ಕರ್ನಾಟಕದಿಂದ ಸೋನಿಯಾ ಗಾಂಧಿ ರಾಜ್ಯಸಭೆಗೆ ಸ್ಪರ್ಧೆ?

Date:

ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಎಂಟು ತಿಂಗಳುಗಳು ಬಾಕಿ ಉಳಿದಿದ್ದು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಈ ಬಾರಿ ರಾಜ್ಯದಿಂದ ಸಂಸತ್ತಿನ ಮೇಲ್ಮನೆ ಪ್ರವೇಶಿಸುವ ಸಾಧ್ಯತೆಯಿದೆ.

ಕರ್ನಾಟಕದ ನಾಲ್ವರು ರಾಜ್ಯಸಭಾ ಸದಸ್ಯರಾದ ಜಿ ಸಿ ಚಂದ್ರಶೇಖರ್, ಸೈಯದ್ ನಾಸೀರ್ ಹುಸೇನ್, ಡಾ. ಎಲ್ ಹನುಮಂತಯ್ಯ ಮತ್ತು ಬಿಜೆಪಿಯ ರಾಜೀವ್ ಚಂದ್ರಶೇಖರ್ ಅವರ ಅವಧಿ ಏಪ್ರಿಲ್ 2, 2024 ರಂದು ಕೊನೆಗೊಳ್ಳುತ್ತಿದೆ. ಪ್ರಸ್ತುತ ವಿಧಾನಸಭಾ ಸದಸ್ಯರ ಬಲಾಬಲದ ಪ್ರಕಾರ, ಕಾಂಗ್ರೆಸ್ ನಾಲ್ಕರಲ್ಲಿ ಮೂರು ಸ್ಥಾನಗಳನ್ನು ಸುಲಭವಾಗಿ ಗೆಲ್ಲಲಿದೆ.  

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ನಾಸೀರ್‌ ಹುಸೇನ್ ಅವರಿಗೆ ಮತ್ತೊಂದು ಅವಕಾಶ ನೀಡಲು ಉತ್ಸುಕತೆ ತೋರಿದ್ದಾರೆ. ಸೋನಿಯಾ ಗಾಂಧಿ ಜೊತೆ ರಾಜ್ಯದಿಂದ ಸೈಯದ್ ನಾಸೀರ್ ಹುಸೇನ್ ಮತ್ತು ಕಾಂಗ್ರೆಸ್‌ ವಕ್ತಾರೆ ಹಾಗೂ ಉತ್ತರ ಪ್ರದೇಶ ಮೂಲದ ಸುಪ್ರಿಯಾ ಶ್ರೀನಾಥೆ ಅವರು ಮೇಲ್ಮನೆ ಪ್ರವೇಶಿಸಬಹುದು ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿಗೆ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸಲು ಸೋನಿಯಾ ಅವರು ಬೆಂಗಳೂರಿಗೆ ಆಗಮಿಸಿದ್ದ ವೇಳೆ, ಸಿಎಂ ಸಿದ್ದರಾಮಯ್ಯ ಅವರು ರಾಜ್ಯಸಭೆ ಸ್ಥಾನದ ಆಹ್ವಾನ ನೀಡಿದ್ದರು ಎನ್ನಲಾಗಿದೆ. ಇದರ ಬಗ್ಗೆ ಸೋನಿಯಾ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ ಅವರು ಮೇಲ್ಮನೆ ಪ್ರವೇಶಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ | ಆಕಸ್ಮಿಕವಾಗಿ ಕೈ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಮುಖಕ್ಕೆ ಮಲ ಬಳಿದ ಸವರ್ಣೀಯ ಯುವಕ

ಆರೋಗ್ಯ ಹಾಗೂ 10 ಜನಪಥ್ ಕಾರಣ

2019ರ ಬಳಿಕ ಸೋನಿಯಾ ಗಾಂಧಿ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸುವುದು ಕಷ್ಟವಾಗಬಹುದು. ಇದರಿಂದ ರಾಜ್ಯಸಭೆಯಿಂದ ಆಯ್ಕೆಯಾಗಲು ಚಿಂತನೆ ನಡೆಸುತ್ತಿದ್ದಾರೆ. ಅದಲ್ಲದೆ 1989ರಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾಗ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು 10 ಜನಪಥ್ ಮಾರ್ಗದ ರಸ್ತೆ ನಿವಾಸಕ್ಕೆ ಸ್ಥಳಾಂತರವಾಗಿದ್ದರು. ಅಂದಿನಿಂದಲೂ ಸೋನಿಯಾ ಅವರು ಅಲ್ಲಿಯ ವಾಸವಿದ್ದಾರೆ. ರಾಜ್ಯಸಭೆಯಿಂದ ಆಯ್ಕೆಯಾದರೆ ಅವರು ಈ ನಿವಾಸವನ್ನು ಉಳಿಸಿಕೊಳ್ಳಲು ಕಾರಣವಾಗಬಹುದು.

ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ದೆಹಲಿಯ ತುಘಲಕ್ ಕ್ರೆಸೆಂಟ್‌ನ ಸರ್ಕಾರಿ ಬಂಗಲೆಯನ್ನು ತೆರವು ಮಾಡಿದ್ದರು. ಈಗ ಅವರು ತಾಯಿ ಸೋನಿಯಾ ನಿವಾಸದಲ್ಲಿಯೇ ವಾಸವಿದ್ದಾರೆ.

ಪ್ರಸ್ತುತ ಅವಧಿಯನ್ನು ಒಳಗೊಂಡು ರಾಯ್‌ಬರೇಲಿಯಿಂದ ಸೋನಿಯಾ ಅವರು ಸತತ ಐದು ಬಾರಿಯಿಂದ ಸಂಸದೆಯಾಗಿದ್ದಾರೆ. ಆದರೆ 2019ರ ನಂತರ ಅನಾರೋಗ್ಯ ಮತ್ತು ಮುಂತಾದ ಕಾರಣಗಳಿಂದ ಅವರು ಕ್ಷೇತ್ರಕ್ಕೆ ಹೆಚ್ಚು ಭೇಟಿ ನೀಡುತ್ತಿಲ್ಲ. ಇದು ಕೂಡ ರಾಜ್ಯಸಭೆಗೆ ಸ್ಪರ್ಧಿಸಲು ಪ್ರಮುಖ ಕಾರಣವಾಗಿದೆ.

ಒಂದು ವೇಳೆ ಪ್ರಿಯಾಂಕಾ ಗಾಂಧಿ ಅವರು 2024ರ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾದರೂ, ಮೊದಲ ಬಾರಿಗೆ ಸಂಸದರಾಗುವ ಕಾರಣ ಅವರಿಗೆ 10 ಜನಪಥ್ ನಿವಾಸದಲ್ಲಿ ಉಳಿದುಕೊಳ್ಳುವ ಅವಕಾಶ ಸಿಗುವುದಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...