತ್‌ನ ಗಾಂಧಿನಗರದಲ್ಲಿರುವ ಗುಜರಾತ್ ಇಂಟರ್‌ನ್ಯಾಶನಲ್ ಫೈನಾನ್ಸ್ ಟೆಕ್-ಸಿಟಿಯಲ್ಲಿ ಜಾಗತಿಕ ಡಿಜಿಟಲ್ ಫಿನ್‌ಟೆಕ್ ಕಾರ್ಯಾಚರಣೆಯನ್ನು ಪ್ರಾರಂಭಿಸುವುದಾಗಿ ಗೂಗಲ್ ಘೋಷಿಸಿದೆ. ಜೂನ್ 3 ರಂದು, ಸಿಂಗಾಪುರ್ ಎಕ್ಸ್‌ಚೇಂಜ್ ಎಲ್ಲ ನಿಫ್ಟಿ ಉತ್ಪನ್ನ ವಹಿವಾಟುಗಳನ್ನು ಸಿಂಗಾಪುರದಿಂದ ಗುಜರಾತ್‌ನ ಟೆಕ್-ಸಿಟಿ ನಗರಕ್ಕೆ ಸ್ಥಳಾಂತರಿಸಿದೆ.

ಗುಜರಾತ್‌ನ ಅಹಮದಾಬಾದ್ ಜಿಲ್ಲೆಯ ಸಾನಂದ್‌ನಲ್ಲಿ ಮೈಕ್ರೋನ್ 825 ಮಿಲಿಯನ್ ಡಾಲರ್‌ಗಳನ್ನು ಸೌಲಭ್ಯದಲ್ಲಿ ಹೂಡಿಕೆ ಮಾಡುವುದಾಗಿ ಘೋಷಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...